ಉಡುಪಿ | ದಲಿತರು ಶ್ರೀರಾಮನ ಮಂತ್ರಾಕ್ಷತೆಯನ್ನು ನಿರಾಕರಿಸಿ: ಜಯನ್‍ ಮಲ್ಪೆ

Date:

ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆಗೆ ರಾಷ್ಟ್ರಪತಿ ದಲಿತೆ ಎಂಬ ಎಕೈಕ ಕಾರಣಕ್ಕೆ ದೂರವಿಟ್ಟವರು, ಧಾರ್ಮಿಕತೆಯೆಂದು ಜಾತೀಯತೆ ಮಾಡುವವರು ಕೇವಲ ಓಟಿಗಾಗಿ ದಲಿತರ ಮನೆಗಳಿಗೆ ಶ್ರೀರಾಮನ ಮಂತ್ರಾಕ್ಷತೆ ತಂದರೆ, ಅದನ್ನು ದಲಿತರು ಸ್ವೀಕರಿಸಬಾರದು ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಕರೆ ನೀಡಿದ್ದಾರೆ.

ಉಡುಪಿಯ ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್ಲಿ ಅಂಬೇಡ್ಕರ್ ಯುವಸೇನೆ ಆಯೋಜಿಸಿದ್ದ ಸಾವಿತ್ರಿ ಬಾಯಿ ಫುಲೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಹಿಂದು ಧರ್ಮದ ದೇವರುಗಳ ಕೊಳಕನ್ನು ಎತ್ತಿ ತೋರಿಸುವ ಕೆಲಸವನ್ನು ಅಂಬೇಡ್ಕರ್ ಮಾಡಿದ್ದಾರೆ. ರಾಮಾಯಾಣದ ಮೌಲ್ಯಗಳು ನಮ್ಮ ಸಾಮಾಜಿಕ ಸಂಬಂಧಗಳ ಮೇಲೆ ಪ್ರಭಾವ ಬೀರುತ್ತಿದೆ ಎಂದ ಜಯನ್ ಮಲ್ಪೆ, ರಾಜಕೀಯ ಆದರ್ಶಗಳನ್ನು ರೂಪಿಸಿದೆ. ವರದಕ್ಷಿಣೆ ತರದ ಹೆಣ್ಣಿಗೆ ಬೆಂಕಿ, ಸ್ವಾತಂತ್ರ್ಯ ಬಯಸುವ ದಲಿತರಿಗೆ ಹೇಲು ತಿನ್ನಿಸುವುದು, ಕುಡಿಯಲೂ ನೀರು ಕೊಡದೆ, ದೇವರನ್ನೂ ನೋಡಲು ಬಿಡದೆ, ಮೂಕ ಹೆಣ್ಣುಗಳ ಮೇಲಿನ ಅತ್ಯಾಚಾರಗಳೆಲ್ಲವೂ ರಾಮಾಯಣದ ಸ್ಪೂರ್ತಿಯನ್ನು ಪಡೆದಿದೆ” ಎಂದರು.

“ನಿಜವಾಗಿ ಭಾರತದ ದಲಿತ ಹೆಣ್ಣುಮಕ್ಕಳ ಭವಿಷ್ಯವನ್ನು ಶಿಕ್ಷಣದ ಮೂಲಕ ಬೆಳಕಿಗೆ ತಂದು ಹೊಸ ಇತಿಹಾಸ ಸೃಷ್ಟಿಸಿದ್ದ ಅಕ್ಷರ ಮಾತೆ ಸಾವಿತ್ರಿ ಬಾಯಿ ಫುಲೆ ದಲಿತರ ಪಾಲಿನ ನಂದಾದೀಪ” ಎಂದು ಜಯನ್ ಮಲ್ಪೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಸಂಪ್ರದಾಯವಾದಿಗಳು, ಮನುವಾದಿಗಳು ಹುಟ್ಟುಹಾಕಿದ ದೇವರು, ಧರ್ಮ, ಮೂಢನಂಬಿಕೆ, ಅಸಮಾನತೆ, ಅಸ್ಪøಶ್ಯತೆಯಿಂದ ತಳ ಸಮುದಾಯಗಳು ದಬ್ಬಾಳಿಕೆ, ದೌರ್ಜನ್ಯಕ್ಕೆ ಒಳಗಾಗಿದ್ದ ಕಾಲಘಟ್ಟದಲ್ಲಿ ಸಾವಿತ್ರಿ ಬಾಯಿ ಫುಲೆಯವರ ಗಟ್ಟಿತನವೇ ನಮಗೆಲ್ಲ ಆದರ್ಶವಾಗಬೇಕು” ಎಂದರು.

