ಉತ್ತರ ಕನ್ನಡ | ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಗೆ ಜಿಲ್ಲೆಯಾದ್ಯಂತ 116 ಆಕ್ಷೇಪಣೆ ಅರ್ಜಿಗಳು ಸಲ್ಲಿಕೆ

Date:

ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗಾಗಿ ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿದ್ದ ಕರಡು ಜಾತಿವಾರು ಮೀಸಲಾತಿ ಪಟ್ಟಿ ಜಿಲ್ಲೆಯಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರಕಟಣೆ ಹೊರಬಂದ ಒಂದೇ ವಾರದಲ್ಲಿ ಒಟ್ಟು 116 ಆಕ್ಷೇಪಣೆ ಅರ್ಜಿಗಳು ದಾಖಲಾಗಿದ್ದಾವೆ ಎಂದು ತಿಳಿದುಬಂದಿದೆ.

ಇದರಿಂದ ಕರಡು ಮೀಸಲಾತಿ ಹಂಚಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದಂತಿದೆ. ನಗರಾಭಿವೃದ್ಧಿ ಇಲಾಖೆ ನವೆಂಬರ್ 10ರಂದು ಜಿಲ್ಲೆಯ 8 ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್ ವಾರು ಮೀಸಲಾತಿ ಕರಡು ಪ್ರಕಟಿಸಿತ್ತು. ಕಾರವಾರ–ಶಿರಸಿ ನಗರಸಭೆಗಳ 62 ವಾರ್ಡ್‌ಗಳು, ಹಳಿಯಾಳ–ಕುಮಟಾ–ಅಂಕೋಲಾ ಪುರಸಭೆಗಳ 66 ವಾರ್ಡ್‌ಗಳು, ಮತ್ತು ಸಿದ್ದಾಪುರ–ಮುಂಡಗೋಡ–ಹೊನ್ನಾವರ ಪಟ್ಟಣ ಪಂಚಾಯಿತಿಗಳ 54 ವಾರ್ಡ್‌ಗಳಿಗೆ ಜಾತಿವಾರು ಮೀಸಲಾತಿ ಜಾರಿಗೊಳಿಸಿತ್ತು.

ಒಟ್ಟು 182 ವಾರ್ಡ್‌ಗಳಿಗೆ ಜಾತಿವಾರು ಮೀಸಲಾತಿ ಪ್ರಕಟಿಸಲಾಗಿತ್ತು. ಮೀಸಲಾತಿ ಹಂಚಿಕೆ ಬಗ್ಗೆ ಏನಾದರೂ ಆಕ್ಷೇಪಣೆಗಳು ಇದ್ದರೆ ಜಿಲ್ಲಾಧಿಕಾರಿಗಳಿಗೆ ಲಿಖಿತವಾಗಿ ದೂರು ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಅದರಂತೆ 8 ತಾಲ್ಲೂಕುಗಳಿಂದ 116 ಆಕ್ಷೇಪಣೆ ಅರ್ಜಿಗಳು ಸಲ್ಲಿಕೆಯಾಗಿವೆ. ಅಂಕೋಲಾ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 40 ಅರ್ಜಿಗಳು ಸಲ್ಲಿಕೆಯಾಗಿವೆ. ಕಾರವಾರದಿಂದ 18, ಶಿರಸಿಯಿಂದ 19, ಹಳಿಯಾಳದಿಂದ 12, ಮುಂಡಗೋಡದಿಂದ 11, ಸಿದ್ದಾಪುರದಿಂದ 10, ಹೊನ್ನಾವರದಿಂದ 4, ಕುಮಟಾಯಿಂದ 2 ಆಕ್ಷೇಪಣೆಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೋಕರ್ಣ | ಕುಡ್ಲೆ ಬೀಚ್‌ನಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿದ ಕಜಕಿಸ್ತಾನ ಮೂಲದ ಮಹಿಳೆ ರಕ್ಷಣೆ

ಆಕ್ಷೇಪಣೆ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 17ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿತ್ತು, ಬಹುತೇಕ ಅರ್ಜಿಗಳು ಪ್ರಕಟಿಸಿದ ಮೀಸಲಾತಿಯನ್ನು ಬದಲಿಸಲು ಸಲ್ಲಿಸಿದ ಅರ್ಜಿಗಳಾದರೆ. ಇನ್ನೂ ಕೆಲವು ಅರ್ಜಿಗಳು ಪ್ರಸ್ತುತವಾಗಿ ಪ್ರಕಟಿಸಿರುವ ವಾರ್ಡ್ ವಾರು ಮೀಸಲಾತಿಯನ್ನು ಯಥಾ ಪ್ರಕಾರ ಉಳಿಸುವಂತೆ ಸಲ್ಲಿಸಿದ ಮನವಿ ಅರ್ಜಿಗಳಾಗಿವೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿ ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಲಿದ್ದಾರೆ. ಸಲ್ಲಿಸಿದ ಆಕ್ಷೇಪಣೆ ಅರ್ಜಿಗಳು ಸರಿಯಾದ ಕಾರಣ ಹಾಗೂ ದಾಖಲೆಗಳಗಳನ್ನು ಒಳಗೊಂಡಿದರೆ ಮಾತ್ರ ಮೀಸಲಾತಿ ಬದಲಾವಣೆಯ ವಿಚಾರದಲ್ಲಿ ಪರಿಶೀಲನೆ ನಡೆಸಿ, ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವುದಾಗಿ ಇಲಾಖೆ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...