ಬೀದರ್‌ | ರೋಗಗಳ ನಿಯಂತ್ರಣಕ್ಕೆ ಸಿರಿಧಾನ್ಯ ಸೇವನೆ ಅವಶ್ಯಕ: ಸಚಿವ ಈಶ್ವರ ಖಂಡ್ರೆ

Date:

ರೈತ ನಮ್ಮೆಲ್ಲರಿಗೂ ಆಹಾರ ನೀಡುವ ಅನ್ನದಾತರ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಶನಿವಾರ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಬೀದರ ಸಹಯೋಗದಲ್ಲಿ ಬೀದರ ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮತ್ತು ರಿಧಾನ್ಯ ಕಿರು ಹೊತ್ತಿಗೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

“ಸಿರಿಧಾನ್ಯಗಳಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ಬೀದರ ಜಿಲ್ಲೆಯಲ್ಲಿ ಶೇ.70 ರಷ್ಟು ಜನ ಕೃಷಿಯ ಮೇಲೆ‌ ಅವಲಂಬಿತರಾಗಿದ್ದಾರೆ. ಸಾವಯವ ಕೃಷಿಯ ಆಹಾರಗಳಾದ ಸಜ್ಜೆ, ಬರಗು, ರಾಗಿ, ನವಣೆ, ಹಾರಕ, ಸಾವೆಗಳ ಸೇವನೆಯಿಂದ ಬಿಪಿ, ಶುಗರ್‌ ಸೇರಿದಂತೆ ಇತರೆ ಕಾಯಿಲೆಗಳು ಬರದಂತೆ ನಿಯಂತ್ರಿಸಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಸಾವಯವ ಹೆಚ್ಚಾಗಿ ಬೆಳೆಯುತ್ತಿರುವ ಮೊದಲ ರಾಜ್ಯವಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಸಿರಿಧಾನ್ಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗಿತ್ತು. ಕೃಷಿ ಲಾಭದಾಯಕವಾಗಲು ಅದಕ್ಕೆ ಸೂಕ್ತ ಬೆಲೆ ಸಿಗುವದರ ಜೊತೆಗೆ ವ್ಯವಸ್ಥಿತ ಮಾರುಕಟ್ಟೆಯು ಬೇಕು. ಮುಂದೊಂದು ದಿನ ಎಲ್ಲರೂ ಕೃಷಿಯ ಕಡೆ ನೋಡುವ ಕಾಲ ಬರುತ್ತದೆ” ಎಂದರು.

“ನಮ್ಮ ಸರ್ಕಾರ ಈ ಹಿಂದೆ ಸಾವಯವ ಪರಿಷ್ಕೃತ ನೀತಿ ಘೋಷಿಸಿದೆ.‌ ಇಂದಿರಾಗಾಂಧಿ ಅವರು ಹಲವಾರು ಆಣೆಕಟ್ಟೆಗಳನ್ನು ಕಟ್ಟಿಸಿ ಹಸಿರು ಕ್ರಾಂತಿಯನ್ನು ಮಾಡಿದ್ದರು. ಸಾವಯವ ಕೃಷಿಯತ್ತ ಇಂದಿನ ಯುವಕರು ಹೆಚ್ಚಿನ ಒಲವು ತೋರಿಸಬೇಕು. ಇಂದು ಸಣ್ಣ-ಸಣ್ಣ ಮಕ್ಕಳಿಗೂ ಹಲವಾರು ಕಾಯಿಲೆಗಳು ಬರುತ್ತಿವೆ. ನಮ್ಮ ಆಹಾರ ಜೀವನ ಶೈಲಿ ಕೂಡ ಇದಕ್ಕೆ ಕಾರಣವಾಗಿದೆ” ಎಂದು ಹೇಳಿದರು.

