ಉತ್ತರ ಕನ್ನಡ | ದಾಸ್ತಾನು ಆಗಿದ್ದ 18 ರಾಶಿ ಅದಿರಿಗೆ ಮುಕ್ತಿ

Date:

  • ದಾಸ್ತಾನಾಗಿದ್ದ ಅದಿರನ್ನು ಹರಾಜು ಮೂಲಕ ವಿಲೇವಾರಿಗೆ ಕೋರ್ಟ್ ಸೂಚಿಸಿತ್ತು
  • ದಾಸ್ತಾನು ಆಗಿದ್ದ ಅದಿರು ಧೂಳು ಮುಕ್ತವಾಗುವುದು ಖಚಿತವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿನ ವಾಣಿಜ್ಯ ಬಂದರಿನಲ್ಲಿ ಕಳೆದ 13 ವರ್ಷಗಳಿಂದ ದಾಸ್ತಾನು ಆಗಿದ್ದ ಕಬ್ಬಿಣದ ಅದಿರು ಅಂಶವನ್ನು ಒಳಗೊಂಡ ಮಣ್ಣಿನ ರಾಶಿಯ ಮಾರಾಟಕ್ಕೆ ಆರನೇ ಬಾರಿಗೆ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಬಂದರು ಪ್ರದೇಶದಲ್ಲಿರುವ 18 ರಾಶಿಗಳ 30 ಸಾವಿರ ಟನ್ ಅದಿರು ಖರೀದಿ ಪ್ರಕ್ರಿಯೆಗಳು ಪೂರ್ಣಗೊಳ್ಳುವ ಹಂತಕ್ಕೆ ತಲುಪಿವೆ.

ಇ–ಹರಾಜು ಪ್ರಕ್ರಿಯೆಯಲ್ಲಿ ಹೊರರಾಜ್ಯದ ಕಂಪನಿಯೊಂದು ಅದಿರು ಖರೀದಿಸಲು ಮುಂದಾಗಿದ್ದು, ಅದಿರನ್ನು ಹರಾಜು ಪ್ರಕ್ರಿಯೆ ನಡೆಸಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಆರಂಭಿಕ ಹಣವನ್ನೂ ಭರಣ ಮಾಡಿದೆ. ಕಂಪನಿಗೆ ಗುರುವಾರ ಕಾರ್ಯಾದೇಶ ದೊರೆಯುವ ಸಾಧ್ಯತೆ ಇದ್ದು, ದಶಕದ ಬಳಿಕ ಬಂದರು ಅದಿರು ಧೂಳು ಮುಕ್ತವಾಗುವುದು ಖಚಿತವಾಗಿದೆ.

2010ರ ಮಾರ್ಚ್ 20ರಂದು ಅದಿರು ದಾಸ್ತಾನನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಂದರು ಇಲಾಖೆಯ ಸಂರಕ್ಷಣೆಯಲ್ಲಿದ್ದ ಅದಿರಿನಲ್ಲಿ ಒಂದಷ್ಟು ಪ್ರಮಾಣ ನಾಪತ್ತೆಯಾಗಿದೆಯೆಂದು ಅದೇ ವರ್ಷ ಜೂನ್ 8ರಂದು ಕಾರವಾರ ಪೊಲೀಸ್ ಠಾಣೆಗಳಲ್ಲಿ ಅರಣ್ಯ ಇಲಾಖೆ ದೂರು ದಾಖಲಿಸಿತ್ತು. ಅಕ್ರಮ ಅದಿರು ಸಾಗಣೆ ಹಾಗೂ ವಶಪಡಿಸಿಕೊಂಡ ