ಹುಲಸೂರ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿ : ಸಚಿವದ್ವಯರ ವಿರುದ್ಧ ಆಕ್ರೋಶ

Date:

ಬೀದರ್‌ ಜಿಲ್ಲೆಯ ಹುಲಸೂರ ಗ್ರಾಮ ಪಂಚಾಯತಿ 34 ಸದಸ್ಯ ಬಲ ಹೊಂದಿದೆ. ಸಾಮಾಜಿಕ, ಆರ್ಥಿಕ ಹಾಗೂ ಜನಸಂಖ್ಯೆಯಲ್ಲಿ ಬೆಳೆಯುತ್ತಿರುವ ತಾಲೂಕು ಕೇಂದ್ರವಾಗಿದೆ. ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೇರಿಸಲು ಎಲ್ಲ ಅರ್ಹತೆ ಇದ್ದರೂ ಜಿಲ್ಲೆಯವರೇ ಆದ ಪೌರಾಡಳಿತ ಸಚಿವ ರಹೀಂ ಖಾನ್‌ ಹಾಗೂ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಹುಲಸೂರ ತಾಲೂಕು ವ್ಯಾಪ್ತಿಯ ಸುತ್ತಲಿನ ಗ್ರಾಮಸ್ಥರು, ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಹುಲಸೂರ ತಹಸೀಲ್ದಾರ ಕಚೇರಿಯಲ್ಲಿ ಶನಿವಾರ ವಿವಿಧ ಗ್ರಾಮಗಳ ಪ್ರಮುಖರು ಬೊಬ್ಬೆ ಹಾಕುವ ಮೂಲಕ ತಹಶೀಲ್ದಾರ್ ಶಿವಾನಂದ ಮೆತ್ರೆ ಅವರ ಮೂಲಕ ಪೌರಾಡಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.

ʼಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಅವರು ಎಚ್ತೆತ್ತು ಹುಲಸೂರ ಪಟ್ಟಣ ಪಂಚಾಯತಿಯಾಗಿ ಘೋಷಣೆಗೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹುಲಸೂರ ಗ್ರಾಮಸ್ಥರ ಜೊತೆಯಲ್ಲಿ ರಸ್ತೆಗಿಳಿದು ಉಗ್ರವಾಗಿ ಹೋರಾಟ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಸುಧೀರ ಕಾಡಾದಿ ಮಾತನಾಡಿ, ʼಜಿಲ್ಲೆಯಲ್ಲಿಯೆ ದೊಡ್ಡ ಗ್ರಾಮ ಪಂಚಾಯತಿ ಆಗಿರುವ ಹುಲಸೂರ ಗ್ರಾಮ ಪಂಚಾಯತಿ ಪಟ್ಟಣ ಪಂಚಾಯತಿ ಆಗಿ ಮಾಡಬೇಕು ಎನ್ನುವ ಹಲವು ವರ್ಷಗಳ ಬೇಡಿಕೆಯಿದ್ದರೂ ಸ್ಪಂದಿಸದೆ ರಾಜಕೀಯ ಷಡ್ಯಂತ್ರ ನಡೆಸಿ ಹುಲಸೂರ ತಾಲೂಕಿಗೆ ಅನ್ಯಾಯ ಎಸಗಲಾಗುತ್ತಿದೆʼ ಎಂದರು.

ಬರುವ ಚಳಿಗಾಲದ ಅಧಿವೇಶನಕ್ಕಿಂತ ಮುಂಚೆ ಹುಲಸೂರ ಗ್ರಾಮ ಪಂಚಾಯತಿ ಪಟ್ಟಣ ಪಂಚಾಯತಿಯನ್ನಾಗಿ ಘೋಷಣೆ ಆಗಬೇಕು. ಸಾಯಗಾಂವ ಹೋಬಳಿಯ 16 ಗ್ರಾಮಗಳು ಹುಲಸೂರ ತಾಲೂಕಿಗೆ ಸೇರ್ಪಡೆ ಮಾಡಬೇಕುʼ ಎಂದು ಆಗ್ರಹಿಸಿದರು.

ʼಹುಲಸೂರ ತಾಲೂಕು ಘೋಷಣೆಯಾಗಿ 8 ವರ್ಷ ಕಳೆದಿವೆ. ಹುಲಸೂರ ಪಟ್ಟಣ ಪಂಚಾಯಿತಿ ಘೋಷಣೆಗೆ ಮನವಿ ಪತ್ರ ಸಲ್ಲಿಸಿದರೂ ಇಲ್ಲಿಯವರೆರೂ ಘೋಷಣೆ ಮಾಡದಿರುವುದಕ್ಕೆ ಯಾರು ಕಾರಣ. ಪದೆ ಪದೇ ಹುಲಸೂರು ತಾಲೂಕಿಗೆ ಅನ್ಯಾಯವಾಗುತ್ತಿದೆ, ಇದನ್ನು ಸಹಿಸಲು ಸಾಧ್ಯವಿಲ್ಲʼ ಎಂದು ‌ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸೂರ್ಯಕಾಂತ ಚೆಲ್ಲಾಬಟ್ಟೆ ತಿಳಿಸಿದರು.

ಗ್ರಾಮ ಪಂಚಾಯತ್ ಸದಸ್ಯ ನಾಗೇಶ ಮೇತ್ರೆ ಮಾತನಾಡಿ, ʼಹುಲಸೂರ ಪಟ್ಟಣ ಪಂಚಾಯತಿ ಮಾಡಬೇಕೆಂದು ಸರ್ಕಾರ ಹಾಗೂ ಸಚಿವರಿಗೆ ಮನವಿ ಸಲ್ಲಿಸಿದರೂ ಕಡೆಗಣೆಸುತ್ತಿದ್ದಾರೆ. ಇದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. 22 ನವೆಂಬರ್‌ವರೆಗೆ ಪಟ್ಟಣ ಪಂಚಾಯತಿ ಆಗಿ ಘೋಷಣೆ ಮಾಡದಿದ್ದಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಮನೆಯವರೆಗೆ ಪಾದಯಾತ್ರೆ ನಡೆಸಿ ಘೇರಾವ್ ಹಾಕುತ್ತೇವೆʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

ಪ್ರಮುಖರಾದ ಓಂಕಾರ ಪಟ್ನೆ, ಸೋಮನಾಥ ನಂದಗೆ, ರಮೇಶ ಧಬಾಲೆ, ರಾಮಲಿಂಗ ಸಾಗಾಂವೆ, ಅರವಿಂದ ಹರಪಲ್ಲೆ, ಜಗದೀಶ್ ದೇಟ್ನೆ, ಮಾಹದೇವ ಕವಟೆ, ಸಿದ್ರಾಮ ಪಾರಶೆಟ್ಟೆ, ಲವೀತ ಧರಮಾಣೆ, ರಾಜಕುಮಾರ ತೋಂಡಾರೆ, ಕಾಶಿನಾಥ ಕಲಾಲ, ಕೇದರ ಭೋಪಳೆ, ರಾಜಶೇಖರ ಬಿರಾದಾರ, ಕಲ್ಯಾಣಿ ದಾನಾ, ಗುಂಡಪ್ಪಾ ಕುಡಂಬಲೆ, ಅಂಬದಾಸ ಮೇತ್ರೆ ಹಾಗು ಸುತ್ತಮುತ್ತಲಿನ ಗ್ರಾಮಸ್ಥರು ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...