ಉಳ್ಳಾಲ | ಕಡಲ ಕಿನಾರೆಯಲ್ಲಿರುವ ತ್ಯಾಜ್ಯ ಘಟಕ ತೆರವಿಗೆ ಡಿವೈಎಫ್ಐ ಆಗ್ರಹ

Date:

ಉಳ್ಳಾಲ ಕಡಲ ಕಿನಾರೆಯಲ್ಲಿರುವ ತ್ಯಾಜ್ಯ ಘಟಕವನ್ನು ತೆರವುಗೊಳಿಸಲು ಆಗ್ರಹಿಸಿ ಉಳ್ಳಾಲ ನಗರ ಸಭೆಯ ವಿರುದ್ದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು.

ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್ ಮಾತನಾಡಿ, “ಉಳ್ಳಾಲದ ಕಡಲ ಕಿನಾರೆಗೆ ದೇಶದ ಮೂಲೆಮೂಲೆಗಳಿಂದ ಪ್ರವಾಸಿಗರು ಬರುತ್ತಾರೆ. ಆದರೆ, ಆ ಪ್ರವಾಸಿಗರು ಬೀಚ್ ಪ್ರವೇಶಿಸುವಾಗ ಮೂಗು ಮುಚ್ಚಿಕೊಂಡು ಬರಬೇಕಾದ ಪರಿಸ್ಥಿತಿಯನ್ನು ಇಲ್ಲಿನ ನಗರ ಸಭೆ ಮಾಡಿದೆ. ನಗರ ಮುಖ್ಯ ರಸ್ತೆ ಬದಿಯಲ್ಲಿಯೇ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ. ಸುಂದರವಾದ ಕಡಲ ಕಿನಾರೆಯಲ್ಲಿ ದುರ್ನಾತ ಬೀರುತ್ತಿದೆ. ಮೂಕ ಪ್ರಾಣಿಗಳು ಆ ತ್ಯಾಜ್ಯ ತುಂಬಿದ ಪ್ಲಾಸ್ಟಿಕ್ ಗಳನ್ನು ಎಳೆದುಕೊಂಡು ಹೋಗಿ ಎಲ್ಲೆಂದರಲ್ಲಿ ಬಿಸಾಕುತ್ತಿವೆ. ತ್ಯಾಜ್ಯ ಘಟಕದ ಹತ್ತಿರ ಜನವಸತಿ ಪ್ರದೇಶ ಇದ್ದು ಮನೆಯಿಂದ ಹೆೊರಬರದ ಪರಿಸ್ಥಿತಿ ಉಂಟಾಗಿದೆ” ಎಂದು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 04 10 at 12.52.32 PM

“ಹತ್ತಿರದಲ್ಲೇ ಸಾರ್ವಜನಿಕ ಶೌಚಾಲಯ ಇದ್ದರೂ ಘಟಕದ ದುರ್ನಾತದಿಂದ ಪ್ರವಾಸಿಗರು ಉಪಯೋಗ ಮಾಡಲಾಗದೆ ಪಾಳುಬಿದ್ದಿದೆ. ಇಷ್ಟೆಲ್ಲಾ ಅವ್ಯವಸ್ಥೆಗಳ ಆಗರವಾಗಿರುವ ಈ ತ್ಯಾಜ್ಯ ಘಟವನ್ನು ಕೂಡಲೇ ಇಲ್ಲಿಂದ ವರ್ಗಾಯಿಸಬೇಕು. ಇಲ್ಲವಾದಲ್ಲಿ ಉಳ್ಳಾಲ ನಗರ ಸಭೆಯ ಮುಂಭಾಗ ತಂದು ಸುರಿಯತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಬಂಜಾರ ಸಮುದಾಯ ಸಂಘಟನೆಯಲ್ಲಿ ಸಂತ ಸೇವಾಲಾಲ್ ಪಾತ್ರ ಅಪಾರ: ಉಳ್ಳಾಲ್

ಪ್ರವಾಸಿಗರಿಗೆ ಡಿವೈಎಫ್ಐ ಕಾರ್ಯಕರ್ತರು ಮಾಸ್ಕ್ ವಿತರಣೆ ಮಾಡಿದರು. ಡಿವೈಎಫ್ಐ ಉಳ್ಳಾಲ ಕಾರ್ಯದರ್ಶಿ ರಿಝ್ವಾನ್ ಹರೇಕಳ, ಕೋಶಾಧಿಕಾರಿ ಅಶ್ಫಾಕ್ ಅಲೇಕಳ, ಮುಖಂಡರಾದ ಅಮೀರ್ ಉಳ್ಳಾಲಬೈಲ್, ರಿಯಾಝ್ ಮಂಗಳೂರು, ನೌಫಲ್ ಅಲೇಕಳ, ಖಲೀಲ್ ಉಳ್ಳಾಲಬೈಲ್ ಉಪಸ್ಥಿತರಿದ್ದರು.

image 7 1 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...