ಉಡುಪಿ‌ | ಯುದ್ಧವೇ ಸಾಮ್ರಾಜ್ಯಶಾಹಿಗಳ ವ್ಯಾಪಾರ : ಸುರೇಶ್ ಕಲ್ಲಾಗರ

Date:

ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಎಂ ಪಕ್ಷದ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಅವರು, ಯುಎಸ್ ಮತ್ತು ಇಸ್ರೇಲ್ ದೇಶಗಳು ಜಗತ್ತಿನ ಕೆಲ ರಾಷ್ಟ್ರಗಳ ಮೇಲೆ ನಡೆಸುತ್ತಿರುವ ಯುದ್ಧಗಳು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿವೆ ಎಂದು ಆರೋಪಿಸಿದರು. ಯುದ್ಧದ ಪರಿಣಾಮವಾಗಿ ಗ್ಯಾಸ್ ಮಾತ್ರವಲ್ಲದೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

1010111817

ಸಾಮ್ರಾಜ್ಯಶಾಹಿ ಅಮೇರಿಕಾ ಯುದ್ಧ ಸಾಮಗ್ರಿಗಳ ವ್ಯಾಪಾರವನ್ನೇ ಆಧಾರವಾಗಿಟ್ಟುಕೊಂಡಿದ್ದು, ಯುದ್ಧ ನಡೆಯದಿದ್ದರೆ ಆ ದೇಶದ ಆರ್ಥಿಕ ವ್ಯವಸ್ಥೆ ದುರ್ಬಲವಾಗುತ್ತದೆ ಎಂದು ಅವರು ಹೇಳಿದರು. ಭಾರತದ ಬಜೆಟ್‌ನಿಗಿಂತಲೂ ಹೆಚ್ಚಿನ ಮೊತ್ತವನ್ನು ಅಮೇರಿಕಾ ತನ್ನ ರಕ್ಷಣಾ ವೆಚ್ಚಕ್ಕೆ ಖರ್ಚು ಮಾಡುತ್ತಿದೆ ಎಂದು ಆರೋಪಿಸಿದ ಅವರು, ಸಾಮ್ರಾಜ್ಯಶಾಹಿಗಳು ಯುದ್ಧವನ್ನು ವ್ಯಾಪಾರವಾಗಿ ಮಾಡಿಕೊಂಡಿದ್ದು, ಇದರ ಪರಿಣಾಮ ಜನತೆಗೆ ತೀವ್ರ ಹೊರೆ ಆಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೇರಿಕಾ ಭಾರತ ಹಾಗೂ ಪಾಕಿಸ್ತಾನಕ್ಕೆ ಯುದ್ಧ ಸಾಮಗ್ರಿಗಳನ್ನು ಸರಬರಾಜು ಮಾಡುವ ಮೂಲಕ ಲಾಭ ಗಳಿಸುತ್ತಿದೆ ಎಂದು ಆರೋಪಿಸಿದರು.

1010036681 2
ಜಾಹಿರಾತು

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಚ್. ನರಸಿಂಹ, ತಾಲೂಕು ಕಾರ್ಯದರ್ಶಿ ಚಂದ್ರಶೇಖರ ವಿ ಸೇರಿದಂತೆ ಹಲವರು ಮಾತನಾಡಿದರು. ಪಕ್ಷದ ಸದಸ್ಯ ರಾಜು ದೇವಾಡಿಗ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಸುರೇಂದ್ರ ಎಚ್., ಶೀಲಾವತಿ, ಬಲ್ಕೀಸ್ ಹಾಗೂ ತಾಲೂಕು ಸಮಿತಿ ಸದಸ್ಯರಾದ ಕೆ. ಶಂಕರ್, ಮಹಾಬಲ ವಡೇರಹೋಬಳಿ, ಸಂತೋಷ್ ಹೆಮ್ಮಾಡಿ, ಚಂದ್ರ ಪೂಜಾರಿ, ಡಿ. ಲಕ್ಷ್ಮಣ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಮಿಕ ಮುಖಂಡರಾದ ಪ್ರಕಾಶ್ ಕೋಣಿ, ರಮೇಶ್ ವಿ., ಚಂದ್ರ ವಿ., ರಹೆಮಾನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...