ಉಳ್ಳಾಲ | ಮೀನು ಸಂಸ್ಕರಣಾ ಘಟಕಗಳಲ್ಲಿ ಕಲ್ಲಿದ್ದಲು ಬಳಸದಂತೆ ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

Date:

ಉಳ್ಳಾಲದ ಕೋಟೆಪುರ ಸಮುದ್ರ ದಂಡೆಯಲ್ಲಿರುವ ಮೀನು ಸಂಸ್ಕರಣಾ ಘಟಕಗಳಲ್ಲಿ ಹಾನಿಕಾರಕ ಕಲ್ಲಿದ್ದಲನ್ನು ಇಂಧನವಾಗಿ ಬಳಸದಂತೆ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

“ಸಮುದ್ರ ದಂಡೆಯಲ್ಲಿರುವ ಯುನೈಟೆಡ್ ಮರೈನ್ ಮತ್ತು ಇಂಡೋ ಫಿಶ್ಮೀಲ್ ಕಂಪೆನಿಗಳು ಮೀನು ಸಂಸ್ಕರಿಸಲು ಜನರ ಆರೋಗ್ಯಕ್ಕೆ ಹಾನಿಕಾರಕವಾದ ಕಲ್ಲಿದ್ದಲನ್ನು ಇಂಧನವಾಗಿ ಬಳಸುತ್ತಿವೆ. ಇದು ಅಲ್ಲಿನ ಸ್ಥಳೀಯ ಜನರಲ್ಲಿ ಆರೋಗ್ಯ ಸಮಸ್ಯೆಗಳಾದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಶ್ವಾಸಕೋಶದ ತೊಂದರೆ, ಎದೆನೋವು, ಕೆಮ್ಮು, ಉಸಿರಾಟದ ತೊಂದರೆ ಮುಂತಾದ ಗಂಭೀರ ರೋಗಗಳನ್ನು ಉಂಟು ಮಾಡುತ್ತಿದೆ. ಅಲ್ಲದೆ ಕಲ್ಲಿದ್ದಲಿನ ಬಳಕೆಯಿಂದ ಅಂತರ್ಜಲ ಕಲುಷಿತಗೊಂಡುಮತ್ತಷ್ಟು ಗಂಭೀರ ಪರಿಣಾಮಗಳನ್ನು ಸೃಷ್ಟಿಸುವ ಆತಂಕ ಹೆಚ್ಚಾಗಿದೆ. ಇದನ್ನು ಜಿಲ್ಲಾ ಆರೋಗ್ಯ ಇಲಾಖೆ ಕೂಡ ದೃಢಪಡಿಸಿದೆ. ಇಷ್ಟಾದರೂ ಸಂಸ್ಕರಣಾ ಘಟಕಗಳಲ್ಲಿ ನಿಯಮ ಮೀರಿ ಕಲ್ಲಿದ್ದಲು ಬಳಸಲಾಗುತ್ತಿದೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಕಾನೂನುಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿರುವ ಕಟ್ಟಡಗಳಿಂದಾಗಿ ನದಿಯೇ ಮುಚ್ಚಿಹೋಗಿ ಕೋಟೆಪುರ ಮತ್ತು ಮುಳಿಹಿತ್ಲು ನಡುವೆ ದೋಣಿ ಸಂಪರ್ಕ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಘಟಕಗಳು ಮೀನು ಸಂಸ್ಕರಣೆ ಮಾಡುವ ಸಂದರ್ಭದಲ್ಲಿ ಕೆಟ್ಟ ವಾಸನೆ ಹೊರ ಸೂಸುತ್ತಿದ್ದು ಇದರಿಂದ ಸ್ಥಳೀಯ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮೀನು ಸಂಸ್ಕರಣೆಯಿಂದ ಹೊರ ಬರುವ ಕೊಳೆತ ನೀರನ್ನು ಸಮುದ್ರಕ್ಕೆ ಬಿಡಲಾಗುತ್ತಿದೆ ಇದರಿಂದ ಜಲಚರ ಜೀವಿಗಳು ನಾಶವಾಗುತ್ತಿವೆ. ಘಟಕಗಳಿಂದ ನಿಯಮ ಮೀರಿದ ಶಬ್ಧಗಳು ಹೊರ ಬರುತ್ತಿದ್ದು, ಶಬ್ಧ ಮಾಲಿನ್ಯವೂ ಉಂಟಾಗುತ್ತಿದೆ. ಒಟ್ಟಾರೆಯಾಗಿ ಮೀನು ಸಂಸ್ಕರಣಾ ಘಟಕಗಳು ಪರಿಸರಕ್ಕೆ ಮಾರಕವಾಗಿದೆ” ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್‌ ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಗ್ಗೆ ಡಿವೈಎಫ್ಐ ಕಳೆದೆರಡು ವರ್ಷಗಳಲ್ಲಿ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿ ಹೋರಾಟ ಮಾಡುತ್ತಿದೆ. ಆದರೂ ಯಾವುದೇ ಇಲಾಖೆ ಸೂಕ್ತ ಕ್ರಮ ಕೈಗೊಂಡಿಲ್ಲ. ಜನರ ಪ್ರಾಣಕ್ಕೆ ಹಾನಿಯುಂಟು ಮಾಡುವ ಇಂತಹ ಘಟಕಗಳ ವಿರುದ್ದ ಶೀಘ್ರವೇ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಹಾನಿಕಾರಕ ಕಲ್ಲಿದ್ದಲನ್ನು ಇಂಧನವಾಗಿ ಬಳಸುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಉಳ್ಳಾಲ | ಬಂದೂಕು ತೋರಿಸಿ ಹಾಡಹಗಲಲ್ಲೇ ಬ್ಯಾಂಕ್ ದರೋಡೆ

ಈ ವೇಳೆ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಡಿ-ಕೋಟೆಪುರ ಘಟಕ ಅಧ್ಯಕ್ಷ ವಾಕರ್ ಕೋಟೆಪುರ, ಕಾರ್ಯದರ್ಶಿ ನೌಫಲ್ ಕೋಟೆಪುರ, ಮುಖಂಡರಾದ ಮುಝಮ್ಮಿಲ್ ಕೋಟೆಪುರ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...