ಸಿರಿಧಾನ್ಯ ಮೇಳ
ಸಿರಿಧಾನ್ಯ ನಡಿಗೆಯಲ್ಲಿ ಭಾಗವಹಿಸಿದ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಕೇಂದ್ರ ಸಚಿವ ಭಗವಂತ ಖೂಬಾ

ಕೇಂದ್ರ ನೂತನ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಹ ಸಚಿವರಾದ ಭಗವಂತ ಖೂಬಾ ಅವರು ‌ಮಾತನಾಡಿ, “ನಾವು ಚಿಕ್ಕವರಿದ್ದಾಗ ಸಿರಿಧಾನ್ಯ ಎಲ್ಲರ ಮನೆಯಲ್ಲಿ ಉಪಯೋಗಿಸುತ್ತಿದ್ದರು. ಅನ್ನವನ್ನು ಅಂದು ಶ್ರೀಮಂತರು ಮಾತ್ರ ಊಟ ಮಾಡುತ್ತಿದ್ದರು. ರೈತರು ದೇಶದ 140 ಕೋಟಿ ಜನವರಿ ಹೊಟ್ಟೆ ತುಂಬಿಸುವ ಕೆಲಸ ಮಾಡುವದರ ಜೊತೆಗೆ ಶೆ. 30 ಪ್ರತಿಶತ ಆಹಾರವನ್ನು ವಿದೇಶಕ್ಕೆ ರಪ್ತು ಮಾಡುತ್ತಾರೆ” ಎಂದರು.

“ಅನ್ನದಾತ ಕಷ್ಟಪಟ್ಟು ನಮ್ಮೆಲ್ಲರ ಹೊಟ್ಟೆ ತುಂಬಿಸುವ ಕೆಲಸ ‌ ಮಾಡುತ್ತಾನೆ. ಉತ್ತಮ ಆಹಾರ ನಮ್ಮ ನಾಗರಿಕತೆಯಲ್ಲಿ ರಕ್ತಗತವಾಗಿ ಬಂದಿದೆ. ಹಿಂದೆ ಸಿರಿಧಾನ್ಯಗಳಿಗೆ ಬೇಡಿಕೆ ಇರಲಿಲ್ಲ ಈಗ ದೊಡ್ಡ- ದೊಡ್ಡ ಹೋಟೆಲ್‌ಗಳಲ್ಲಿ ಅದರ ಬೇಡಿಕೆ ಹೆಚ್ಚಾಗಿದೆ. ಕಡಿಮೆ ನೀರಿನಲ್ಲಿ ಈ ಬೆಳೆಗಳನ್ನು ಬೆಳೆಯಬಹುದಾಗಿದೆ” ಎಂದು ಹೇಳಿದರು.

ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರತೇಂದ್ರನಾಥ ಸೂಗೂರ ಪ್ರಾಸ್ತಾವಿಕವಾಗಿ ಮಾತನಾಡಿ, “ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಒಳ್ಳೆಯದು. ಇಂದಿನ ವೈಜ್ಞಾನಿಕ ಯುಗದಲ್ಲಿ ಯುವ ಪೀಳಿಗೆ ದೇಶಿಯ ಆಹಾರವಾದ ಸಿರಿಧಾನ್ಯ ಉಳಿಸಿ ಬೆಳೆಸಿಕೊಂಡು ಹೋಗಬೇಕು. ಇದರಿಂದ ಸಾಕಷ್ಟು ರೋಗ ರುಜಿನಿಗಳು ದೂರ ಮಾಡಬಹುದು. ಸಿರಿಧಾನ್ಯಗಳನ್ನು ಬರಗಾಲದ ಮಿತ್ರ ಎಂದು ಕರೆಯುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪರೀಕ್ಷೆಯಲ್ಲಿ ಸುಳ್ಳು ಮಾಹಿತಿ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷರಾದ ಮೊಹ್ಮದ ಗೌಸ್. ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಮಯ್ಯ ಸ್ವಾಮಿ, ಕರ್ನಾಟಕ ರಾಜ್ಯ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ವಿಶ್ವನಾಥ ಪಾಟೀಲ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ., ತೋಟಗಾರಿಕೆ ಮಹಾವಿದ್ಯಾಲಯ ಬೀದರ. ಡೀನ್. ಡಾ.ಎಸ್.ವಿ.ಪಾಟೀಲ್. ಕೃಷಿ ವಿಜ್ಞಾನ ಕೇಂದ್ರ ಬೀದರ ಡಾ.ಸುನಿಲ್ ಕುಮಾರ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ. ಜಿಲ್ಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಕುಮಾರ ಗಂಧಗೆ, ಆಹಾರ ಮತ್ತು ನಾಗರಿಕ ‌ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಬೀದರ ತೋಟಗಾರಿಕೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ರೈತರು, ಕೃಷಿ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...