ಉಡುಪಿ | ‘ನಡಿಗೆ– ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’; ಹಳೆಯ ಪಾದರಕ್ಷೆಗಳ ದಾನ ಸಂಗ್ರಹಣೆ, ವಿತರಣೆಯ ವಿನೂತನ ಅಭಿಯಾನ

Date:

ರಕ್ತದಾನ, ನೇತ್ರದಾನ, ಅಂಗಾಂಗ ದಾನ, ಕೂದಲು, ಪುಸ್ತಕಗಳ ದಾನ ಹೀಗೆ ಹಲವಾರು ದಾನಗಳ ಬಗ್ಗೆ ನೀವು ಕೇಳಿರುತ್ತೀರಿ. ಹಾಗೇಯೇ ಪಾದರಕ್ಷೆ ದಾನದ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಇಲ್ಲವೆಂದಾದರೆ ಇಲ್ಲಿದೆ ಓದಿ.

‘ನಡಿಗೆ- ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಎಂಬ ಶೀರ್ಷಿಕೆಯಡಿಯಲ್ಲಿ ಸಾರ್ವಜನಿಕರಿಂದ ಬಳಸಿದ, ಸುಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ದಾನ ರೂಪದಲ್ಲಿ ಪಡೆದು ಅದನ್ನು ಹೊಸದಾಗಿ ಆರಾಮದಾಯಕ ಚಪ್ಪಲಿಯನ್ನಾಗಿ ಮಾಡಿ, ದೇಶಾದಾದ್ಯಂತ ಇರುವ ಅಶಕ್ತರಿಗೆ, ಪಾದರಕ್ಷೆರಹಿತರಿಗೆ ಉಚಿತವಾಗಿ ನೀಡುವ ವಿನೂತನ ಅಭಿಯಾನಕ್ಕೆ ಸಮಾಜ ಸೇವಕ ಅವಿನಾಶ್‌ ಕಾಮತ್‌ ಮತ್ತು ಅವರ ತಂಡ ಮುಂದಾಗಿದೆ. ಈ ವಿನೂತನ ಕಾರ್ಯದಲ್ಲಿ ಒಂದಿಡೀ ಸಮುದಾಯವೇ ಭಾಗವಹಿಸುತ್ತಿದೆ. ಈ ಅಭಿಯಾನ ಕರಾವಳಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿದೆ.

