ಉಳ್ಳಾಲ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಏ.29ರಂದು ಬೃಹತ್ ಸಮಾವೇಶ

Date:

ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಜನಸಾಮಾನ್ಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಏಪ್ರಿಲ್ 29ರಂದು ದೇರಳಕಟ್ಟೆ ಜಂಕ್ಷನ್‌ನಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) ವತಿಯಿಂದ ಬೃಹತ್ ಮೆರವಣಿಗೆ ಹಾಗೂ ಹಕ್ಕೊತ್ತಾಯ ಸಮಾವೇಶ ಆಯೋಜಿಸಲಾಗಿದೆ.

ಸಮಾವೇಶದ ಪೂರ್ವಭಾವಿಯಾಗಿ ನಡೆದ ಪಕ್ಷದ ಕಾರ್ಯಕರ್ತರ ಹಾಗೂ ಹಿತೈಷಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ ಯಾದವ ಶೆಟ್ಟಿ, “ಉಳ್ಳಾಲ ತಾಲೂಕು ರಚನೆಯಾಗಿ 5 ವರ್ಷಗಳು ಕಳೆದರೂ ಇನ್ನೂ ಕೂಡ ಇಲ್ಲಿನ ಜನತೆ ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜ್, ಕಾರ್ಪೊರೇಟ್ ಆಸ್ಪತ್ರೆ, ವ್ರತ್ತಿಪರ ಕಾಲೇಜ್ ಗಳಿಂದ ತುಂಬಿ ತುಳುಕುತ್ತಿರುವ ಉಳ್ಳಾಲ ತಾಲೂಕು ಭಾರೀ ಅಭಿವೃದ್ಧಿಯ ನಾಗಾಲೋಟದಲ್ಲಿ ಇದ್ದಂತೆ ಭಾಸವಾದರೂ, ಇದರ ಹಿಂದೆ ಅಗಾಧವಾದ ಸಮಸ್ಯೆಗಳಿವೆ. ಜನಸಾಮಾನ್ಯರ ಬವಣೆಗಳನ್ನು ಕೇಳುವ ಗತಿ ಇಲ್ಲದಂತಾಗಿದೆ. ಇದರ ವಿರುದ್ಧ ಪ್ರಬಲ ಜನಚಳುವಳಿ ಹೋರಾಟ ಬೆಳೆದು ಬಂದರೆ ಮಾತ್ರವೇ ಉಳ್ಳಾಲ ತಾಲೂಕು ಅಭಿವೃದ್ಧಿ ಹೊಂದಲು ಸಾಧ್ಯ” ಎಂದು ಹೇಳಿದರು.

WhatsApp Image 2025 04 08 at 10.57.56 AM 1

ಸಿಪಿಐಎಂ ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಇರುವ ಸುಸಜ್ಜಿತವಾದ ತಾಲೂಕು ಕಚೇರಿ ಹೊಂದುವ ಭಾಗ್ಯ ಇನ್ನೂ ಉಳ್ಳಾಲಕ್ಕೆ ಒದಗಿ ಬಂದಿಲ್ಲ. ಶಿಕ್ಷಣ, ಉದ್ಯೋಗ, ಆರೋಗ್ಯ ಕ್ಷೇತ್ರಗಳು ಸಂಪೂರ್ಣ ವಾಣಿಜ್ಯೀಕರಣಗೊಂಡು ಬಡವರ ಸಂಕಷ್ಟವನ್ನು ಹೇಳತೀರದಾಗಿದೆ. ನಿವೇಶನ ರಹಿತರ ಪಟ್ಟಿ ಹಾಗೂ ನಿವೇಶನವನ್ನು ಇನ್ನೂ ಕಾದಿರಿಸಿಲ್ಲ. ಕೃಷಿಯೋಗ್ಯವಾದ ಭೂಮಿ ನವ ಭೂಮಾಲಿಕರ ಕೈಸೇರುವ ಮೂಲಕ ಭೂಮಾಫಿಯಾ ಬೆಳೆಯುತ್ತಿದೆ. ಇಂತಹ ಹಲವು ರೀತಿಯ ಸಮಸ್ಯೆಗಳನ್ನು ಮುಂದಿಟ್ಟು ಎಲ್ಲಾ ವಿಭಾಗದವರನ್ನು ಸೇರಿಸಿ ಏ.29ರಂದು ನಡೆಯಲಿರುವ ಸಮಾವೇಶದಲ್ಲಿ ಉಳ್ಳಾಲ ತಾಲೂಕಿನ ಜನತೆ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುಕುಮಾರ್‌, ಪಕ್ಷದ ಹಿರಿಯ ಮುಖಂಡ ಕೃಷ್ಣಪ್ಪ ಸಾಲ್ಯಾನ್‌ ಹಾಗೂ ಇತರರ ನೇತೃತ್ವದಲ್ಲಿ ಹಕ್ಕೊತ್ತಾಯ ಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

WhatsApp Image 2025 04 08 at 10.57.55 AM

ಇದನ್ನೂ ಓದಿ: ಮಂಗಳೂರು | ಬಂಜಾರ ಸಮುದಾಯ ಸಂಘಟನೆಯಲ್ಲಿ ಸಂತ ಸೇವಾಲಾಲ್ ಪಾತ್ರ ಅಪಾರ: ಉಳ್ಳಾಲ್

ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ರಫೀಕ್‌ ಹರೇಕಳ, ಶೇಖರ್ ಕುಂದರ್, ಸುಂದರ ಕುಂಪಲ, ರೋಹಿದಾಸ್, ಕಟ್ಟಡ ಕಾರ್ಮಿಕರ ಸಂಘಟನೆಯ ಅಧ್ಯಕ್ಷ ಜನಾರ್ದನ ಕುತ್ತಾರ್, ಡಿವೈಎಫ್‌ಐ ಉಳ್ಳಾಲ ತಾಲೂಕು ಅಧ್ಯಕ್ಷ ನಿತಿನ್ ಕುತ್ತಾರ್, ದಲಿತ ಹಕ್ಕುಗಳ ಸಮಿತಿಯ ವಿಶ್ವನಾಥ ಮಂಜನಾಡಿ, ದ್ವೀಪವಾಸಿಗಳ ಹೋರಾಟ ಸಮಿತಿಯ ಮುಖಂಡರಾದ ಸುನೀತಾ ಡಿಸೋಜ, ಬೀದಿಬದಿ ವ್ಯಾಪಾರಸ್ಥರ ಸಂಘದ ಮುಖಂಡ ವಿನಾಯಕ ಶೆಣೈ, ಕೋಟೆಕಾರ್ ಬ್ಯಾಂಕ್ ನಿರ್ದೇಶಕ ಕೃಷ್ಣಪ್ಪ ದೇರಳಕಟ್ಟೆ, ಪ್ರಗತಿಪರ ಚಿಂತಕ ರಮೇಶ್ ಉಳ್ಳಾಲ, ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಅಡ್ಯಂತಾಯ, ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು, ರೈತರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...