ಮೈಸೂರು | ದಲಿತ ಮಹಿಳೆ ಜಮೀನಿಗೆ ದಾರಿ ನೀಡದ ಸವರ್ಣಿಯರು; ಬೆಳೆ ಬೆಳೆಯಲಾರದೆ ಪಾಳು ಬಿದ್ದ ಭೂಮಿ

Date:

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಹನಗೋಡು ಹೋಬಳಿ ಭರತವಾಡಿ ಗ್ರಾಮದ ದಲಿತ ಪೌರ ಕಾರ್ಮಿಕ ಮಹಿಳೆ ಜಾನಕಮ್ಮ ಎಂಬುವರ ಜಮೀನಿಗೆ ಹೋಗಲು ಸವರ್ಣಿಯರು ದಾರಿ ನೀಡದೆ, ಬೆಳೆ ಬೆಳೆಯಲಾರದೆ ಭೂಮಿಯನ್ನು ಪಾಳು ಬಿಟ್ಟಿರುವ ಘಟನೆ ನಡೆದಿದೆ.

ದಿನಾಂಕ-02-06-2025 ರ ಸೋಮವಾರ ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಮುನಿಯಪ್ಪ, ದಸಂಸ ಮುಖಂಡರು ದಲಿತ ಮಹಿಳೆ ಜಾನಕಮ್ಮ ಅವರ ಜಮೀನಿಗೆ ಭೇಟಿ ಸ್ಥಳ ಪರಿಶೀಲನೆ ನಡೆಸಿದರು.

ದಸಂಸ ಮುಖಂಡ ನಿಂಗರಾಜ್‌ ಮಲ್ಲಾಡಿ ಮಾತನಾಡಿ ದಲಿತ ಪೌರ ಕಾರ್ಮಿಕ ಮಹಿಳೆ ಜಾನಕಮ್ಮಳಿಗೆ 4-00 ಎಕರೆ ಜಮೀನಿದ್ದು, ಕಳೆದ ಒಂದು ವರ್ಷದಿಂದ ಈ ಜಮೀನಿಗೆ ತಿರುಗಾಡಲು ಪಕ್ಕದ ಜಮೀನಿನ ಸವರ್ಣಿಯರು ರಸ್ತೆ ಕೊಡದೆ ಜಮೀನಿನಲ್ಲಿ ಬೆಳೆಯನ್ನು ಬೆಳೆಯದೆ ಪಾಳು ಬಿಟ್ಟಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ದಲಿತ ಮಹಿಳೆ ಜಾನಕಮ್ಮ ಪಕ್ಕದ ಜಮೀನಿನ ಸವರ್ಣಿಯರಾದ ಮಹದೇವ, ಮಂಜುನಾಥ್‌ ರವರನ್ನು ಪರಿಪರಿಯಾಗಿ ಬೇಡಿಕೊಂಡರೂ ಕರುಣೆ ತೋರದೆ ರಸ್ತೆಯನ್ನು ಬಿಡದೆ ತುಂಬಾ ತೊಂದರೆ ಕೊಡುತ್ತಿದ್ದಾರೆ. ನೀವು ಕೀಳು ಜಾತಿಯವರು, ನಮ್ಮ ಜಮೀನಿನ ಬಳಿ ತಿರುಗಾಡಿದರೆ ನಮ್ಮಗೆ ಅಪವಿತ್ರವಾಗುತ್ತದೆ ಎಂದು ಹೀಯಾಳಿಸಿದ್ದಾರೆ. ಮಾನಸಿಕ ಕಿರುಕುಳ ನೀಡುತ್ತಾ ನೀವು ನಿಮ್ಮ ಜಮೀನನ್ನು ಮಾರಾಟ ಮಾಡಿ ಹೊರಟು ಹೋಗಿ ಎಂದು ದೌರ್ಜನ್ಯ ಮಾಡುತ್ತಿದ್ದಾರೆ. ಈ ಬಗ್ಗೆ ತಹಸೀಲ್ದಾರ್‌ ರವರಿಗೆ ದೂರು ನೀಡಿದಾಗ ತಹಸೀಲ್ದಾರ್‌ ರವರು ದಾರಿ ಬಿಟ್ಟುಕೊಡುವಂತೆ ತಿಳಿ ಹೇಳಿ ಬಂದಿದ್ದರೂ ಸಹ ಮೇಲ್ಕಂಡ ಸವರ್ಣಿಯರು ರಸ್ತೆ ಬಿಟ್ಟು ಕೊಡದೆ ಉಡಾಫೆ ಮಾಡಿರುತ್ತಾರೆ.