ಅಂಬೇಡ್ಕರ್ ಯುವಸೇನೆಯ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಶಶಿಕಲಾ ತೊಟ್ಟಂ ಮಾತನಾಡಿ, “ದಲಿತರು, ಶೂದ್ರರು ಮತ್ತು ಮೇಲ್ಜಾತಿ ಸೇರಿದಂತೆ ಎಲ್ಲಾ ಮಹಿಳೆಯರಿಗೆ ಕಠಿಣ ಸಾಮಾಜಿಕ ಪರಿಸ್ಥಿತಿಯಲ್ಲಿ ಅಪಾರ ಕಷ್ಟಗಳನ್ನು ಎದುರಿಸಿ ಅಕ್ಷರ ಕಲಿಸಿದ ಸಾವಿತ್ರಿ ಬಾಯಿ ಸಾಧನೆ ಬಗ್ಗೆ ನಮ್ಮ ಸಮಾಜದಲ್ಲಿ ಹೆಚ್ಚು ಪ್ರಚಾರ ಸಿಕ್ಕಿಲ್ಲ” ಎಂದರು.

ಹಿರಿಯ ದಲಿತ ಮುಖಂಡ ಗಣೇಶ್ ನೆರ್ಗಿ ಮಾತನಾಡಿ, “ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ಅಕ್ಷರಶ ಸತ್ಯ. ಒಬ್ಬ ಮಹಿಳೆ ಅಕ್ಷರಸ್ಥಳಾದರೆ ಇಡೀ ಕುಟುಂಬವೇ ಅಕ್ಷರಸ್ಥ ಕುಟುಂಬವಾಗುತ್ತದೆ ಸಾವಿತ್ರಿ ಬಾಯಿ ಫುಲೆಯವರ ಸಾಧನೆ ಭಾರತದ ಮಹಿಳೆಯರ ಶಿಕ್ಷಣಕ್ಕೆ ಹಿಡಿದ ಕನ್ನಡಿಯಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್, ಸಂತೋಷ್ ಕಪ್ಪೆಟ್ಟು, ರವಿರಾಜ್ ಲಕ್ಷ್ಮೀನಗರ, ನಾಗೇಶ್ ನೆರ್ಗಿ, ವಸಂತ ಅಂಬಲಪಾಡಿ, ಅರುಣ್ ಸಲ್ಯಾನ್, ಭಗವಾನ್ ಮಲ್ಪೆ, ದೀಪಕ್ ಕೊಡವೂರು, ನವೀನ್ ಬನ್ನಂಜೆ, ಪ್ರಸಾದ್ ಮಲ್ಪೆ,ರತನ್ ನೆರ್ಗಿ, ಕೃಷ್ಣ ಶ್ರೀಯಾನ್, ಪ್ರಶಾಂತ್ ಕಾಂಚನ್ ನೆರ್ಗಿ, ಕಲಾವತಿ ತೊಟ್ಟಂ, ಸಂಕಿ ತೊಟ್ಟಂ, ಸಂಧ್ಯಾ ಕೃಷ್ಣ ಶ್ರೀಯಾನ್, ಹರೀಶ್ ನೆರ್ಗಿ, ಮುಂತಾದವರು ಭಾಗವಹಿಸಿದ್ದರು. ಸುಕೇಶ್ ಪುತ್ತೂರು ಸ್ವಾಗತಿಸಿದರು., ದಯಾಕರ ಮಲ್ಪೆ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...