ನವೆಂಬರ್ 30ರಿಂದ ಡಿಸೆಂಬರ್ 2ರವರೆಗೆ ಉಡುಪಿಯ ಮಹಾತ್ಮಾ ಗಾಂಧಿ ಮೆಮೋರಿಯಲ್ ಕಾಲೇಜಿನ ಆವರಣದಲ್ಲಿ ಹಳೆಯ ಪಾದರಕ್ಷೆಗಳ ಬೃಹತ್ ಸಂಗ್ರಹ ಅಭಿಯಾನವ ನಡೆಯಲಿದ್ದು, ಅಲ್ಲಿ ಸಾರ್ವಜನಿಕರು ತಾವು ಬಳಸಿದ ಸುಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ದಾನ ರೂಪದಲ್ಲಿ ನೀಡಬಹುದು‌. ಅದರಲ್ಲಿ ಹೀಲ್ಸ್, ಪಾಯಿಂಟೆಡ್‌ ಶೂಸ್, 10 ವರ್ಷದವರೆಗಿನ ಮಕ್ಕಳ ಪಾದರಕ್ಷೆಗಳನ್ನು ಸ್ವೀಕರಿಸಲು ಅವಕಾಶವಿರುವುದಿಲ್ಲ. ಉಳಿದಂತೆ ಫಾರ್ಮಲ್‌ ಶೂಸ್, ಸ್ಪೋರ್ಟ್ಸ್‌ ಶೂಸ್, ರಬ್ವರ್‌ ಶೂಸ್‌ ಇತರೇ ಚಪ್ಪಲಿಗಳನ್ನು ನೀಡಬಹದು. ಸಂಗ್ರಹವಾದ ಅಷ್ಟೂ ಚಪ್ಪಲಿಗಳನ್ನು ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಗ್ರೀನ್‌ ಸೋಲೋ ಸಂಸ್ಥೆಗೆ ಕಚ್ಚಾ ವಸ್ತುಗಳ ರೂಪದಲ್ಲಿ ನೀಡಿ, ಗ್ರೀನ್‌ ಸೋಲೋ ಸಂಸ್ಥೆಯವರು ಆ ಪಾದರಕ್ಷೆಗಳಿಂದ ಹೊಸ ಆರಾಮದಾಯಕ ಚಪ್ಪಲಿಗಳನ್ನು ತಯಾರಿಸಿ ದೇಶದಾದ್ಯಂತ ಇರುವ ಅಶಕ್ತರಿಗೆ, ಪಾದರಕ್ಷೆರಹಿತರಿಗೆ ಉಚಿತವಾಗಿ ನೀಡುತ್ತಾರೆ. ಪರಿಸರಕ್ಕೆ ಪೂರಕವಾಗಿರುವ ಈ ಚಟುವಟಿಕೆಯನ್ನು ಗ್ರೀನ್‌ ಸೋಲೋ ಸಂಸ್ಥೆ 2017 ರಿಂದ ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿದೆ. ಈವರೆಗೆ ಗ್ರೀನ್‌ ಸೋಲೋ ಸಂಸ್ಥೆ 6 ಲಕ್ಷಕ್ಕೂ ಅಧಿಕ ಪಾದರಕ್ಷೆಗಳನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ಡಿಸೆಂಬರ್ 3 ರಂದು ಜರುಗುವ ಸಮಾರೋಪ ಸಮಾರಂಭದಲ್ಲಿ ಗ್ರೀನ್‌ ಸೋಲೋ ಸಂಸ್ಥಾಪಕ ರಮೇಶ್ ಛಾಮಿ ಮತ್ತು ಕ್ರಿಯಾನ್ಸ್ ಭಂಡಾರಿ ಭಾಗವಹಿಸಲಿದ್ದಾರೆ. ಅಂದು ಸಾರ್ವಜನಿಕರು ಮತ್ತು ಮಾಧ್ಯಮದ ಸಮ್ಮುಖದಲ್ಲಿ ಉಡುಪಿ ಭಾಗದ ಆಯ್ದ 75 ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಗ್ರೀನ್‌ ಸೋಲೋ ಸಂಸ್ಥೆ ಹಳೆಯ ಬಟ್ಟೆಗಳಿಂದ ತಯಾರಿಸಿರುವ ಬ್ಯಾಗ್, ಕುಳಿತುಕೊಳ್ಳಲು ಬಳಸುವ ಮ್ಯಾಟ್ ಮತ್ತು ಹಳೆಯ ಪಾದರಕ್ಷೆಗಳಿಂದ ಹೊಸದಾಗಿ ತಯಾರಿಸಿದ ಪಾದರಕ್ಷೆಗಳನ್ನು ವಿತರಿಸುತ್ತದೆ. ಕಾರ್ಯಕ್ರಮ ಮುಗಿದ ಒಂದು ತಿಂಗಳ ಅವಧಿಯೊಳಗೆ ಉಡುಪಿ ಭಾಗದ ಇನ್ನಷ್ಟು ಅಶಕ್ತ ವಿದ್ಯಾರ್ಥಿಗಳಿಗೆ ಬ್ಯಾಗ್, ಮ್ಯಾಟ್ ಮತ್ತು ಪಾದರಕ್ಷೆಗಳನ್ನು ವಿತರಿಸುತ್ತೇವೆ. ಈ ಯೋಜನೆಗೆ ಈಗಾಗಲೇ ಹಲವು ವ್ಯಕ್ತಿಗಳು ಮತ್ತು ಸಂಘ ಸಂಸ್ಥೆಗಳಿಂದ ಸಹಕಾರ ದೊರೆಯುವ ಭರವಸೆ ಸಿಕ್ಕಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭತ್ತದ ಇಳುವರಿ ಕುಸಿತ; ಎಪಿಎಂಸಿಯಲ್ಲಿ ನೆರೆ ರಾಜ್ಯಗಳ ರೈತರ ಪಾರುಪತ್ಯ

ಅಭಿಯಾನದ ಉಸ್ತುವಾರಿ ವಹಿಸಿಕೊಂಡಿರುವ ಅವಿನಾಶ್ ಕಾಮತ್‌ ಈ ದಿನ.ಕಾಮ್‌ ಜೊತೆ ಮಾತನಾಡಿ, “ಕಳೆದ ಮೂರು ತಿಂಗಳಿನಿಂದ ಈ ಅಭಿಯಾನದ ತಯಾರಿ ನಡೆಯುತ್ತಿದ್ದು, ಕರಾವಳಿ ಮಾತ್ರವಲ್ಲ ಈ ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಈ ರೀತಿಯ ಅಭಿಯಾನ ನಡೆಯುತ್ತಿದೆ. ಪರಿಸರ ಸ್ನೇಹಿ ಮತ್ತು ಸಮಾಜದಲ್ಲಿರುವ ಬಡ ನಿರ್ಗತಿಕ ಸಮುದಾಯಕ್ಕೆ ನಮ್ಮ ಕೈಯಲ್ಲಿ ಆದಷ್ಟು ನೆರವು ನೀಡುವುದೇ ನಮ್ಮ ಉದ್ದೇಶ. ಈಗಾಗಲೇ ಕುಂದಾಪುರ, ತೆಕ್ಕಟ್ಟೆ ಭಾಗದಲ್ಲಿ ಬೇರೆ ಬೇರೆ ಸಂಘ ಸಂಸ್ಥೆಗಳು ಸಾವಿರಾರು ಚಪ್ಪಲಿಗಳನ್ನು ಸಂಗ್ರಹಿಸಿ ನಮ್ಮ ಅಭಿಯಾನದ ಜೊತೆ ಕೈ ಜೋಡಿಸಿವೆ. ಕಟಪಾಡಿಯ ತ್ರಿಶಾ ಕಾಲೇಜಿನ ವಿದ್ಯಾರ್ಥಿಗಳು ಮನೆ ಮನೆಗೆ ಹೋಗಿ ಹಳೆಯ ಚಪ್ಪಲಿ, ಶೂಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ವಿನೂತನ ಅಭಿಯಾನದಲ್ಲಿ ಎಲ್ಲರೂ ಸಹಕರಿಸುತ್ತಾರೆಂಬ ಭರವಸೆ ಇದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...