ಮಂಗಳೂರು | ಚೆಂಬುಗುಡ್ಡೆ ಘಟನೆ: ರಾತ್ರೋರಾತ್ರಿ ಶಾಸಕ ಯು ಟಿ ಖಾದರ್ ವಿರುದ್ಧ ಡಿವೈಎಫ್‌ಐ ಪ್ರತಿಭಟನೆ

Date:

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿಯ ವತಿಯಿಂದ ಶನಿವಾರ ತಡರಾತ್ರಿ ಚೆಂಬುಗುಡ್ಡೆಯಲ್ಲಿ ನಾಗರಿಕರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ಅಧ್ಯಕ್ಷ ನ್ಯಾಯವಾದಿ ನಿತಿನ್ ಕುತ್ತಾರ್, “ಉಳ್ಳಾಲದ ಶಾಸಕರಾದ ಸ್ಪೀಕರ್ ಯು.ಟಿ.ಖಾದರ್ ಈ ರಸ್ತೆಯನ್ನು ಟೋಲ್ ಮುಕ್ತ ರಸ್ತೆ ಎಂದು ಜಂಭ ಕೊಚ್ಚಿಕೊಳ್ಳುತ್ತಾರೆ. ಇವತ್ತು ಇಲ್ಲಿ ಅಪಘಾತ ಸಂಭವಿಸಿ ಒಂದು ಮಹಿಳೆಯ ಪ್ರಾಣವೇ ಹೋಗಿದೆ. ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗದ ಇವರು ಯಾವ ಸೀಮೆಯ ಅಭಿವೃದ್ದಿಯ ಹರಿಕಾರ” ಎಂದು ಹರಿಹಾಯ್ದರು.ಇನ್ನೊಂದು ವಾರದಲ್ಲಿ ಈ ರಸ್ತೆಯನ್ನು ಸರಿಪಡಿಸದೇ ಇದ್ದಲ್ಲಿ ಶಾಸಕರ ಕಛೇರಿಗೆ ತೆರಳಿ ಕಪ್ಪು ಬಾವುಟ ಹಿಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

IMG 20241110 WA0057

ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಸುಂದರವಾಗಿದ್ದ ತೊಕ್ಕೊಟ್ಟು ಪೇಟೆಯನ್ನು ಹಾಳು ಮಾಡಿದ್ದಾರೆ. ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟಲು ಪರದಾಟುತ್ತಿದ್ದಾರೆ. ರಸ್ತೆಗಳೆಲ್ಲವೂ ಮರಣ ಗುಂಡಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ಉಪಾಧ್ಯಕ್ಷರಾದ ರಝಾಕ್ ಮುಡಿಪು,ಅಶ್ರಫ್ ಹರೇಕಳ ಕೋಶಾಧಿಕಾರಿ ಅಶ್ಫಾಕ್ ಅಲೇಕಳ, ಮುಖಂಡರಾದ ರಝಾಕ್ ಮೊಂಟೆಪದವು, ವಿಕಾಸ್ ಕುತ್ತಾರ್, ಅಲ್ತಾಫ್ ಮುಡಿಪು, ಸಿರಾಜ್ ಮೊಂಟೆಪದವು, ಅಕ್ಷಿತ್ ಕುತ್ತಾರ್,ಇಕ್ಬಾಲ್ ಹರೇಕಳ,ಹೈದರ್ ಆಲಡ್ಕ,ಬಶೀರ್ ಲಚ್ಚಿಲ್,ನೌಫಲ್ ಅಲೇಕಳ,ಸರ್ಫರಾಜ್ ಗಂಡಿ,ಅನ್ಸಾರ್ ಖಂಡಿಗ,ಶಾಫಿ ಮುಡಿಪು,ದಿವ್ಯರಾಜ್ ಕುತ್ತಾರ್,ರಫೀಕ್ ಹರೇಕಳ,ಇಬ್ರಾಹಿಂ ಮದಕ ಉಪಸ್ಥಿತರಿದ್ದರು. ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಸ್ವಾಗತಿಸಿ ವಂದಿಸಿದರು.

IMG 20241110 WA0063
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...