ಉಡುಪಿ | ಕೋಮು ಗಲಭೆ ಸೃಷ್ಟಿಸಲು ಹುನ್ನಾರ, ಶ್ರೀಕಾಂತ ಶೆಟ್ಟಿಯನ್ನು ಜೈಲಿಗಟ್ಟಲು ಆಗ್ರಹ

Date:

ಈ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತಮ್ಮ ಧರ್ಮವನ್ನು ಆಚರಿಸುವುದು ಹಾಗೂ ಪ್ರಚಾರ ಮಾಡುವ ಹಕ್ಕು ಇದೆ. ಧಾರ್ಮಿಕ ಆಚರಣೆಗಳು ಮತ್ತು ಕಾರ್ಯಕ್ರಮಗಳಿಗೆ ತಡೆಯೊಡ್ಡುವುದು ಕಾನೂನುಬಾಹಿರವಾಗಿದ್ದು, ಸಂವಿಧಾನ ವಿರೋಧಿಯಾಗಿದೆ ಎಂದು ಸುಂದರ ಮಾಸ್ತರ್ ತಿಳಿಸಿದ್ದಾರೆ.

ಈದಿನ.ಕಾಮ್ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಕಾರ್ಕಳದಲ್ಲಿ ಪ್ರಾರ್ಥನಾ ಮಂದಿರಕ್ಕೆ ಅತಿಕ್ರಮವಾಗಿ ನುಗ್ಗಿ ದಾಂಧಲೆ ನಡೆಸಿದ ಶ್ರೀಕಾಂತ ಶೆಟ್ಟಿ, ಇದೀಗ ಮತ್ತೊಂದು ಗೂಂಡಾ ಕೃತ್ಯಕ್ಕೆ ತಯಾರಿ ನಡೆಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ಇಂತಹವರನ್ನು ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಬೇಕು. ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಡುಪಿ ಜಿಲ್ಲೆಯಲ್ಲೂ ಕೋಮು ಸಂಘರ್ಷ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಮೌಢ್ಯ ವಿಚಾರವನ್ನು ಉಲ್ಲೇಖಿಸಿದ ಅವರು, “ಕಲ್ಲಿನ ಮೂರ್ತಿಗೆ ಲೀಟರ್‌ಗಟ್ಟಲೆ ಹಾಲು ಸುರಿಸುವುದೋ, ಹೋಮ-ಹವನದ ಹೆಸರಿನಲ್ಲಿ ತುಪ್ಪ, ತೆಂಗಿನಕಾಯಿ, ಬಾಳೆಹಣ್ಣುಗಳನ್ನು ಬೆಂಕಿಗೆ ಹಾಕುವುದೋ, ಅಥವಾ ತಾಯಿತ ಕಟ್ಟಿಕೊಳ್ಳುವುದೋ—ಇವುಗಳಲ್ಲಿ ಯಾವುದು ಮೌಢ್ಯ?” ಎಂದು ಪ್ರಶ್ನಿಸಿದರು. ಪೂಜೆ, ಹೋಮ, ಹವನಗಳಿಂದ ರೋಗಗಳು ಗುಣವಾಗುತ್ತಿದೆಯಾದರೆ ಆಸ್ಪತ್ರೆಗಳ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Untitled design 20260315 161436 0000
ಜಾಹಿರಾತು

ಸೌಹಾರ್ದತೆಗೆ ಹೆಸರಾಗಿರುವ ಉಡುಪಿ ಜಿಲ್ಲೆಯಲ್ಲಿ ಶಾಂತಿ ಭಂಗಗೊಳಿಸುವ ಪ್ರಯತ್ನಗಳನ್ನು ತಡೆಯಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಧಾರ್ಮಿಕ ಆಚರಣೆಗಳನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಕೋಮು ದ್ವೇಷ ಹರಡುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಉಡುಪಿ ನಗರದಲ್ಲಿ ತಲವಾರು ಬೀಸುತ್ತಾ, ತ್ರಿಶೂಲ ಪ್ರದರ್ಶಿಸುತ್ತಾ ಮೆರವಣಿಗೆ ನಡೆಸುವಂತಹ ಘಟನೆಗಳನ್ನು ಈಗಲೇ ನಿಯಂತ್ರಿಸದಿದ್ದರೆ ಭವಿಷ್ಯದಲ್ಲಿ ಗಂಭೀರ ಪರಿಣಾಮ ಎದುರಾಗಬಹುದು ಎಂದು ಎಚ್ಚರಿಸಿದರು.

ಈ ಹಿನ್ನೆಲೆಯಲ್ಲಿ ಶ್ರೀಕಾಂತ ಶೆಟ್ಟಿಯನ್ನು ತಕ್ಷಣ ಬಂಧಿಸಿ ಜೈಲಿಗೆ ಕಳುಹಿಸಬೇಕು. ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ತಮ್ಮ ತಮ್ಮ ಆಚರಣೆಗಳನ್ನು ಶಾಂತಿಯುತವಾಗಿ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಹಾಗೂ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...