ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

Date:

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು ಹವಾಮಾನ ಬದಲಾವಣೆಯಿಂದಾಗುವ ಸಮಸ್ಯೆಗಳನ್ನು ಸೂಕ್ತವಾಗಿ ಅರಿತುಕೊಳ್ಳುವುದು ಅವಶ್ಯಕವಾಗಿದೆ ಎಂದು ಹವಾಮಾನ ವೈಪರೀತ್ಯ ನಿರ್ವಹಣೆ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದರು.

ಬಿಬಿಎಂಪಿ ಕೇಂದ್ರ ಕಛೇರಿಯ ಆವರಣದಲ್ಲಿರುವ ನೌಕರರ ಭವನದಲ್ಲಿ ಪಾಲಿಕೆಯ ಹವಾಮಾನ ಕ್ರಿಯಾ ಕೋಶವು ಆಯೋಜಿಸಿದ್ದ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ದಿನ ನಿತ್ಯದ ಜೀವನದಲ್ಲಿ ಮಿತವಾದ ನೀರಿನ ಬಳಕೆ, ಎ.ಸಿ ಬಳಕೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವಂತಹ ಚಿಕ್ಕ ಪುಟ್ಟ ಹೊಂದಾಣಿಕೆಗಳನ್ನು ದೀರ್ಘಕಾಲದವರೆಗೆ ನಡೆಸಿದಾಗ ಹವಾಮಾನ ಬದಲಾವಣೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಬಹುದು. ಪರಿಸರ, ಹವಾಮಾನಕ್ಕೆ ಹಾನಿಕಾರಕವಾಗುವ ವಸ್ತುಗಳ ಬದಲಾಗಿ ಪರಿಸರ ಸ್ನೇಹಿ ಪರ್ಯಾಯಗಳನ್ನು ಬಳಸಬೇಕಿದೆ ಹಾಗೂ ಬಳಸುವಂತೆ ಎಲ್ಲರನ್ನೂ ಉತ್ತೇಜಿಸಬೇಕಿದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಕಾಲೇಜುಗಳಲ್ಲಿನ ಹವಾಮಾನ ಕ್ರಿಯಾಬಳಗದ ಚಟುವಟಿಕೆಯಲ್ಲಿನ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಮಕ್ಕಳ ಹವಾಮಾನ ಬದಲಾವಣೆಯೆಡೆಗಿನ ವಿಚಾರಗಳು, ವಿಕಸನಗೊಳ್ಳುತ್ತದೆ, ಹೆಚ್ಚಿನ ಮಕ್ಕಳು ಚಟುವಟಿಕೆಗಳ ಭಾಗವಾಗುತ್ತಾರೆ. ಈಗಾಗಲೇ 770 ಕ್ಕೂ ಹೆಚ್ಚಿನ ಶಾಲಾ ಕಾಲೇಜುಗಳು ಹವಾಮಾನ ಕ್ರಿಯಾಬಳಗಗಳ ರಚನೆಗಾಗಿ ನೋಂದಣಿ ಮಾಡಿಕೊಂಡಿವೆ. ನೋಂದಣಿಯಾಗದ ಶಾಲಾ ಕಾಲೇಜುಗಳು ನೋಂದಣಿ ಮಾಡಿಕೊಳ್ಳುವಂತೆ ವಿನಂತಿಸಿದರು.

WhatsApp Image 2025 08 18 at 6.55.17 PM

ಹವಾಮಾನ ಬದಲಾವಣೆಗೆ ಕಾರಣವಾಗುವ ಮುಖ್ಯ 4 ಅಂಶಗಳಾದ ನೀರು, ತ್ಯಾಜ್ಯ, ಶಕ್ತಿ ಹಾಗೂ ಹಸಿರೀಕರಣ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಾಗಿರುವ ಹಾಗೂ ಹವಾಮಾನ ಪ್ರಜ್ಞೆಯುಳ್ಳ ಚಟುವಟಿಕೆಗಳತ್ತ ಅವರು ತೋರಿದ ಬದ್ಧತೆಗಾಗಿ 12 ಶಾಲಾ ಕಾಲೇಜುಗಳನ್ನು ಗೌರವಿಸಲಿದ್ದು, ಇಂದು 6 ಶಾಲಾ ಕಾಲೇಜುಗಳಿಗೆ ಪ್ರಮಾಣ ಪತ್ರವನ್ನು ನೀಡಿ, ಮಕ್ಕಳನ್ನು ಪ್ರೋತ್ಸಾಹಿಸಲಾಯಿತು.

ಈ ವರ್ಷದ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಶಾಲಾ ಕಾಲೇಜುಗಳು ತಮ್ಮ ಚಟುವಟಿಕೆಗಳನ್ನು ಯೋಜಿಸಬಹುದಾದ ರೀತಿಯಲ್ಲಿ ಅಂತಿಮಗೊಳಿಸಲಾಗಿದೆ. ಅದನ್ನು ಶೀಘ್ರದಲ್ಲೇ ಹವಾಮಾನ ಕ್ರಿಯಾ ಬಳಗಗಳ ವೆಬಸೈಟ್ ಆದ https://bengaluruclimateactionclubs.in/ ರಲ್ಲಿ ಪ್ರಕಟಿಸುವುದಾಗಿ ಅವರು ಮಾಹಿತಿ ನೀಡಿದರು.

ಮಕ್ಕಳೊಂದಿಗೆ ಸಂವಾದ

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳು ತಂಡವಾಗಿ ಹವಾಮಾನ ಬದಲಾವಣೆಗೆ ಕಾರಣವಾಗುವ 4 ಮುಖ್ಯ ಅಂಶಗಳಾದ ನೀರು, ತ್ಯಾಜ್ಯ, ಶಕ್ತಿ ಹಾಗೂ ಹಸಿರೀಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಿ, ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಇದನ್ನು ಓದಿದ್ದೀರಾ? ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌’ನಲ್ಲಿ ಸ್ಥಾನ ಪಡೆದ ಕರ್ನಾಟಕ ಸರ್ಕಾರದ ‘ಶಕ್ತಿ ಯೋಜನೆ’

ಮುಂದುವರೆದಂತೆ, ಮಕ್ಕಳು ಸಮೀಕ್ಷಾ ಪ್ರಕ್ರಿಯೆಯಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು, ತಾವು ಎದುರಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಮತ್ತು ತಮ್ಮ ಕಲಿಕೆಯನ್ನು ಪ್ರತಿಬಿಂಬಿಸಿದರು.

WhatsApp Image 2025 08 18 at 6.55.16 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...