ಉತ್ತರ ಕನ್ನಡ | 14 ನೂತನ ಮದ್ಯದಂಗಡಿ ಹಂಚಿಕೆ; ಜ.16ಕ್ಕೆ ಇ-ಹರಾಜು

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ 14 ಮದ್ಯದಂಗಡಿಗಳನ್ನು ತೆರೆಯಲು ಅಬಕಾರಿ ಇಲಾಖೆ ಸಜ್ಜಾಗಿದ್ದು, ಇದಕ್ಕಾಗಿ ಜನವರಿ 16 ರಂದು ಇ-ಹರಾಜು ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹೊಸ ಮದ್ಯದ ಮಾರಾಟ ಮಳಿಗೆಗಳ (ಸಿಎಲ್-2) ಪರವಾನಗಿ ಹಂಚಿಕೆಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ತಾಲೂಕುವಾರು ಹಂಚಿಕೆ ವಿವರ: ಈ ಹರಾಜು ಪ್ರಕ್ರಿಯೆಯಲ್ಲಿ ಜಿಲ್ಲೆಯ 8 ಪ್ರಮುಖ ತಾಲೂಕುಗಳಿಗೆ ಮದ್ಯದಂಗಡಿಗಳನ್ನು ಹಂಚಿಕೆ ಮಾಡಲಾಗಿದೆ.ಕಾರವಾರ, ಶಿರಸಿ, ಕುಮಟಾ, ಯಲ್ಲಾಪುರ ಮತ್ತು ಅಂಕೋಲಾ, ದಾಂಡೇಲಿ: ಈ ಪ್ರತಿ ತಾಲೂಕಿಗೆ ತಲಾ 2 ಅಂಗಡಿಗಳು.

ಭಟ್ಕಳ ಮತ್ತು ಹೊನ್ನಾವರ: ತಲಾ 1 ಅಂಗಡಿಗಳನ್ನು ತೆರೆಯಲು ಪರವಾನಿಗೆ ನೀಡಲು ಸಿದ್ಧತೆ ನಡೆದಿದೆ. ಒಟ್ಟು 14 ಪರವಾನಗಿಗಳಲ್ಲಿ 10 ಸಾಮಾನ್ಯ ವರ್ಗಕ್ಕೆ, 3 ಪರಿಶಿಷ್ಟ ಜಾತಿಗೆ ಹಾಗೂ 1 ಪರವಾನಗಿಯನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಾಜಿನ ಮೂಲ ಬೆಲೆಯನ್ನು ಒಟ್ಟು 11.50 ಕೋಟಿ ರೂ. ಎಂದು ನಿಗದಿಪಡಿಸಲಾಗಿದ್ದು, ಇದರಿಂದ ಸರ್ಕಾರಕ್ಕೆ ಸುಮಾರು 50 ಕೋಟಿ ರೂ.ಗೂ ಅಧಿಕ ಆದಾಯ ಬರುವ ನಿರೀಕ್ಷೆಯಿದೆ. ನಗರಸಭೆ ವ್ಯಾಪ್ತಿಗೆ 90 ಲಕ್ಷ ರೂ., ಪುರಸಭೆ ವ್ಯಾಪ್ತಿಗೆ 80 ಲಕ್ಷ ರೂ. ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ 70 ಲಕ್ಷ ರೂ. ಮೂಲ ಬೆಲೆ ನಿಗದಿಪಡಿಸಲಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲೆಯ ಮದ್ಯದಂಗಡಿ ಮಾಲೀಕರು ಅಧಿಕ ದರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಗೋವಾ ಗಡಿಭಾಗದಲ್ಲಿ ಮದ್ಯದ ದರ ಕಡಿಮೆ ಇರುವುದರಿಂದ ಜಿಲ್ಲೆಗೆ ಅಕ್ರಮವಾಗಿ ಮದ್ಯ ಸರಬರಾಜಾಗುತ್ತಿದೆ. ಇದು ಸ್ಥಳೀಯ ವ್ಯಾಪಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಪ್ರೀತಿ ನಿರಾಕರಣೆಗೆ ಕಿರುಕುಳ ಆರೋಪ; ಯುವತಿ ಆತ್ಮಹತ್ಯೆ, ಜೆಡಿಎಸ್ ಜಿಲ್ಲಾ ನಾಯಕಿಯ ಪುತ್ರನ ಹೆಸರು ದೂರಿನಲ್ಲಿ

ಆದ್ದರಿಂದ ಹರಾಜು ಪ್ರಕ್ರಿಯೆಗೂ ಮುನ್ನ ಗೋವಾ ಮದ್ಯದ ಅಕ್ರಮ ತಡೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಅಥವಾ ಹರಾಜಿನ ಮೂಲ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಮಾಲೀಕರು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಪರವಾನಗಿಗಳು 2029-30ರ ವರೆಗೆ ಐದು ವರ್ಷಗಳ ಅವಧಿಗೆ ಸೀಮಿತವಾಗಿರಲಿವೆ ಎಂದು ಅಬಕಾರಿ ಉಪ ಆಯುಕ್ತ ಅಮಾನಲ್ಲಾ ಖಾನ್ ತಿಳಿಸಿದ್ದಾರೆ. ಜ.16ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಎಂಎಸ್‌ಟಿಸಿ ಲಿಮಿಟೆಡ್‌ನ ಪೋರ್ಟಲ್ ಮೂಲಕ ಇ-ಹರಾಜು ನಡೆಯಲಿದ್ದು, ಈಗಾಗಲೇ ನೋಂದಾಯಿಸಿಕೊಂಡವರು ಮಾತ್ರ ಇದರಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...