ಉಡುಪಿ | ದಲಿತರು ಹಿಂದೆಯೂ ಹಿಂದುಗಳಾಗಿರಲಿಲ್ಲ, ಮುಂದೆಯೂ ಹಿಂದುಗಳಾಗುವುದಿಲ್ಲ: ಜಯನ್ ಮಲ್ಪೆ

Date:

ದಲಿತರು ಹಿಂದೆಯೂ ಹಿಂದೂಗಳಾಗಿರಲಿಲ್ಲ, ಮುಂದೆಯೂ ಹಿಂದೂಗಳಾಗುವುದಿಲ್ಲ. ದಲಿತರು ತಮ್ಮ ಮನೆಗಳಲ್ಲಿರುವ ದೇವರ ಪೋಟೋ ತೆಗೆದು, ಬುದ್ದ ಚಿಂತನೆಯನ್ನು ಅಳವಡಿಸಿಕೊಂಡರೆ ಮಾತ್ರ ಸಮಾಜ ಪರಿವರ್ತನೆಯಾಗುತ್ತದೆ. ಅಭಿವೃದ್ಧಿ ಹೊಂದುತ್ತದೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಅಂಬೇಡ್ಕರ್ ಯುವಸೇನೆ ಆಯೋಜಿಸಿದ್ದ ‘ಅಂಬೇಡ್ಕರ್‌ ಪರಿನಿಬ್ಬಾಣ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಶತಮಾನಗಳಿಂದ ದಲಿತರು ತಮ್ಮ ಮನೆಗಳಲ್ಲಿ ದೇವರ ಪೋಟೋಗೆ ಪೂಜೆ ಮಾಡಿದರೂ, ಅವರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ, ಕೊಲೆ, ಸುಲಿಗೆ, ಅತ್ಯಾಚಾರ, ಸಾವು, ನೋವುಗಳನ್ನು ತಡೆಗಟ್ಟಲು ಸಾಧ್ಯವಾಗಿಲ್ಲ. ಅಂಬೇಡ್ಕ‌ರ್ ಎಲ್ಲ ದೇವಾಧಿದೇವತೆಗಳ ಸಂಹಾರಕರಾಗಿ ಮುನ್ನಡೆಯುತ್ತಾರೆ ಎಂದ ಜಯನ್ ಮಲ್ಪೆ, ವೈದಿಕರು ದಲಿತರ ರಾಜಕೀಯ ಅಧಿಕಾವನ್ನು ಕಬಳಿಸಿ, ಅವರನ್ನು ಶಾಶ್ವತ ಗುಲಾಮರನ್ನಾಗಿಸಲೆಂದೇ ದೇವರನ್ನು ಸೃಷ್ಟಿಸಿದ್ದಾರೆ” ಎಂದರು.

ಹೋರಾಟಗಾರ ಸುರೇಶ್ ಪಾಲನ್ ಮಾತನಾಡಿ, “ಬದಲಾಗುತ್ತಿರುವ ಸಾಮಾಜಿಕ ಮೌಲ್ಯಗಳು, ಮರೆಯಾಗುತ್ತಿರುವ ಜೀವನಕ್ರಮಗಳು, ತಲ್ಲಣಗೊಳ್ಳುತ್ತಿರುವ ಸಿದ್ಧಾಂತಗಳ ರೋಗಕ್ಕೆ ಅಂಬೇಡ್ಕ‌ರ್ ವಿಚಾರಧಾರೆ ಮದ್ದು ಇದ್ದಂತ್ತೆ. ಜನರ ಬದುಕುಗಳನ್ನು ಅಸನುಮಾಡಲು ಪ್ರಯತ್ನಿಸಿದ ಭಾರತದ ಏಕೈಕ ಭಾಗ್ಯವಿಧಾತ ಅಂಬೇಡ್ಕರ್” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ದಲಿತ ಮುಖಂಡ ಗಣೇಶ್ ನೆರ್ಗಿ ಮಾತನಾಡಿ, “ದಲಿತ ಚಳುವಳಿಯ ನಾಯಕತ್ವ ಪಾಳೇಗಾರಿಕೆಯ ಸಂಸ್ಕೃತಿಯಿಂದ ಕೂಡಿದೆ. ಒಂದು ಸಮಸ್ಯೆಯ ಕುರಿತು ಹೋರಾಡಲು ದಲತ ಜನಾಂಗ ಒಂದಾಗಿ ಸಾಮೂಹಿಕ ನಾಯಕತ್ವ ಹುಟ್ಟಹಾಕಬೇಕಿದೆ.ದಲಿತ ನಾಯಕರು ವಯಕ್ತಿಕ ದ್ವೇಷ, ಅಸೂಯೆ ಬಿಡದೆ ಸಂಘಟನೆಗಳ ವಿಘಟನೆಗೆ ಕೊನೆಯಿಲ್ಲ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಹರೀಶ್ ಸಲ್ಯಾನ್ ವಹಿಸಿದ್ದರು. ಯುವನಾಯಕರಾದ ಸಂತೋಷ್ ಕಪ್ಪೆಟ್ಟು, ಕೃಷ್ಣ ಶ್ರೀಯಾನ್, ಪ್ರಸಾದ್ ಮಲ್ಪೆ, ಅರುಣ್ ಸಾಲ್ಯಾನ್, ದೀಪಕ್ ಕೊಡವೂರು, ಶಂಕರ್ ನೆರ್ಗಿ, ವಿನಯ ಬಲರಾಮನಗರ, ಭಗವಾನ್ ಮಲ್ಪೆ, ಶಶಿಕಲಾ ತೊಟ್ಟಂ, ಪ್ರಮೀಳ ಹರೀಶ್, ಕಲಾವತಿ, ಸಂಕಿ ತೊಟ್ಟಂ, ವಿನೋದ ಜಯರಾಜ್, ಸಂಧ್ಯಾ ನೆರ್ಗಿ,ಶಶಿ ತೊಟ್ಟಂ ಮಾ.ಗ್ಯಾಬ್ರಿಯಲ್, ಮಾ.ಹರ್ಷಿಲ್ ಉಪಸ್ಥಿತರಿದ್ದರು. ಬಿ.ಎನ್.ಪ್ರಶಾಂತ್ ಸ್ವಾಗತಿಸಿ, ಸುಶೀಲ್ ಕುಮಾರ್ ಕೊಡವೂರು ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...