ಉಳ್ಳಾಲ | ರೈಲ್ವೆ ಟ್ರ್ಯಾಕ್‌ ಅಂಡರ್‌ಪಾಸ್‌ ಕಾಮಗಾರಿಗೆ ರೈಲ್ವೆಯಿಂದ ಗ್ರೀನ್ ಸಿಗ್ನಲ್

Date:

ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲ ಬೈಲ್‌ವರೆಗೆ ರೂ.35 ಕೋಟಿ ವೆಚ್ಚದಲ್ಲಿ ಅಗಲೀಕರಣ ಕಾಮಗಾರಿ ಶೀಘ್ರದಲ್ಲೇ ನಡೆಯಲಿದೆ. ಕಳೆದ 75 ವರ್ಷಗಳಿಂದ ದೊಡ್ಡ ಬೇಡಿಕೆಯಾಗಿದ್ದ, ಒಳಪೇಟೆ ಸಂಪರ್ಕಿಸುವ ರೈಲ್ವೆ ಟ್ರಾಕ್‌ಗೆ ಅಂಡರ್‌ಪಾಸ್‌ ಕಾಮಗಾರಿ ನಡೆಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆ ರೂ.2 ಕೋಟಿ ವೆಚ್ಚದಲ್ಲಿ ಅಂಡರ್‌ಪಾಸ್‌ ಕಾಮಗಾರಿ ನಡೆಯಲಿದೆ ಎಂದು ಸ್ಪೀಕರ್ ಯು.ಟಿ.ಖಾದ‌ರ್ ಹೇಳಿದರು.

ಅವರು ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೆ ಹಳಿಗೆ ಅಂಡರ್‌ಪಾಸ್‌ ನಿರ್ಮಾಣ ಮತ್ತು ರೈಲ್ವೆ ಓವರ್‌ಬ್ರಿಡ್ಜ್ ಅಗಲೀಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.

ಇದನ್ನೂ ಓದಿ: ಶಕ್ತಿಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೊಕ್ಕೊಟ್ಟು ಒಳಪೇಟೆ ಉಳ್ಳಾಲದ ಕೇಂದ್ರ ಪ್ರದೇಶ, ರಾಷ್ಟ್ರೀಯ ಹೆದ್ದಾರಿಯಿಂದ ಉಳ್ಳಾಲ ನಗರಕ್ಕೆ ಸಂಪರ್ಕಿಸುವ ಕೊಂಡಿ ರಸ್ತೆಯಾಗಿದ್ದು, ರೈಲ್ವೆ ಹಳಿಯನ್ನು ದಾಟಿಕೊಂಡು ಸಾರ್ವಜನಿಕ ಮೈದಾನ, ಮಾರ್ಕೆಟ್, ಶಾಲಾ-ಕಾಲೇಜು, ದರ್ಗಾ, ದೇವಸ್ಥಾನ, ಚರ್ಚ್‌ಗೆ ನಿತ್ಯ ಸಾವಿರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೋಗುತ್ತಿದ್ದಾರೆ. ರೈಲ್ವೆ ಹಳಿ ದಾಟುವ ವೇಳೆ ಕೆಲವು ಕಡೆ ಅನಾಹುತಗಳು ಆಗಿದ್ದವು, ಇದರ ಬಗ್ಗೆ ರೈಲ್ವೆಯವರು ಬಹಳಷ್ಟು ವರ್ಷದಿಂದ ಈ ರಸ್ತೆಯನ್ನು ಬಂದ್‌ ಮಾಡಲು ಬೇಡಿಕೆಯನ್ನಿಟ್ಟಿದ್ದರು.

ಕಳೆದ ವರ್ಷ ರೈಲ್ವೆಯವರು ಕೆಲವೊಂದು ಪ್ರದೇಶದಲ್ಲಿ ಸಾವು ನೋವು ಆದ್ದರಿಂದ ಜನಸಾಮಾನ್ಯರ ಹಿತದೃಷ್ಟಿಯ ಉದ್ದೇಶದಿಂದ ಈ ಗೇಟ್ ಬಂದ್ ಮಾಡುವುದು ಅನಿವಾರ್ಯ ಎಂದಾಗ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಜಿಲ್ಲಾಧಿಕಾರಿ ವರದಿಯಂತೆ ರೈಲ್ವೆ ಸಚಿವ ಸೋಮಣ್ಣ ಅವರು ಮಂಗಳೂರಿಗೆ ಬಂದಾಗ ಮನವರಿಕೆ ಮಾಡಿದ್ದರು. ಇದೀಗ ಕೇಂದ್ರ ರೈಲ್ವೆ ಇಲಾಖೆಯವರು ಅಂಡರ್‌ಪಾಸ್‌ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದರು.‌

ಇದನ್ನೂ ಓದಿ: ಮಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಬಸ್

ಈ ಅಂಡರ್‌ಪಾಸ್‌ನಲ್ಲಿ ಜನಸಾಮಾನ್ಯರು ನಡೆದುಕೊಂಡು ಹೋಗಲು ಮತ್ತು ದ್ವಿಚಕ್ರ ವಾಹನ ಸಂಚರಿಸಲು ಅವಕಾಶ ಇದೆ. ಇದರೊಂದಿಗೆ ಉಳ್ಳಾಲ ನಗರವನ್ನು ಸಂಪರ್ಕಿಸುವ ಓವರ್‌ಬ್ರಿಡ್ಜ್ ಅಗಲೀಕರಣಕ್ಕೂ ಒಪ್ಪಿಗೆ ಸಿಕ್ಕಿದ್ದು ರೂ.3 ಕೋಟಿ ವೆಚ್ಚದಲ್ಲಿ ಅಗಲೀಕರಣ ಕಾಮಗಾರಿ ನಡೆಯಲಿದೆ.

ಈಗಾಗಲೇ ಉಳ್ಳಾಲ ಜಂಕ್ಷನ್‌ನಿಂದ ಉಳ್ಳಾಲ ಬೈಲುವರೆಗೆ ದ್ವಿಪಥ ರಸ್ತೆಯೊಂದಿಗೆ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಉಳ್ಳಾಲ ಬೈಲ್‌ನಿಂದ ರಾಷ್ಟ್ರೀಯ ಹೆದ್ದಾರಿ 66ರ ಸಂಪರ್ಕಿಸುವ ತೊಕ್ಕೊಟ್ಟು ಓವರ್‌ಬ್ರಿಡ್‌ವರೆಗೆ ರಸ್ತೆ ಅಗಲೀಕರಣಕ್ಕೆ ರೂ.35ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, ಯೋಜನೆ ಸಿದ್ಧಗೊಂಡು ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಬಾಕಿ ಇದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...