ಉಡುಪಿ | ಮಕ್ಕಳ ಜೀವನ ಹೊಳೆಯುವ ನಕ್ಷತ್ರದಂತೆ ಇರಬೇಕು: ಯೂಸುಫ್ ಕನ್ನಿ

Date:

“ಪ್ರತಿಯೊಂದು ಮಗುವಿನ ಮೊದಲ ಪಾಠಶಾಲೆ ತಾಯಿಯ ಮಡಿಲು ಆಗಿರುತ್ತದೆ. ತಾಯಿ ತನ್ನ ಮಗುವಿನ ಉತ್ತಮ ಸಂಸ್ಕಾರವುಳ್ಳ ವಿದ್ಯೆ ನೀಡಿ, ಇಹ ಮತ್ತು ಪರಲೋಕವನ್ನು ಬೆಳಗಿಸಲು ಉತ್ತಮ ಮಾರ್ಗದರ್ಶಿಯಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಜನಾಬ್ ಯೂಸುಫ್ ಕನ್ನಿ ಹೇಳಿದ್ದಾರೆ.

ಉಡುಪಿಯಲ್ಲಿಸಣ್ಣ ಮಕ್ಕಳಿಗಾಗಿ ರೋಶನ್ ಸಿತಾರೆ ಶೀಷಿಕೆ ಅಡಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಮಕ್ಕಳ ಜೀವನ ಹೊಳೆಯುವ ನಕ್ಷತ್ರದಂತೆ ಇರಬೇಕು. ಮಕ್ಕಳಿಗೆ ಶಿಸ್ತಿನ ಅರಿವು ಮೂಡಿಸಬೇಕು. ಶಿಸ್ತನ್ನು ಅಳವಡಿಸಿ ಕೊಳ್ಳಲು, ಶ್ರಮ ಜೀವಿಯಾಗಿ ಬದುಕಲು, ಅವರನ್ನು ಸದ್ಗುಣವಂರನ್ನಾಗಿಸುವ ವಾತಾವರಣ ನಿರ್ಮಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಕೆಮ್ಮಣ್ಣು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಶ್ರೀಮತಿ ರಝೀಯ, ಹಾಲಿ ಸದಸ್ಯೆ ಮುಮ್ತಾಜ್ ಬಾನು, ಡಾ ಶಾಹೆ ನವಾಜ್ ಹಾಗು ಜಮಾಅತೆ ಇಸ್ಲಾಮೀ ಉಡುಪಿ ಜಿಲ್ಲಾ ಅಧ್ಯಕ್ಷ ಡಾ ಅಬ್ದುಲ್ ಅಜೀಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರೀಡಾಕೂಟದಲ್ಲಿ ಜಿಲ್ಲೆಯ ಶಿರೂರು ಬೈಂದೂರು, ಗಂಗೊಳ್ಳಿ, ಕುಂದಾಪುರ, ಕಂಡ್ಲೂರು, ಕಾರ್ಕಳ, ಕಾಪು, ಮಲ್ಪೆ, ಹೂಡೆ, ಕುಕ್ಕಿಕಟ್ಟೆ, ಕಟಪಾಡಿ ಹಾಗೂ ಇನ್ನಿತರ ಪ್ರದೇಶಗಳ ಸುಮಾರು 850ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಮರಕಡ, ಜಮಾಅತೆ ಇಸ್ಲಾಮೀ ಉಡುಪಿ ಜಿಲ್ಲಾ ಅಧ್ಯಕ್ಷ ಡಾ ಅಬ್ದುಲ್ ಅಜೀಜ್, ಹೂಡೆ ಅಧ್ಯಕ್ಷ ಅಬ್ದುಲ್ ಕಾದಿರ್ ಹೂಡೆ, ಕಾರ್ಯಕ್ರಮದ ಸಂಚಾಲಕ ಜಿಯಾಉರ‍್ರಹ್ಮಾನ್ ಜಮಾಅತೆ ಇಸ್ಲಾಮೀ ಉಡುಪಿ ಜಿಲ್ಲಾ ಮಹಿಳಾ ಸಂಚಾಲಕಿ ಕುಲ್ಸೂಮ್ ಅಬುಬಕ್ಕರ್, ಇಬ್ರಾಹೀಮ್ ಚೌಗುಲೆ ಉಪಸ್ಥಿತರಿದ್ದರು. ಡಾ ಅಬ್ದುಲ್ ಅಜೀಜ್ ಪ್ರಾಸ್ತಾವಿಕ ಮಾಡಿದರು. ಯಸೀನ್ ಮನ್ನ ಹಾಗು ಅನ್ವರ್ ಅಲಿ ಕಾಪು ಕರ‍್ಯಕ್ರಮ ನಿರೂಪಿಸಿದರು. ನಿಸಾರ್ ಧನ್ಯವಾದವಿತ್ತರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...