ಉಡುಪಿ | ಮೂರು ದಿನಗಳ ಸಮಾಧಾನ ಮಹೋತ್ಸವಕ್ಕೆ ಅದ್ದೂರಿ ಚಾಲನೆ

Date:

ಸಮಾಧಾನ ಮಹೋತ್ಸವ ಹೃದಯಗಳ ಪರಿವರ್ತನೆ, ನಂಬಿಕೆಯ ನವೀಕರಣ ಮತ್ತು ಶಾಂತಿಯ ಅನುಭವಕ್ಕೆ ದೇವರು ನೀಡಿದ ಅಪೂರ್ವ ಅವಕಾಶ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೆಷೀತ ಆಡಳಿತಾಧಿಕಾರಿ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ನಗರದ ಮಿಷನ್ ಕಂಪೌಂಡ್ ಮೈದಾನದಲ್ಲಿ ಉಡುಪಿ ಜಿಲ್ಲೆಯ ಫೆಲೋಶಿಪ್ ಚರ್ಚಸ್ ಇವರ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ಸಮಾಧಾನ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೈಬಲ್ ಶ್ರೀಗಂಥ ಪ್ರತಿಯೊಬ್ಬರಿಗೂ ಶಾಂತಿಯ ಆಳವಾದ ಅರ್ಥವನ್ನು ಭೋಧಿಸುತ್ತದೆ ಯೇಸು ಸ್ವಾಮಿಯ ಜನನದ ಸಂದರ್ಭದಲ್ಲಿ ಕೂಡ ಶಾಂತಿ ಸಮಾಧಾನದ ಉಲ್ಲೇಖವಿದ್ದು ಇದರು ದೇವರು ಮಾನವ ಕುಲದ ಮೇಲೆ ತೋರಿದ ಪ್ರೀತಿಯ ಸಂಕೇತವಾಗಿದೆ. ಲೋಕದ ಶಾಂತಿ ತಾತ್ಕಾಲಿಕವಾದರೆ ಕ್ರಿಸ್ತನ ಶಾಂತಿ ಶಾಶ್ವತವಾದುದಾಗಿದೆ. ಆದ್ದರಿಂದ ಶಾಂತಿಗಾಗಿ ಶ್ರಮಿಸವವರು ಸದಾ ಧನ್ಯರು ಎಂದು ಯೇಸು ಸ್ವಾಮಿ ಹೇಳಿದ್ದು ಅವರ ಸಂದೇಶವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಪಾಲಿಸೋಣ ಎಂದರು.

Untitled design 20260315 161436 0000
ಜಾಹಿರಾತು

ಮುಖ್ಯ ಅತಿಥಿಯಾಗಿ ಆಗಮಿಸಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ ಪ್ರತಿಯೊಂದು ಧರ್ಮಗಳಿಗೂ ತಮ್ಮ ತಮ್ಮ ಆಚರಣೆಗಳಿಗೆ ದೇಶದಲ್ಲಿ ಮುಕ್ತ ಅವಕಾಶವಿದ್ದು ನಮ್ಮ ಧರ್ಮವನ್ನು ಪ್ರೀತಿಸುವುದರೊಂದಿಗೆ ಇತರ ಧರ್ಮಗಳನ್ನು ಗೌರವಿಸಿದಾಗ ಶಾಂತಿಯ ಸಂದೇಶ ಸಾರ್ಥಕತೆಯನ್ನು ಪಡೆಯುತ್ತದೆ ಎಂದರು.
ಸಿಎಸ್ ಐ ಕರ್ನಾಟಕ ಸದರ್ನ್ ಡಯಾಸಿಸ್ ಇದರ ಧರ್ಮಾಧ್ಯಕ್ಷರಾದ ಅತಿ ವಂ|ಹೇಮಚಂದ್ರ ಕುಮಾರ್ ಮಾತನಾಡಿ ಮೂರು ದಿನಗಳ ಸಮಾಧಾನ ಮಹೋತ್ಸವ ನಮ್ಮಲ್ಲಿನ ಆಧ್ಯಾತ್ಮಿಕ ಶಕ್ತಿಯನ್ನು ಬಲಗೊಳಿಸಲು ಸಹಕಾರಿಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮಕ್ಕೂ ಮುನ್ನ ಸುಮಾರು 200ಕ್ಕೂ ಅಧಿಕ ಮಂದಿ ಗಾಯನ ತಂಡದ ನೇತೃತ್ವದಲ್ಲಿ ಸ್ತುತಿಗೀತೆಗಳ ಗಾಯನ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಮೂರು ದಿನಗಳ ಕಾಲ ಭಕ್ತಿ ಸಂಜೀವನ ಕೂಟಗಳನ್ನು ನಡೆಸಿಕೊಡಲಿರುವ ಘನ ಮೋಹನ್ ಸಿ.ಲಾಝರಸ್, ಪಾಸ್ಟರ್ ಟಿ ವಿ ಗೋಪಿನಾಥನ್, ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಸುಶೀಲ್ ಜತ್ತನ್ನ, ಕರ್ನಾಟಕ ರಾಜ್ಯ ಕ್ರೈಸ್ತ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರಶಾಂತ್ ಜತ್ತನ್ನ ವೇದಿಕೆಯಲ್ಲಿ ಉಪಸ್ಥಿತರದ್ದರು.

1010113349

ಉಡುಪಿ ನಗರದ ಮಿಷನ್ ಕಾಂಪೌಂಡ್‌ನಲ್ಲಿ ಮಾರ್ಚ್ 20ರಿಂದ 22ರವರೆಗೆ ಆಯೋಜಿಸಲಾಗಿರುವ ಮೂರು ದಿನಗಳ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

​ಶುಕ್ರವಾರದಂದು ಉಡುಪಿಯ ಗೋವಿಂದ ಕಲ್ಯಾಣ ಮಂಟಪದಲ್ಲಿ ಸಮಾವೇಶಗೊಂಡ ಹಿಂದೂ ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು, ಸಮಾಧಾನ ಮಹೋತ್ಸವದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಭೆಯ ಬಳಿಕ ಕಾರ್ಯಕರ್ತರು ಕಾರ್ಯಕ್ರಮ ನಡೆಯುತ್ತಿರುವ ಮಿಷನ್ ಕಾಂಪೌಂಡ್ ಮೈದಾನಕ್ಕೆ ಮುತ್ತಿಗೆ ಹಾಕಲು ಮೆರವಣಿಗೆಯ ಮೂಲಕ ತೆರಳಲು ಯತ್ನಿಸಿದರು.

​ಪ್ರತಿಭಟನಾಕಾರರು ಮೈದಾನದ ಕಡೆಗೆ ನುಗ್ಗದಂತೆ ತಡೆದ ಪೊಲೀಸರು, ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಬಳಿಕ ಅವರನ್ನು ಮಣಿಪಾಲ ಪೊಲೀಸ್ ಠಾಣೆಗೆ ಕರೆದೊಯ್ದು, ಸಂಜೆ ವೇಳೆಗೆ ಬಿಡುಗಡೆಗೊಳಿಸಿದರು.

​ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯ ಪ್ರಭಾರ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಮಿಷನ್ ಕಾಂಪೌಂಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...