ಉಡುಪಿ | ಮಹಿಷ ದಸರಾಗಿಲ್ಲ ಅನುಮತಿ; ಪೊಲೀಸರ ವಿರುದ್ಧ ಕಿಡಿ

Date:

ಉಡುಪಿಯಲ್ಲಿ ಮಹಿಷ ದಸರಾ ನಡೆಸಲು ಅನುಮತಿಯಿಲ್ಲವೆಂದು ಉಡುಪಿ ನಗರ ಪೊಲೀಸರು ಹೇಳಿದ್ದಾರೆ. ಅನುಮತಿ ನಿರಾಕರಿಸಿರುವ ಪೊಲೀಸರ ನಡೆಯನ್ನು ಸಾಮಾಜಿಕ ಹೋರಾಟಗಾರ ಜಯನ್ ಮಲ್ಫೆ ಖಂಡಿಸಿದ್ದು, ‘ಅನುಮತಿ ನಿರಾಕರಣೆಯು ಸಂವಿಧಾನದ ಮೇಲಿನ ಅತ್ಯಾಚಾರ’ ವೆಂದು ಆಕ್ರೋಶ ವ್ಯಸ್ಥಪಡಿಸಿದ್ದಾರೆ.

ಅಕ್ಟೋಬರ್ 15ರಂದು ಉಡುಪಿಯಲ್ಲಿ ಮಹಿಷ ದಸರಾ ನಡೆಸಲು ಹಲವು ಸಂಘಟನೆಗಳು ನಿರ್ಧಸಿದ್ದವು. ಆಚರಣೆಗೆ ಅನುಮತಿ ಕೇಳಿ  ಅಂಬೇಡ್ಕರ್ ಯುವ ಸೇನೆ ಅಧ್ಯಕ್ಷ ಹರೀಶ್ ಸಾಲ್ಯಾನ್‌ ಅವರು ಉಡುಪಿ ನಗರ ಪೊಲೀಸ್‌ ಠಾಣೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅನುಮತಿ ನೀಡಲು ಪೊಲೀಸರು ನಿಕಾರಸಿದ್ದಾರೆ.

ಅನುಮತಿ ನೀಡಿಲ್ಲವೆಂದು ಹರೀಶ್‌ ಅವರಿಗೆ ಉಡುಪಿ ಪೊಲೀಸ್‌ ನಿರೀಕ್ಷಕರು ಪತ್ರ ಬರೆದಿದ್ದು, “ತಾವು ಮಹಿಷ ದಸರಾ ಮೆರವಣಿಗೆ ಮತ್ತು ಅದಕ್ಕೆ ಸಂಬಂಧಿಸಿದ ಬ್ಯಾನರ್‌ಗಳನ್ನು ಕಟ್ಟಲು ಅನುಮತಿ ಕೋರಿದ್ದೀರಿ. ಆದರೆ, ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಅನುಮತಿ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಷ ದಸರಾ 4

ಈ ಬಗ್ಗೆ ಕಿಡಿಕಾರಿರುವ ಜಯನ್‌ ಮಲ್ಫೆ, “ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವದ ತತ್ವಗಳ ಆಧಾರದ ಮೇಲೆ ಸಂವಿಧಾನವು ರಚಿತವಾಗಿದೆ. ಸಂವಿಧಾನದ 25ನೇ ವಿಧಿಯ ಪ್ರಕಾರ, ಧರ್ಮ ಪ್ರಚಾರ ಮತ್ತು ಪಾಲನೆಗೆ ಸ್ವತಂತ್ರ ಅವಕಾಶವಿದೆ. ಅಲ್ಲದೆ, ಪ್ರಜೆಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನೂ ನೀಡಲಾಗಿದೆ. ಆದರೂ, ಮಹಿಷ ದಸರಾಗೆ ಅನುಮತಿ ನೀಡದೇ ಇರುವುದು ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಹೇಳಿದ್ದಾರೆ.

“ದಲಿತರ ಅಸ್ಮಿತೆಯಾಗಿರುವ ಮಹಿಷ ದಸರಾವನ್ನು ನಡೆಸದಂತೆ ಬಹಿರಂಗವಾಗಿ ಬೆದರಿಕೆ ಹಾಕುತ್ತಿರುವವರನ್ನು ಬಂಧಿಸಬೇಕು. ಆದರೆ, ಅದನ್ನು ಬಿಟ್ಟು, ಪೊಲೀಸರು ದಲಿತರ ಹಕ್ಕನ್ನು ಒಸಕಿ ಹಾಕುತ್ತಿದ್ದಾರೆ. ಉಡುಪಿಯ ಪರ್ಯಾಯ ಮಹೋತ್ಸವಕ್ಕೆ ಉಗ್ರರ ಬೆದರಿಕೆ ಬಂದರೆ ಉಗ್ರರನ್ನು ಮಟ್ಟ ಹಾಕುತ್ತಾರೋ, ಇಲ್ಲ ಪರ್ಯಾಯ ಮಹೋತ್ಸವವನ್ನು ನಿಲ್ಲಿಸುತ್ತಾರೋ” ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ.

ಅಕ್ಟೋಬರ್ 15ರಂದು ಆದಿ ಉಡುಪಿಯ ಅಂಬೇಡ್ಕರ್‌ ವನದಲ್ಲಿ ಮಹಿಷ ದಸರಾ ನಡೆಯಲಿದೆ. ಕಾರ್ಯಕ್ರಮದಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ಜನರು ಭಾಗಿಯಾಗಬೇಕು ಎಂದು ಅಂಬೇಡ್ಕರ್ ಯುವ ಸೇನೆ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...