ಚಾಮರಾಜನಗರ | ಘೋಷಿತ ತುರ್ತು ಪರಿಸ್ಥಿತಿಗಿಂತ ಅಘೋಷಿತ ತುರ್ತು ಪರಿಸ್ಥಿತಿ ಅತ್ಯಂತ ಅಪಾಯಕಾರಿ : ಅರವಿಂದ ನಾರಾಯಣ

Date:

ಚಾಮರಾಜನಗರದ ರೋಟರಿ ಭವನದಲ್ಲಿ ಪಿಯುಸಿಎಲ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ರೋಟರಿ ಸಂಸ್ಥೆ ಸಹಯೋಗದಲ್ಲಿ ಶನಿವಾರ ಸಂಜೆ ನಡೆದ ಹಿರಿಯ ಪತ್ರಕರ್ತ ಅಬ್ರಹಾಂ ಡಿ. ಸಿಲ್ವಾ ಅವರ ‘ ತುರ್ತು ಪರಿಸ್ಥಿತಿ ಸೆರೆವಾಸದ ಆ ದಿನಗಳು ‘ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಿಯುಸಿಎಲ್ ರಾಜ್ಯಾಧ್ಯಕ್ಷ ಅರವಿಂದ ನಾರಾಯಣ ಮಾತನಾಡಿ ‘ ಘೋಷಿತ ತುರ್ತು ಪರಿಸ್ಥಿತಿಗಿಂತ ಅಘೋಷಿತ ತುರ್ತು ಪರಿಸ್ಥಿತಿ ಅತ್ಯಂತ ಅಪಾಯಕಾರಿ ‘ ಎಂದರು.

” 1975 ರಿಂದ 1977 ರ ವರಗೆ ದೇಶಾದ್ಯಂತ ಭಾರತ ಸರ್ಕಾರ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದಲ್ಲಿ ಸರ್ಕಾರ ಮಾಡಿದ್ದೆ ಕಾನೂನಾಗಿತ್ತು. ಸರ್ಕಾರದ ವಿರುದ್ಧ ಪ್ರಶ್ನಿಸುವವರನ್ನು ಜೈಲಿಗೆ ಕಳುಹಿಸಲಾಗುತ್ತಿತ್ತು. ಮಾಧ್ಯಮಗಳ ಮೇಲೂ ನಿರ್ಬಂಧ ಹೇರಲಾಗಿತ್ತು. ದೇಶದಲ್ಲಿ ಒಂದು ರೀತಿಯ ಅಘೋಷಿತ ಸರ್ವಧಿಕಾರಿ ಧೋರಣೆಯ ಆಡಳಿತವಿತ್ತು ” ಎಂದು ವಿಷಾಧಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪಿಯುಸಿಎಲ್ ಉಪಾಧ್ಯಕ್ಷ ಕೆ. ವೆಂಕಟರಾಜು ” ಸಮಾಜದಲ್ಲಿ ಸರ್ವರೂ ಸ್ವತಂತ್ರರು ಅವರವರ ಉಡುಗೆ, ತೊಡುಗೆ, ಆಹಾರ ಕ್ರಮ ಅವರಿಚ್ಚೆ. ಆದರೆ, ಬದಲಾದ ಸಂದರ್ಭದಲ್ಲಿ ತಿನ್ನುವ ಆಹಾರ, ಉಡುವ ಬಟ್ಟೆಗೂ ಭಯ ಪಡುವ ಅಗತ್ಯತೆ ಎದುರಾಗಿದೆ. ಯಾವುದೇ ಹೋರಾಟ ನಡೆಸಬೇಕಾದರೆ ಸಂವಿಧಾನ ಅವಲಂಬಿಸಿದ್ದೇವೆ, ಸಾಮಾಜಿಕ ಅಸಮಾನತೆ, ಆರ್ಥಿಕ ಅಸಮಾನತೆ ಹೋಗಲಾಡಿಸಬೇಕಾದರೆ ಸಂವಿಧಾನದಿಂದ ಮಾತ ಸಾಧ್ಯ ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗನವಾಡಿ ಕೇಂದ್ರವೊಂದರಲ್ಲಿ ಹುಳ ಹುಪ್ಪಟೆ ಮಿಶ್ರಿತ ಕಳಪೆ ಆಹಾರ ಕೊಡುತ್ತಿದ್ದ ಪ್ರಕರಣವನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಐತಿಹಾಸಿಕ ತೀರ್ಪು ಪಡೆದಿರುವುದು. ಮಲೆ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತಗಟ್ಟೆ ಧ್ವಂಸ ಪ್ರಕರಣ, ಗುಂಡ್ಲು ಪೇಟೆಯ ಗುಮ್ಮಕಲ್ಲು ಗುಡ್ಡ ಕುಸಿದು ಕಾರ್ಮಿಕರು ಸಾವಿಗೀಡಾದ ಪ್ರಕರಣಗಳನ್ನು ಸತ್ಯಶೋಧನೆ ನಡೆಸಿ ಸರ್ಕಾರದ ಮುಂದಿಡುತ್ತಾ ಬಂದಿದೆ ಪಿಯುಸಿಎಲ್ ಮುಂದೆಯೂ ಇಂತಹ ಹೋರಾಟ ನಡೆಸಲಿದ್ದೇವೆ ಎಂದರು.

ಹಿರಿಯ ಪತ್ರಕರ್ತ ಅಬ್ರಹಾಂ ಡಿ. ಸಿಲ್ವ ಅವರ ಮೊಮ್ಮಗಳಾದ ಕುಮಾರಿ ಇಂಪನ ‘ ತುರ್ತು ಪರಿಸ್ಥಿತಿಯ ಸೆರೆವಾಸದೆ ಆ ದಿನಗಳು ‘ ಕೃತಿಯನ್ನು ಲೋಕಾರ್ಪಣೆ ಮಾಡಿದಳು. ಪಿಯುಸಿಎಲ್ ಜಿಲ್ಲಾಧ್ಯಕ್ಷ ಪುಣಜನೂರು ದೊರೆಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಕಲ್ಪ; ಗಮನ ಸೆಳೆದ ವಾಕಥಾನ್

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಪ್ರಕಾಶ್ ರಾಜ್ ಮೇಹು, ಲೇಖಕ ನಂಜನಗೂಡು ಕೆ. ಜೆ. ಅಲಮೇಲು, ರೋಟರಿ ಅಧ್ಯಕ್ಷ ನಾಗರಾಜು, ಸಾಹಿತಿ ಹೊರೆಯಾಲ ದೊರೆಸ್ವಾಮಿ, ಅಪೂರ್ವ ಡಿ. ಸಿಲ್ವ, ಪುನರ್ಚಿತ್ ಸಂಸ್ಥೆಯ ವೀರಭದ್ರ ನಾಯಕ, ಕೊಣನೂರು ನಾಗರಾಜು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...