ಉಡುಪಿ | ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Date:

ರಾಜ್ಯದ ಪ್ರವಾಸೋದ್ಯಮದಲ್ಲಿ ಕರಾವಳಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ. ಆದರೆ ದೀಪದ ಕೆಳಗೆ ಕತ್ತಲು ಎಂಬಂತೆ ಕರಾವಳಿ ಜಿಲ್ಲೆಗಳಲ್ಲಿ ಪರಿಣಾಮಕಾರಿ ಅಭಿವೃದ್ಧಿಯಾಗಿಲ್ಲ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ ಡಿ ಆರ್ ರಾಜು ಕಳವಳ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲೆಯ ಕಾರ್ಕಳದ ಕಟೀಲು ಇಂಟರ್ ನ್ಯಾಷನಲ್ ಹೊಟೇಲ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತಮಾಡಿದರು.

“ಕರಾವಳಿ ಕರ್ನಾಟಕದ ಉಳ್ಳಾಲದಿಂದ ಕಾರವಾರದವರೆಗಿನ ಸುಮಾರು 320 ಕಿಮೀ ಸಮುದ್ರ ತೀರವು ನಿರಂತರವಾಗಿ ಪ್ರತಿ ವರ್ಷ ಕಡಲ್ಕೊರೆತದ ಹೊಡೆತಕ್ಕೆ ಸಿಲುಕಿದರೂ ಕೂಡ ಈವರೆಗೆ ಕಡಲ್ಕೊರೆತ ತಡೆಗಟ್ಟುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಅಭಿವೃದ್ಧಿ ವಿಚಾರದಲ್ಲಿ ಕರಾವಳಿಯ ಜಿಲ್ಲೆಗಳು ತೀರಾ ಹಿಂದುಳಿದಿವೆ. ಪ್ರಮುಖವಾಗಿ ನಮ್ಮ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಾಗಿರುವ ಪಶ್ಚಿಮ ಘಟ್ಟದ ಶ್ರೇಣಿಯ ರಸ್ತೆಗಳ ಅಭಿವೃದ್ಧಿಯಾಗಬೇಕು. ಎಲ್ಲ ಪ್ರಮುಖ ಸಂಪರ್ಕ ರಸ್ತೆಗಳು ಚತುಷ್ಪಥ ರಸ್ತೆಗಳಾದರೆ ಮೂಲಸೌಕರ್ಯ ಅಭಿವೃದ್ಧಿಯಾಗುತ್ತದೆ. ಜತೆಗೆ ಪ್ರವಾಸೋದ್ಯಮವೂ ಬೆಳೆಯಲು ಸಾಧ್ಯವಿದೆ” ಎಂದರು.

“ಕಡಲ್ಕೊರೆತ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯರ ತಾಂತ್ರಿಕ ಪರಿಣಿತ ತಂತ್ರಜ್ಞರ ಜತೆ ಸಭೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ. ಅಲ್ಲದೆ ಕರಾವಳಿ ಜಿಲ್ಲೆಗಳ ಯುವಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಹೊಸ ಕಂಪೆನಿಗಳು ಬರಬೇಕು. ಹಾಲಿ ಇರುವ ಎಂಆರ್‌ಪಿಎಲ್, ನಾಗಾರ್ಜುನ ವಿದ್ಯುತ್ ಕಂಪೆನಿಗಳಲ್ಲಿ ಶೇ. 95ರಷ್ಟು ಮಂದಿ ಕಾರ್ಮಿಕರು ಹೊರರಾಜ್ಯದವರೇ ತುಂಬಿದ್ದು, ಸ್ಥಳೀಯರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಕರಾವಳಿ ಜಿಲ್ಲೆಗಳಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆಗಳು ಬೆಳೆಯಬೇಕಿದೆ” ಎಂದು ಡಿ.ಆರ್ ರಾಜು ಹೇಳಿದರು.

“ಪರಿಸರ ಸಂರಕ್ಷಣೆ, ನೆಲ, ಜಲದ ಸಂರಕ್ಷಣೆಯಲ್ಲಿ ನಮ್ಮ ಸಂಘಟನೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದೆ. ಅರಣ್ಯ ನಾಶವನ್ನು ತಡೆಯುವ ನಿಟ್ಟಿನಲ್ಲಿ ಸ್ಮಶಾನ ಭೂಮಿಗಳಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ, ನವೆಂಬರ್ 18ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ?

“ಈ ಕಾರ್ಯಕ್ರಮವನ್ನು ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ವೈದ್ಯ ಉದ್ಘಾಟಿಸಲಿದ್ದು, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ಎಲ್ ವಿ ಅಮೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಪ್ರವಾಸೋದ್ಯಮ ಮತ್ತು ಬಂದರು ಹಾಗೂ ಜಲಸಾರಿಗೆ ಸಚಿವ ಶ್ರೀಪಾದ ನಾಯ್ಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಶಾಸಕರುಗಳಾದ ಯಶಪಾಲ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಬಹುತೇಕರು ಭಾಗವಹಿಸಲಿದ್ದಾರೆ” ಎಂದು ಡಿ ಆರ್ ರಾಜು ಹೇಳಿದರು.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ ಶೆಟ್ಟಿ, ಮುಂಡ್ಕೂರು ಸುರೇಂದ್ರ ಸಾಲಿಯಾನ್, ಅರುಣ್ ಶೆಟ್ಟಿ ಮೂಡಬಿದ್ರೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...