ಉಡುಪಿ | ಹಿಂದೂ ಪದ್ಧತಿಯೇ ಜಾತೀಯತೆ, ಅಸ್ಪೃಶ್ಯತೆಗೆ ಮೂಲ: ಶ್ಯಾಮರಾಜ್ ಬಿರ್ತಿ

Date:

ಹಿಂದೂ ಧರ್ಮದ ಶ್ರೇಣೀಕೃತ ವ್ಯವಸ್ಥೆಯೇ ಜಾತೀಯತೆಗೆ ಮೂಲವಾಗಿದ್ದು, ಇದೇ ವ್ಯವಸ್ಥೆ ಅಸ್ಪೃಶ್ಯತೆಗೆ ಕಾರಣವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಅಭಿಪ್ರಾಯಪಟ್ಟರು.

ಅವರು ಹೆಬ್ರಿಯ ದೋರಿಯಾಲ್‌ನಲ್ಲಿ ಮಹಾಡ್ ಚಳುವಳಿಯ ನೆನಪಿನಲ್ಲಿ ಆಯೋಜಿಸಲಾದ “ಮಹಾಡ್ ಕೆರೆ ಚಳುವಳಿ ಕಥಾ ಕಥನಾ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಹಾಡ್ ಚಳುವಳಿಯಲ್ಲಿ ಚೌದಾರ್ ಕೆರೆಯ ನೀರನ್ನು ಸ್ಪರ್ಶಿಸಿ ಕುಡಿದ ಘಟನೆ ದಲಿತರ ಪ್ರಥಮ ಸ್ವಾತಂತ್ರ್ಯ ಹೋರಾಟವಾಗಿದ್ದು, ಅಸ್ಪೃಶ್ಯತೆ ವಿರುದ್ಧದ ಬೃಹತ್ ಪ್ರತಿಭಟನೆ ಎಂದು ಹೇಳಿದರು.

Untitled design 20260315 161436 0000
ಜಾಹಿರಾತು

ಮನುಷ್ಯರನ್ನು ಹುಟ್ಟಿನಿಂದಲೇ ಅಸ್ಪೃಶ್ಯರೆಂದು ಗುರುತಿಸುವ ಧಾರ್ಮಿಕ ಮನೋಭಾವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ಧರ್ಮದ ಹೆಸರಿನಲ್ಲಿ ಮತಗಳಿಗಾಗಿ ದಲಿತರನ್ನು ಬಳಸಿಕೊಳ್ಳುವ ಶಕ್ತಿಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಅವರು ಎಚ್ಚರಿಸಿದರು. ಇತ್ತೀಚೆಗೆ ಹುಬ್ಬಳ್ಳಿ ಸಮೀಪ ನಡೆದ ಗರ್ಭಿಣಿ ಮಹಿಳೆಯ ಹತ್ಯೆ ಘಟನೆ ಜಾತೀಯ ಮನೋಭಾವದ ಕ್ರೂರತೆಯ ಉದಾಹರಣೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರ್ ಮಾತನಾಡಿ, 1927ರ ಮಾರ್ಚ್ 20ರಂದು ಮಹಾರಾಷ್ಟ್ರದ ಮಹಾಡ್‌ನಲ್ಲಿ ನಡೆದ ಚೌದಾರ್ ಕೆರೆ ಚಳುವಳಿ ಐತಿಹಾಸಿಕವಾಗಿದ್ದು, ಅಸ್ಪೃಶ್ಯತೆ ವಿರುದ್ಧದ ಸ್ವಾಭಿಮಾನ ಹೋರಾಟದ ಸಂಕೇತವಾಗಿದೆ ಎಂದು ಹೇಳಿದರು. ಈ ಚಳುವಳಿಯನ್ನು ನೆನೆದು ಆಚರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ವಿಶೇಷವಾಗಿ ಸಮುದಾಯದ ವಸತಿ ಪ್ರದೇಶಗಳಲ್ಲಿ ಆಚರಿಸುವುದು ಅರ್ಥಪೂರ್ಣ ಎಂದರು.

ಕಾರ್ಯಕ್ರಮದಲ್ಲಿ ಶ್ಯಾಮಸುಂದರ ತೆಕ್ಕಟ್ಟೆ, ರಾಜು ಬೆಟ್ಟಿನಮನೆ, ದೇವು ಹೆಬ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಂತೋಷ ಮಾಸ್ಟರ್ ಸ್ವಾಗತಿಸಿ, ಅಣ್ಣಪ್ಪ ಮಾಸ್ಟರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...