ಮೈಸೂರು | ಅಲಿಖಿತ ಸಂವಿಧಾನವಾದಿಗಳಿಂದ ಲಿಖಿತ ಸಂವಿಧಾನ ದುರ್ಬಲಗೊಳಿಸಲು ಹುನ್ನಾರ : ಸಚಿವ ಮಹದೇವಪ್ಪ

Date:

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ನಗರ ಸಭಾ ಮೈದಾನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 134 ನೇ ಜಯಂತಿಯಲ್ಲಿ ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಮಾತನಾಡಿ ‘ ಅಲಿಖಿತ ಸಂವಿಧಾನವಾದಿಗಳಿಂದ ಲಿಖಿತ ಸಂವಿಧಾನ ದುರ್ಬಳಗೊಳಿಸಲು ಹುನ್ನಾರ ‘ ನಡೆದಿದೆ ನಾವೆಲ್ಲರೂ ಎಚ್ಚತ್ತುಕೊಂಡು ಒಂದಾಗಿ ಸಂವಿಧಾನ ಉಳಿಸಿಕೊಳ್ಳಬೇಕೆಂದು ಕರೆ ನೀಡಿದರು.

” ದೇಶದಲ್ಲಿ ಸಂವಿಧಾನ ದುರ್ಬಲಗೊಳಿಸಲು ಬಿಜೆಪಿ, ಆರ್ ಎಸ್ ಎಸ್ ಹೊಂಚು ಹಾಕುತ್ತಿದೆ. ಸಾಕಷ್ಟು ಭಾರಿ ಪ್ರಯತ್ನ ಕೂಡ ಮಾಡಿದೆ. ಸಾರ್ವಜನಿಕವಾಗಿ ಸಂವಿಧಾನ ಬದಲಾಯಿಸುತ್ತೇವೆ ಎಂದು ರಾಜಾರೋಷವಾಗಿ ಹೇಳಿರುವ ಮಾತುಗಳು ನಮ್ಮ ಮುಂದಿವೆ. ಹೀಗಿರುವಾಗ, ನಾವೆಲ್ಲರೂ ಒಟ್ಟಾಗಿ ಸಂವಿಧಾನ ರಕ್ಷಣೆ ಮಾಡಿಕೊಳ್ಳಬೇಕು ಇದು ನಮ್ಮೆಲ್ಲರ ಕರ್ತವ್ಯ ” ಎಂದರು.

” ದೇಶದ ಪ್ರಗತಿಯಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು. ಸರ್ವಶ್ರೇಷ್ಠ ಸಂವಿಧಾನ ನೀಡುವುದರ ಮೂಲಕ ದೇಶದಲ್ಲಿ ಸರ್ವರೂ ಸಮಾನರಾಗಿ ಗೌರವದಿಂದ, ಘನತೆಯಿಂದ ಬದುಕಲು ಅವಕಾಶ ಮಾಡಿಕೊಟ್ಟಿದ್ದಾರೆ.ಎಲ್ಲರಿಗೂ ಸಮಾನವಾಗಿ ದೇಶದಲ್ಲಿನ ಮೂಲಭೂತ ಹಕ್ಕುಗಳನ್ನು ಹೊಂದಲು ಅವಕಾಶವಿದೆ. ಆದರೆ, ಕುಹುಕ ಬುದ್ದಿಯ ಮನುವಾದಿಗಳು ಸಂವಿಧಾನ ದುರ್ಬಳಗೊಳಿಸಿ ತಮ್ಮ ಹೇರಿಕೆಯನ್ನು ಸಾಧಿಸಬೇಕು. ದೇಶದಲ್ಲಿನ ಅಧಿಕಾರ ತಮ್ಮ ಹಿಡಿತದಲ್ಲಿಯೇ ಇರಬೇಕೆನ್ನುವ ಸ್ವಾರ್ಥದಿಂದ ಸಂವಿಧಾನ ಬದಲಾವಣೆ ಮಾಡುತ್ತೇವೆ ಅನ್ನುವ ಹಂತಕ್ಕೆ ಬಂದಿದ್ದಾರೆ. ಇಂತಹವರಿಗೆ ನಾವೆಲ್ಲಾ ಒಂದಾಗಿ ಪಾಠ ಕಲಿಸಬೇಕಿದೆ ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಮಾತನಾಡಿ ” ನಾಡಿನಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಪ್ರತಿಮೆಗಳನ್ನು ಸ್ಥಾಪಿಸುವಲ್ಲಿ ಕಳೆದು ಹೋಗಿದ್ದೇವೆ. ಪ್ರತಿಮೆ ಸ್ಥಾಪನೆ ಮಾಡುವಲ್ಲಿ ಇರುವ ಆಸಕ್ತಿ ಆಶಯಗಳನ್ನು ಮೈಗೂಡಿಸಿಕೊಳ್ಳುವಲ್ಲಿ ಇಲ್ಲ. ಮಹನೀಯರ ತತ್ವ, ಸಿದ್ದಾಂತಗಳನ್ನು ಪರಿಪಾಲನೆ ಮಾಡುತಿಲ್ಲ.ಇದನ್ನೆಲ್ಲ ನಾವುಗಳು ಬದಲಾಯಿಸಿಕೊಂಡು ಹೆಜ್ಜೆ ಇಡಬೇಕಿದೆ. ಸಂವಿಧಾನದ ಹುಲಿಗಳು ನಾವು ನಮ್ಮಲ್ಲಿ ಬಾಬಾ ಸಾಹೇಬರ ಹೋರಾಟದ ರಕ್ತವಿದೆ.

ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಬದುಕಿಗೆ ನಿಜವಾದ ಅರ್ಥವಿದೆ. ಅವರ ಹೋರಾಟಗಳು ನಮಗೆ ಮಾದರಿಯಾಗಬೇಕು. ಅವರು ನಡೆದ ಹಾದಿಯಲ್ಲಿ ನಾವು ನಡೆಯಬೇಕು. ದೇಶ ಏನಾದರೂ ಬದಲಾವಣೆ ಕಂಡಿದೆ ಅಂದರೆ ಅದಕ್ಕೆ ಕಾರಣ ಡಾ. ಬಿ. ಆರ್. ಅಂಬೇಡ್ಕರ್ ” ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಘೋಷಿತ ತುರ್ತು ಪರಿಸ್ಥಿತಿಗಿಂತ ಅಘೋಷಿತ ತುರ್ತು ಪರಿಸ್ಥಿತಿ ಅತ್ಯಂತ ಅಪಾಯಕಾರಿ : ಅರವಿಂದ ನಾರಾಯಣ

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹೆಚ್. ಪಿ. ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಗ್ಯಾರೆಂಟಿ ಯೋಜನೆ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನರೇಂದ್ರ ಸ್ವಾಮಿ,ದಸಂಸ ಮುಖಂಡರಾದ ಹರಿಹರ ಆನಂದ ಸ್ವಾಮಿ, ಬಿಳಿಕೆರೆ ರಾಜು ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...