ಉಡುಪಿ | ಕಡಲ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ; ಸೆ.25ರವರೆಗೆ ವಿಸ್ತರಣೆ

Date:

ಗೋಕರ್ಣ ಬೀಚ್​​​ನಲ್ಲಿ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿಕೊಂಡು ಅದೃಷ್ಟವಶಾತ್ ಪಾರಾಗಿರುವ ಬೆನ್ನಲ್ಲೇ ಉಡುಪಿಯ ಮಲ್ಪೆ ಬೀಚ್​​ಗೆ ಸೆಪ್ಟೆಂಬರ್‌ 25ರವರೆಗೆ ಪ್ರವಾಸಿಗರು ಬಾರದಂತೆ ಉಡುಪಿ ಜಿಲ್ಲಾಡಳಿತ ಸೂಚಿಸಿದೆ.

ಸಮುದ್ರ ಇನ್ನೂ ಪ್ರಕ್ಷುಬ್ಧವಾಗಿದ್ದು, ಅಲೆಗಳ ಹೊಡೆತವನ್ನು ಅರಿಯದ ಪ್ರವಾಸಿಗರು ಅಪಾಯಕ್ಕೆ ಸಿಲುಕಿಕೊಳ್ಳಬಹುದು ಎಂಬ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಮುಂಜಾಗೃತೆ ವಹಿಸಿದೆ.

“ಈ ಹಿಂದಿನ ಕ್ರಮದಂತೆ ಸೆಪ್ಟಂಬರ್‌ 15ರಿಂದ ಪ್ರವಾಸಿಗರಿಗೆ ತೆರೆದುಕೊಳ್ಳಬೇಕಾಗಿದ್ದ ಮಲ್ಪೆ ಬೀಚ್‌ ಈ ವರ್ಷ ತೆರವಾಗದೆ ಇರುವುದರಿಂದ ಪ್ರವಾಸಿಗರು ನಿರಾಸೆಗೊಂಡಿದ್ದಾರೆ. ಮಳೆ-ಗಾಳಿಯ ಹಿನ್ನೆಲೆಯಲ್ಲಿ ಸಮುದ್ರ ಈಗಲೂ ಪ್ರಕ್ಷುಬ್ಧ ಇರುವುದರಿಂದ ಪ್ರವಾಸಿಗರಿಗೆ ನೀರಿಗಿಳಿಯಲು ಇರುವ ನಿರ್ಬಂಧವನ್ನು ಸೆ. 25ರವರೆಗೆ ವಿಸ್ತರಿಸಲಾಗಿದೆ” ಎಂದು ಜಿಲ್ಲಾಡಳಿತ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೌತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತೀರ್ಥಕ್ಷೇತ್ರಗಳಷ್ಟೇ ಅಲ್ಲದೆ, ಕಡಲ ಕಿನಾರೆಗಳಿಗೂ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಆದರೆ ಸುರಕ್ಷತೆ ದೃಷ್ಟಿಯಿಂದ ಹಲವು ಬೀಚ್​​ಗಳಲ್ಲಿ ನಿರ್ಬಂಧಗಳನ್ನು ಹೇರಲಾಗಿದೆ.

ಇತ್ತೀಚಿನ ಕೆಲ ದಿನಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಇದರೊಂದಿಗೆ ಸಮುದ್ರದ ಅಲೆಗಳಲ್ಲೂ ಏರಿಳಿತವಾಗುತ್ತಿದೆ. ಪ್ರತಿನಿತ್ಯ ಬೀಚ್‌ನಲ್ಲಿ ಜನ ಕಂಡುಬರುತ್ತಿದ್ದಾರೆ. ವಾರಾಂತ್ಯದಲ್ಲಿ ಪ್ರವಾಸಿಗರ ದಂಡೇ ಆಗಮಿಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ದೆಹಲಿಯಲ್ಲಿ ಬುಧವಾರ ಮಹತ್ವದ ಸಭೆ; ಸಿಎಂ, ಡಿಸಿಎಂ ಭಾಗಿ

ಈ ತಿಂಗಳಲ್ಲಿ ಸರಣಿ ರಜೆಗಳು ಬಂದಿದ್ದರಿಂದ ಕಡಲ ತೀರದಲ್ಲಿ ಹೆಚ್ಚು ಜನಕಂಡುಬಂದಿದ್ದಾರೆ. ಆದರೆ ನಿರ್ಬಂಧದ ಹಿನ್ನೆಲೆಯಲ್ಲಿ ಯಾವುದೇ ವಾಟರ್‌ಸ್ಪೋರ್ಟ್ಸ್ ಆಗಲಿ, ಸೈಂಟ್‌ಮೇರಿಸ್‌ ದ್ವೀಪ ಯಾನವಾಗಲಿ ಆರಂಭವಾಗಿಲ್ಲ. ಕೆಲವರು ಸೀವಾಕ್‌ ನೋಡಿ ಮರಳುತ್ತಿದ್ದಾರೆ. ಹಾರ್ಬರ್‌ ಕ್ರಾಫ್ಟ್‌ ನಿಯಮಗಳ ಅನ್ವಯ ಮಳೆಗಾಲದ ಹಿನ್ನೆಲೆಯಲ್ಲಿ ಮೇ 16ರಿಂದ ಸೆ. 15ರ ವರೆಗೆ ಬೀಚ್‌ನಲ್ಲಿ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಆದರೆ ಈ ಬಾರಿ ನಿಷೇಧದ ಅವಧಿಯನ್ನು ವಿಸ್ತರಿಸಲಾಗಿದೆ. ಹಾಗಾಗಿ ಪ್ರವಾಸಿಗರು ನಿರಾಶೆಯಿಂದ ಹಿಂದಿರುಗುತ್ತಿದ್ದಾರೆ.

“ಮಳೆಗಾಲದ ಆರಂಭದಲ್ಲಿ ವಿಧಿಸುವ 4 ತಿಂಗಳ ನಿಷೇಧವನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆ. 25ರವರೆಗೆ ಮುಂದುವರಿಸಲಾಗಿದೆ. ಸಮುದ್ರದ ಪ್ರಕ್ಷುಬ್ಧ ಸ್ಥಿತಿ ಮುಂದುವರಿದಿರುವ ಕಾರಣ ಯಾರೂ ಕೂಡ ನೀರಿಗಿಳಿಯಂದಂತೆ ಎಚ್ಚರ ವಹಿಸಲಾಗಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಪ್ರವೇಶಕ್ಕೆ ಅನುಮತಿ ನೀಡಲಾಗುವುದು” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೋಟ ಜಾಮಿಯಾ ಮಸ್ಜಿದ್ ಸಾಮಾಜಿಕ ಕಾರ್ಯ ಸೌಹಾರ್ದತೆಗೆ ಸಾಕ್ಷಿ‌ : ಇದ್ರಿಸ್ ಹೂಡೆ

ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ...

ಉಡುಪಿ | ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ...

ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ...

ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ಮಾ.21ರಂದು ಈದುಲ್ ಫಿತ್ ಆಚರಣೆ

ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಈ ವರ್ಷ ಈದುಲ್...