ಈ ವಿಚಾರವು ದಸಂಸದ ಗಮನಕ್ಕೆ ಬಂದಿದ್ದು ಕಳೆದ ದಿನ ಪೊಲೀಸ್‌ ಅಧಿಕಾರಿಗಳೊಂದಿಗೆ ಸ್ಥಳ ತನಿಖೆ ಮಾಡಲಾಗಿ ದಲಿತ ಪೌರ ಕಾರ್ಮಿಕ ಜಾನಕಮ್ಮಳಿಗೆ ಸವರ್ಣಿಯ ಮಹದೇವ ಮತ್ತು ಮಂಜುನಾಥ್‌ ರವರು ತಿರುಗಾಡುವ ರಸ್ತೆಗೆ ತಂತಿ ಬೇಲಿ ಹಾಕಿ ದಾರಿ ಬಿಡದೆ ತೊಂದರೆ ಕೊಡುತ್ತಿರುವುದು ಕಂಡು ಬಂದಿರುತ್ತದೆ. ಈ ಬಗ್ಗೆ ತಾಲ್ಲೂಕು ಆಡಳಿತ ಈ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸಿ ಜಾನಕಮ್ಮಳ ಜಮೀನಿಗೆ ತಿರುಗಾಡಲು ರಸ್ತೆಯನ್ನು ಬಿಡದೆ ತೊಂದರೆ ಕೊಡುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಂಡು ಜಮೀನಿಗೆ ತಿರುಗಾಡಲು ರಸ್ತೆ ಬಿಡಿಸಿಕೊಡಬೇಕು. ತಪ್ಪಿದರೆ ದಸಂಸವು ಈ ಅಮಾನವೀಯ ಘಟನೆಯನ್ನು ತೀವ್ರವಾಗಿ ಖಂಡಿಸಿ ಬೀದಿಗಿಳಿದು ಪ್ರತಿಭಟಿಸಲಾಗುವುದು ಎಂದರು.

ಪೋಲಿಸ್ ಇನ್ಸ್ಪೆಕ್ಟರ್ ಮುನಿಯಪ್ಪ ಮಾತನಾಡಿ ಜಾನಕಮ್ಮಳ ಜಮೀನಿಗೆ ತಿರುಗಾಡಲು ರಸ್ತೆ ಸಮಸ್ಯೆಯಾಗಿದ್ದು ಈ ಬಗ್ಗೆ ಹುಣಸೂರು ತಹಸೀಲ್ದಾರ್ ರವರ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದರು

ಈ ಸುದ್ದಿ ಓದಿದ್ದೀರಾ? ಮೈಸೂರು | ದಮ್ಮ ಪಯಣ ಕಾರ್ಯಕ್ರಮದಲ್ಲಿ ದಸಂಸ ಹಿರಿಯ ಹೋರಾಟಗಾರರಿಗೆ ಗೌರವ ಸಮರ್ಪಣೆ

ಭೇಟಿ ಸಂದರ್ಭದಲ್ಲಿ ದಸಂಸದ ಬಲ್ಲೇನಹಳ್ಳಿ ಕೆಂಪರಾಜು, ಮಂಜು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...