ಉಡುಪಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಸದರ ಕಚೇರಿ ಎದುರು ಧರಣಿ

Date:

ದೇಶದ ಮಾನವ ಸಂಪನ್ಮೂಲದ ಬೆಳವಣಿಗೆಗೆ ಪೂರಕವಾಗಿ 1974ರಲ್ಲಿ ಆರಂಭವಾದ ರಾಷ್ಟ್ರೀಯ ಮಕ್ಕಳ ನೀತಿಗೆ ಸಂಬಂದಿಸಿದ ಐಸಿಡಿಎಸ್‌-1975 ಜಾರಿಗೆ ಬಂದು 45ವರ್ಷಗಳು ಕಳೆದಿವೆ. ಆದರೂ, ಈ ಯೋಜನೆಯನ್ನು ಬಲಿಷ್ಠಗೊಳಿಸಲು ಇಲಾಖೆಯಾಗಿ ಪರಿಗಣಿಸದೆ, ಸತತವಾಗಿ ಅನುದಾನ ಕಡಿತಗೊಳಿಸಿ ಬಲಹೀನಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಪ್ರತಿಭಟನೆ ನಡೆಸಿದೆ.

ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಕಚೇರಿ ಎದುರು ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. “ಐಸಿಡಿಎಸ್‌ ಯೋಜನೆಯಡಿ ದೇಶದಲ್ಲಿ ಸುಮಾರು 11 ಕೋಟಿ ಮಕ್ಕಳು ಮತ್ತು 2 ಕೋಟಿ ಗರ್ಭಿಣಿ, ಬಾಣಂತಿಯರು ಫಲಾನುಭವಿಗಳಾಗಿದ್ದಾರೆ. ಯೋಜನೆಯಿಂದ ಅಪೌಷ್ಠಿಕತೆ, ತಾಯಿ ಮಕ್ಕಳ ಮರಣ ತಡೆಯಲು ಸಾಧ್ಯವಾಗಿದೆ. ಆದರೆ, ಅನುದಾನ ಕಡಿತದಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಆಹಾರ, ಶಿಕ್ಷಣಕ್ಕೆ ತುಂಬಾ ತೊಂದರೆಯಾಗಲಿದೆ. ಇದರಿಂದ ಅಪೌಷ್ಠಿಕತೆಯ ಮಟ್ಟ ಹೆಚ್ಚಾಗಲಿದೆ” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷೆ ಭಾರತಿ, “ಈಗಾಗಲೇ ಭಾರತ ಹಸಿವಿನ ಸೂಚ್ಯಾಂಕದಲ್ಲಿ 112ನೇ ಸ್ಥಾನದಲ್ಲಿದೆ. 68% ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ದೇಶದಲ್ಲಿ ಪ್ರತೀ ಮೂರು ಮಕ್ಕಳಲ್ಲಿ ಒಂದು ಮಗು ಕಡಿಮೆ ತೂಕ ಹೊಂದಿರುವುದಾಗಿ ಎನ್‌ಎಫ್‌ಎಚ್ಎಸ್‌-5ರ ಅಂಕಿ ಅಂಶಗಳೇ ಹೇಳುತ್ತಿವೆ. ಅಲ್ಲದೆ, ದೇಶದಲ್ಲಿ ಐಸಿಡಿಎಸ್‌ ಯೋಜನೆಯ 2,000 ಪ್ರಾಜೆಕ್ಟ್‌ಗಳಲ್ಲಿ ಸುಮಾರು 13.5 ಲಕ್ಷ ಅಂಗನವಾಡಿ ಕೇಂದ್ರಗಳಲ್ಲಿ  26 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸುಮಾರು 49 ವರ್ಷಗಳಿಂದ ದುಡಿಯುತ್ತಿದ್ದಾರೆ. ಅವರಿಗೆ ಕನಿಷ್ಠ ವೇತನ, ಪಿಎಫ್, ಇಎಸ್‌ಐ, ಪಿಂಚಣಿ ಮುಂತಾದ ಸೌಲಭ್ಯಗಳು ದೊರೆಯುತ್ತಿಲ್ಲ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ, ಪೋಷಣ್ ಟ್ಯಾಕರ್, ಮಾತೃವಂದನ ಸರ್ವೆಗಳು ಸೇರಿದಂತೆ ನಾನಾ ಕೆಲಸಗಳನ್ನು ಅಂಗನವಾಡಿ ಆರ್ಯಕರ್ತೆರು ಮಾಡುತ್ತಿದ್ದಾರೆ. ಆದರೆ, ಅವರಿಗೆ ಕನಿಷ್ಠ ಸೌಲಭ್ಯಗಳನ್ನು ನೀಡದಿರುವುದು ವಿಷಾದನೀಯ. 45 ಮತ್ತು 46ನೇ ಕಾರ್ಮಿಕ ಸಮ್ಮೇಳನದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರನ್ನು ಕೆಲಸಗಾರರೆಂದು ಪರಿಗಣಿಸಿ ಅವರಿಗೆ ಕನಿಷ್ಠ ವೇತನ, ಇಎಸ್‌ಐ, ಪಿಎಫ್‌ ಸೌಲಭ್ಯ ನೀಡಿ, ಕೆಲಸವನ್ನು ಕಾಯಂಗೊಳಿಸಬೇಕೆಂದು ಶಿಫಾರಸು ಮಾಡಲಾಗಿದೆ. ಇದೇ ರೀತಿಯ ಶಿಫಾರಸನ್ನು ರಾಜ್ಯ ಸಭೆಯ ಸಂಸದೀಯ ಸಮಿತಿಯೊಂದು ಇತ್ತೀಚಿಗೆ ಮಾಡಿದೆ. ಈ ಕುರಿತಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ರೂಪು ರೇಷೆಗಳನ್ನು ರಚಿಸಬೇಕು” ಎಂದು ಹೇಳಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

1. ದೇಶದ ಎಲ್ಲಾ ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ ಕನಿಷ್ಠವೇತನ 31,000 ಜಾರಿಗೊಳಿಸಬೇಕು

2. ಸಾಮಾಜಿಕ ಭದ್ರತೆಗಳಾದ EȘI, PF, ಪೆನ್ಮನ್, NPS ಬದಲಿಗೆ OP ಜಾರಿಗೊಳಿಸಬೇಕು.

3. ICDSನ್ನು ಇಲಾಖೆಯಾಗಿ ಪರಿಗಣಿಸಿ ನೌಕರರನ್ನು ಕಾಯಂಗೊಳಿಸಬೇಕು.

4. ICDSಗೆ ಕಡಿತಮಾಡಿರುವ 8200 ಕೂಡಲೇ ಬಿಡುಗಡೆಗೊಳಿಸಬೇಕು

5. ಆಹಾರ, ಆರೋಗ್ಯ, ಶಿಕ್ಷಣವನ್ನು ದೇಶದ ಎಲ್ಲಾ ಜನರಿಗೆ ಖಾತ್ರಿಗೊಳಿಸಿ ದೇಶವನ್ನು ಅಭಿವೃದ್ಧಿಪಡಿಸಬೇಕು

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ, ಉಡುಪಿ ಜಿಲ್ಲಾ ಆಶಾ ಕಾರ್ಯಕರ್ತರ ಸಂಘ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಫೆಡರೇಷನ್, ಸಿಐಟಿಯು ಉಡುಪಿ ಜಿಲ್ಲೆಯ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...