ಉಡುಪಿ | ಸಮಾಧಾನ ಮಹೋತ್ಸವ ವಿರೋಧ ಹಾಸ್ಯಾಸ್ಪದ: ಕ್ರೈಸ್ತ ಒಕ್ಕೂಟ ತಿರುಗೇಟು, ಭದ್ರತೆ ಒದಗಿಸಲು ಆಗ್ರಹ

Date:

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ಕ್ರೈಸ್ತ ಸಮುದಾಯದವರಿಗೆ ಮಾಡಿರುವ ಭಕ್ತಿ ಸಂಜೀವನ ಕೂಟವಾಗಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಸ್ಪಷ್ಟಪಡಿಸಿದ್ದಾರೆ.

ಸಮಾಧಾನದ ಹೆಸರಿನಲ್ಲಿ ನಡೆಯುತ್ತಿರುವ ಮತಾಂತರದ ಷಡ್ಯಂತ್ರವಾಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದಕ್ಕೆ ಕೂಡಲೇ ತಡೆ ನೀಡಬೇಕೆಂದು ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ ಶ್ರೀಕಾಂತ್ ಶೆಟ್ಟಿ ಎಂಬವರು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು ಹಾಸ್ಯಾಸ್ಪದವಾಗಿದೆ. ಈ ದೇಶದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಧರ್ಮದ ಆಚರಣೆಗಳನ್ನು ಮಾಡಲು ಮುಕ್ತವಾದ ಅವಕಾಶವಿದ್ದರೂ ಕೆಲವೊಂದು ಕೀಳು ಮನಸ್ಸಿನ ವ್ಯಕ್ತಿಗಳು ಅನಾವಶ್ಯಕವಾಗಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಮಾಡುತ್ತಿದ್ದು ಇಂತಹ ವ್ಯಕ್ತಿಗಳ ವಿರುದ್ದ ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ಕ್ರೈಸ್ತ ಬಾಂಧವರಿಗೆ ಈಗ ಪವಿತ್ರ ಕ್ರಿಸ್ತನ ಶಿಲುಭೆಯ ಶ್ರಮದಿನದ ಧ್ಯಾನ ಕಾಲ ನಡೆಯುತ್ತಿದ್ದು ಪ್ರತಿವರ್ಷವೂ ಈ ಸಂದರ್ಭದಲ್ಲಿ ಸಮಾಧಾನ ಮಹೋತ್ಸವವನ್ನು ಆಯೋಜಿಸಲಾಗುತ್ತಿದ್ದು ವಿಶೇಷವೇನಿಲ್ಲ. ಈ ಸಮಾಧಾನ ಮಹೋತ್ಸವ ಕ್ರೈಸ್ತ ಬಾಂಧವರಿಗಾಗಿ ಆಯೋಜಿಸುತ್ತಿದ್ದು ಎನ್ನುವ ಕನಿಷ್ಠ ಜ್ಞಾನ ವಿರೋಧಿಗಳಿಗೆ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಕಾರ್ಯಕ್ರಮ ಕೂಡ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿಲ್ಲ ಬದಲಾಗಿ ನಮ್ಮದೇ ಚರ್ಚಿನ ಆಡಳಿತದ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದು ಇದನ್ನು ವಿರೋಧಿಸುವ ಮನೋಸ್ಥೀತಿಗೆ ಒಕ್ಕೂಟದ ಖಂಡನೆ ವ್ಯಕ್ತಪಡಿಸುತ್ತೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Untitled design 20260315 161436 0000
ಜಾಹಿರಾತು

ಲಾಝರಸ್ ಅವರ ವಿರುದ್ಧ ಸಾಕಷ್ಟು ಕ್ರಿಮಿನಲ್ ಕೇಸುಗಳಿದ್ದು ಅವರ ಹಿಂದು ವಿರೋಧಿ ಭಾಷಣ, ದ್ವೇಷಪೂರಿತ ಭಾಷಣ, ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಕುರಿತಂತೆ ತಮಿಳುನಾಡಿನ ವಿವಿಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿವೆ ಎಂದು ಆರೋಪಿಸಿದ್ದಾರೆ. ಪ್ರತಿಯೊಬ್ಬ ಸಾಮಾಜಿಕ ವ್ಯಕ್ತಿಯ ವಿರುದ್ದ ಸುಳ್ಳು ಪ್ರಕರಣಗಳು ದಾಖಲಾಗುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗಿದ್ದು ಅವೆಲ್ಲವೂ ಕೂಡ ಖುಲಾಸೆಯಾಗಿವೆ. ಅಲ್ಲದೆ 2018 ರ ಬಳಿಕ ಅವರ ವಿರುದ್ದ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಅವರ ಹಿನ್ನಲೆ ಪಡೆದು ಬಳಿಕ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸೂಕ್ತ ಪರವಾನಿಗೆಯನ್ನು ಸಹಪಡೆಯಲಾಗಿದೆ.

ಉಡುಪಿಯ ಶಾಂತಿಯನ್ನು ಕೆಡಸುವ ದೃಷ್ಠಿಯಿಂದ ಸಭೆಯನ್ನು ಆಯೋಜಿಸಲಾಗಿದೆ ಎನ್ನುವ ವ್ಯಕ್ತಿಗಳು ಮೊದಲು ಅವರು ಶಾಂತಿ ಕದಡಲು ಮಾಡಿದ ಕೆಲವೊಂದು ಕಾರ್ಯಕ್ರಮಗಳು ಕೂಡ ಒಕ್ಕೂಟದ ಗಮನದಲ್ಲಿವೆ. ಸಮಾಧಾನ ಮಹೋತ್ಸವ ಕ್ರೈಸ್ತ ಭಾಂಧವರ ಆಧ್ಯಾತ್ಮಿಕ ಬದಲಾವಣೆಯ ನಿಟ್ಟಿನಲ್ಲಿ ಆಯೋಜಿಸಿದ್ದು ಇದನ್ನು ನಡೆಸದಂತೆ ವಿರೋಧ ವ್ಯಕ್ತಪಡಿಸುವ ಯಾವುದೇ ರೀತಿಯ ನೈತಿಕತೆ ಹಿಂದೂ ಜಾಗರಣ ವೇದಿಕೆಗಿಲ್ಲ. ಧಾರ್ಮಿಕ ಅಶಾಂತಿ ಮೂಡಿಸುವ ಕೆಲಸವನ್ನು ಶ್ರೀಕಾಂತ್ ಶೆಟ್ಟಿಯಂತಹ ಮುಖಂಡರು ಮಾಡ ಹೊರಟಿದ್ದು ಅಂತಹ ವ್ಯಕ್ತಿಗಳ ವಿರುದ್ದ ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ಹಾಗೂ ಸಮಾಧಾನ ಮಹೋತ್ಸವಕ್ಕೆ ಸೂಕ್ತ ಭದ್ರತೆ ಒದಗಿಸಿ ಯಶಸ್ವಿಯಾಗಿ ನಡೆಯಲು ಸಹಕರಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...