ಉಡುಪಿ | ಪ್ರೀತಿ ತಿಳಿಸಲು ಯೇಸು ಹುಟ್ಟಿಬಂದರು: ಡಾ. ಜೆರಾಲ್ಡ್ ಐಸಾಕ್ ಲೋಬೊ

Date:

ಹಿಂಸೆಗೆ ಉತ್ತರವಾಗಿ ಪ್ರೀತಿಯನ್ನು ತಿಳಿಸಲು ಯೇಸು ಕ್ರಿಸ್ತರು ಧರೆಯಲ್ಲಿ ಹುಟ್ಟಿಬಂದರು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

ಉಡುಪಿಯಲ್ಲಿ ಧರ್ಮಪ್ರಾಂತ್ಯದ ವತಿಯಿಂದ ಆಯೋಜಿಸಿದ್ದ ‘ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟ’ದಲ್ಲಿ ಅವರು ಮಾತನಾಡಿದರು. “ಇಡೀ ಮನುಕುಲ ಜಾತಿ ಮತಗ ಬೇಧವಿಲ್ಲದೆ ಆಚರಿಸುವ ಹಬ್ಬ ಕ್ರಿಸ್ತ ಜಯಂತಿ. ಇದರ ಕೇಂದ್ರ ವ್ಯಕ್ತಿ ಯೇಸು ಆಗಿದ್ದಾರೆ. ಯೇಸು ಅವರು ಈ ಜಗತ್ತಿಗೆ ನೀಡಿದ ಕಾಣಿಕೆ ಶಾಂತಿ ಸಮಾಧಾನ. ಆದರೆ ಇಂದು ಸಮಾಜದಲ್ಲಿ ಅಶಾಂತಿ, ಅಸಮಾನತೆ, ಅನ್ಯಾಯ, ಬಡತನ, ನಿರುದ್ಯೋಗ, ಹಿಂಸೆ ಶೋಷಣೆ, ರೋಗರುಜಿ, ದ್ವೇಷ ಯುದ್ದ, ಅತ್ಯಾಚಾರ, ಮತಾಂದತೆ, ಪರಮತ ಅಸಹಿಷ್ಣುತೆ ಇತ್ಯಾದಿಗಳನ್ನು ಕಾಣುತ್ತಿದ್ದು ಇವುಗಳನ್ನು ಗೆಲ್ಲಲು ಪ್ರೀತಿಯಿಂದ ಮಾತ್ರ ಸಾಧ್ಯ. ಶಾಂತಿ ಇದ್ದಲ್ಲಿ ಮಾತ್ರ ಭಾವೈಕ್ಯತೆ ಸಾಮರಸ್ಯ, ಸಹಬಾಳ್ವೆ, ಸಮಾಧಾನ ಸಾಧ್ಯ ಪ್ರತಿಯೋಬ್ಬರು ಶಾಂತಿಯ ದೂತರಾದಾಗ ಶಾಂತಿ ಪ್ರೀತಿಯ ಭಾರತವನ್ನು ಕಟ್ಟಲು ಸಾಧ್ಯ” ಎಂದರು.

ಕಾರ್ಯಕ್ರಮದಲ್ಲಿ ರಾಘವೇಂದ್ರ ನಾಯಕ್, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಹೆಚ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಶುಭ ಹಾರೈಸಿದರು. 2023ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪತ್ರಕರ್ತ ಹರೀಶ್ ಸುವರ್ಣ ಬಲಾಯಿಪಾದೆ ಅವರಿಗೆ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ಡಾ|ರೋಶನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ, ಧರ್ಮಗುರುಗಳಾದ ವಂ|ವಲೇರಿಯನ್ ಮೆಂಡೊನ್ಸಾ, ವಂ|ಚಾರ್ಲ್ಸ್ ಮಿನೇಜಸ್, ಅನುಗ್ರಹ ಪಾಲನಾ ಕೇಂದ್ರದ ನಿರ್ದೇಶಕ ವಂ|ವಿನ್ಸೆಂಟ್ ಕ್ರಾಸ್ತಾ ಉಪಸ್ಥಿತರಿದ್ದರು. ಉಜ್ವಾಡ್ ಪತ್ರಿಕೆಯ ಸಂಪಾದಕರಾದ ವಂ|ಆಲ್ವಿನ್ ಸಿಕ್ವೇರಾ ಸ್ವಾಗತಿಸಿ, ಮಾಧ್ಯಮ ಸಂಯೋಜಕರಾದ ಮೈಕಲ್ ರೊಡ್ರಿಗಸ್ ವಂದಿಸಿದರು. ವಂ|ಸಿರಿಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...