ಉಳ್ಳಾಲ | ದೇಶದ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿವೆ: ಸಂತೋಷ್ ಬಜಾಲ್

Date:

ಈ ದೇಶದ ಪ್ರತಿಷ್ಠಿತ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿವೆ ಎಂದು ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಆಫ್‌ ಇಂಡಿಯಾ (ಡಿವೈಎಫ್ಐ)ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಂತೋಷ್‌ ಬಜಾಲ್‌ ಹೇಳಿದರು.

ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಸಾಂಗತ್ಯ ಬಳಗ ಭಗತ್ ಸಿಂಗ್ ಟ್ರೋಫಿ-2025 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ ಉಳ್ಳಾಲ ಬೈಲ್ ಕೀರ್ತಿ ಮೈದಾನದಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಒಂದು ಕಾಲದಲ್ಲಿ ಗುಜರಾತ್ ಕ್ರಿಕೆಟ್ ಅಸೋಸಿಯೇಶನ್ನ ಅಧ್ಯಕ್ಷ ಸ್ಥಾನ ನರೇಂದ್ರ ಮೋದಿ ಅವರ ಕೈಯಲ್ಲಿತ್ತು. ಕ್ರಿಕೆಟ್ ಬಗ್ಗೆ ಗಂಧ ಗಾಳಿಯೇ ಗೊತ್ತಿಲ್ಲದ ಅಮಿತ್ ಷಾ ರವರ ಮಗ ಜಯ್ ಷಾ ಈಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ದೇಶದಲ್ಲಿರುವ ಅರ್ಹ ಯುವ ಪ್ರತಿಭೆಗಳಿಗೆ ಅವಕಾಶಗಳು ದೆೊರೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2025 02 24 at 9.57.07 AM

ಪಂದ್ಯಾಕೂಟದಲ್ಲಿ 16 ತಂಡಗಳು ಭಾಗವಹಿಸಿದ್ದವು. ʼಕೀರ್ತಿ ಸ್ಪೋರ್ಟ್ಸ್ ಕ್ಲಬ್ ಉಳ್ಳಾಲʼ ಬೈಲ್ ಪಂದ್ಯಾಕೂಟದ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ʼವೀರಾಂಜನೇಯ ಕುತ್ತಾರುʼ ತಂಡ ರನ್ನರ್ಸ್ ಅಪ್ ಪಡೆದುಕೊಂಡಿತು. ಪಂದ್ಯಾಕೂಟದ ಉತ್ತಮ ಬ್ಯಾಟರ್ ಆಗಿ ವೀರಾಂಜನೇಯ ತಂಡದ ವಂಶಿಕ್ ಉತ್ತಮ ಬೌಲರ್ ಆಗಿ ಗುರುದತ್ ಮೂಡಿಬಂದರು. ಕೀರ್ತಿ ಸ್ಪೋರ್ಟ್ಸ್ ತಂಡದ ತ್ವಾಯಿಫ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಹಾಗೂ ನಿಝಾಮ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಬಂಜಾರ ಸಮುದಾಯ ಸಂಘಟನೆಯಲ್ಲಿ ಸಂತ ಸೇವಾಲಾಲ್ ಪಾತ್ರ ಅಪಾರ: ಉಳ್ಳಾಲ್

ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಜಿದ್ ಉಳ್ಳಾಲ, ಕೀರ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಫಾರೂಕ್, ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷ ಅಡ್ವೊಕೇಟ್ ನಿತಿನ್ ಕುತ್ತಾರ್, ಜೀವನ್ ರಾಜ್ ಕುತ್ತಾರ್, ಹರೇಕಳ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಹರೇಕಳ, ಸುನೀಲ್ ತೇವುಲ, ಅಶ್ಫಾಕ್ ಅಲೇಕಳ, ಅಮೀರ್ ಉಳ್ಳಾಲ ಬೈಲ್, ರಝಾಕ್ ಮೊಂಟೆಪದವು, ಶರೀಫ್ ಮೊಂಟೆಪದವು, ಮಿಥುನ್ ಕುತ್ತಾರ್, ರಝಾಕ್ ಮುಡಿಪು, ನವೀಝ್ ಉಳ್ಳಾಲ ಬೈಲ್ ಉಪಸ್ಥಿತರಿದ್ದರು. ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಮುಂತಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...