ರೌಡಿ ಕೋಮುವಾದಿಗಳ ಅಟ್ಟಹಾಸಕ್ಕೆ ಅಮಾಯಕನ ಕೊಲೆ : ಸಭಾಧ್ಯಕ್ಷ ಯು.ಟಿ.ಖಾದರ್ ಖಂಡನೆ

Date:

ಬಂಟ್ವಾಳ ತಾಲೂಕಿನ ಕೊಳತ್ತಮಜಲು ಬಳಿ ರೌಡಿಗಳು ಅಟ್ಟಹಾಸ ಮೆರೆದು ಇಬ್ಬರು ಅಮಾಯಕರ ಮೇಲೆ ಹಲ್ಲೆ ನಡೆಸಿ ಒಬ್ಬರು ದಾರುಣವಾಗಿ ಮೃತಪಟ್ಟ ಘಟನೆಯನ್ನು ಪವಿತ್ರ ಮದೀನಾದಲ್ಲಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಬಲವಾಗಿ ಖಂಡಿಸಿದ್ದಾರೆ.

ಕಳೆದ ಹಲವಾರು ದಿವಸಗಳಿಂದ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ರೌಡಿಗಳು,ಕೋಮು ಪ್ರಚೋದಿತ ಹೇಳಿಕೆಗಳನ್ನು ನೀಡುವವರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹುಟ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರೂ,ಇಲಾಖೆ ನಿರ್ಲಕ್ಷ್ಯತನ ವಹಿಸಿರುವುದೇ ಮತ್ತೆ ಅಹಿತಕರ ಘಟನೆ ಮರುಕಳಿಸಲು ಕಾರಣವಾಗಿರಬಹುದು ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.

ಇನ್ನಾದರೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಪೊಲೀಸ್ ಇಲಾಖೆ ತಕ್ಷಣ ತಪ್ಪಿತಸ್ಥ ಗೂಂಡಾಗಳನ್ನು ಬಂಧಿಸುವಂತೆ ಹಾಗೂ ಕೋಮು ಪ್ರಚೋದಿತ ಹೇಳಿಕೆಗಳನ್ನು ನೀಡುವವರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರಿಗೊಬ್ಬರು ದ್ವೇಷ ಹುಟ್ಟುವಂತೆ ಪೋಸ್ಟ್ ಗಳನ್ನು ಹಾಕಿ ಸಮಾಜದ ಅಶಾಂತಿ ಕೆಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...