ಅವೈಜ್ಞಾನಿಕ ಕಸ ವಿಲೇವಾರಿ; ಪರಿಸರಕ್ಕೆ ಅಪಾಯಕಾರಿ

Date:

ಕಸವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ನಮ್ಮ ಆರೋಗ್ಯ ಮತ್ತು ಪರಿಸರದ ಮೇಲೆ ತೀರಾ ಕೆಟ್ಟ ಪರಿಣಾಮವನ್ನು ಉಂಟುಮಾಡುತ್ತದೆ. ಪ್ರತಿ ದಿನ ನಾವು ಹೊರಗೆ ಎಸೆಯುವ ಹಲವು ಬಗೆಯ ಅನುಪಯುಕ್ತ ವಸ್ತುವೇ ಕಸ. ನಾವು ವರ್ಷದಿಂದ ವರ್ಷಕ್ಕೆ ಜಿದ್ದಿಗೆ ಬಿದ್ದವರಂತೆ ಹೆಚ್ಚೆಚ್ಚು ಕಸವನ್ನು ಉತ್ಪತ್ತಿ ಮಾಡುತ್ತಲೇ ಇದ್ದೇವೆ. ಹಾಗಾಗಿ ಅದರಿಂದಾಗುವ ದುಷ್ಪರಿಣಾಮಗಳು ಹೆಚ್ಚಾಗುತ್ತಲೇ ಇವೆ. ಕಸ ಎಸೆದ ಕೂಡಲೆ ತಾನಾಗಿಯೇ ಎಂದಿಗೂ ಮಾಯವಾಗುವುದಿಲ್ಲ ಎಂಬ ಸಂಗತಿಯನ್ನು ನಾವೆಂದಿಗೂ ಮರೆಯಬಾರದು.

ಕಸದ ರಾಶಿ
ಕಸದ ರಾಶಿ

ಕೆಲವೊಂದು ವಸ್ತುಗಳು ಕೆಲ ಸಂದರ್ಭಗಳಲ್ಲಿ ಕೊಳೆಯುತ್ತವೆ. ಆದರೆ, ಪ್ಲಾಸ್ಟಿಕ್‌ನಂತಹ ಸಾಮಗ್ರಿಗಳು ಜೈವಿಕವಾಗಿ ಕೊಳೆಯುವುದೇ ಇಲ್ಲ. ಅದು ಪರಿಸರದಲ್ಲಿ ಶಾಶ್ವತವಾಗಿ ಹಾಗೆಯೇ ಉಳಿದು ಬಿಡುತ್ತದೆ. ಆದ್ದರಿಂದ ನಾವು ಇನ್ನಾದರೂ ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟೂ ಕಡಿಮೆ ಮಾಡಬೇಕಾಗಿರುವುದು ಅನಿವಾರ್ಯವಾಗಿದೆ.

ಒಂದು ಪ್ಲಾಸ್ಟಿಕ್ ಬ್ಯಾಗ್ ಕೊಳೆಯುವುದಕ್ಕೆ 15-1000 ವರ್ಷಗಳ ಕಾಲ ತೆಗೆದುಕೊಳುತ್ತದೆ. ವೃದ್ಧರು, ಮಕ್ಕಳಿಗೆ ಹಾಕುವಂತಹ ಡೈಪರ್‌, ಮಹಿಳೆಯರು ಬಳಸುವಂತಹ ಸ್ಯಾನಿಟರಿ ನ್ಯಾಪ್‌ಕಿನ್‌ಗಳು ಕರಗುವುದಕ್ಕೆ 500ರಿಂದ 800 ವರ್ಷಗಳಾಗುತ್ತದೆ. ಜೊತೆಗೆ 500 ವರ್ಷಗಳವರೆಗೆ ಹಾಗೆಯೇ ಇರುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಸ
ಅವೈಜ್ಞಾನಿಕ ನಿರ್ವಹಣೆ

ಪ್ಲಾಸ್ಟಿಕ್ ಬಾಟಲ್‌ಗಳಂತೂ ಭೂಮಿಯಲ್ಲಿ ಕರಗುವುದೇ ಇಲ್ಲ. ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ನಾವು ಎಲ್ಲೆಂದರಲ್ಲಿ ಎಸೆಯುವಂತಹ ಚಿಕ್ಕ ಕಸವೂ ಕೂಡ ಬ್ಲಾಕ್‌ ಸ್ಪಾಟ್‌ ಆಗುತ್ತದೆ. ಆದ್ದರಿಂದ ಇನ್ನಾದರೂ ಪ್ಲಾಸ್ಟಿಕ್ ಪರಿಣಾಮಗಳ ಕುರಿತು ಎಚ್ಚೆತ್ತುಕೊಳ್ಳಬೇಕಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಿದ ಮಾಲಿಪಾಟೀಲ್ ಫೌಂಡೇಶನ್

ಹಸು, ನಾಯಿ, ಹಕ್ಕಿ ಸೇರಿದಂತೆ ಬಹುತೇಕ ಪ್ರಾಣಿ-ಪಕ್ಷಿಗಳು ಕಸವನ್ನು ತಿಂದ ಬಳಿಕ, ಆ ವಸ್ತುಗಳು ರಾಸಾಯನಿಕ ಹಾಗೂ ಸಾಮಗ್ರಿಗಳಾಗಿ ಅವುಗಳ ಹೊಟ್ಟೆಯನ್ನು ಸೇರುತ್ತವೆ. ಈ ಪ್ರಾಣಿಗಳು ಸೇವಿಸಿದ ಪ್ಲಾಸ್ಟಿಕ್‌ಗಳು ಜೀರ್ಣವಾಗುವುದೇ ಇಲ್ಲ. ಹಾಗಾಗಿ ಕರುಳಿನಲ್ಲಿ ಹಾಗೆಯೇ ಉಳಿದು ಅವುಗಳ ಮುಂದಿನ ಆಹಾರ ಸೇವನೆಗೆ ತುಂಬಾ ದೊಡ್ಡಮಟ್ಟದಲ್ಲಿ ನರಳಾಟ ಅನುಭವಿಸುತ್ತವೆ.

ಪ್ರತಿಯೊಬ್ಬರು ತಮ್ಮ ಮನೆಯನ್ನು ಹೇಗೆ ಸ್ವಚ್ಛವಾಗಿ ಇಡುತ್ತೇವೆಯೋ, ಹಾಗೆಯೇ ತಮ್ಮ ತಮ್ಮ ರಸ್ತೆ, ಬೀದಿ, ನಗರ ಮತ್ತು ಇಡೀ ಭೂ-ಮಂಡಲವನ್ನು ಸ್ವಚ್ಛವಾಗಿಡಲು ಶ್ರಮಿಸೋಣ.

- ಡಿ. ಬಾಲಾಜಿ, ಹಟ್ಟಿ ಚಿನ್ನದ ಗಣಿ
ತ್ಯಾಜ್ಯ ಪೂರೈಕೆ ಸರಪಳಿ ನಿರ್ವಹಣೆ ರಾಯಚೂರು 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...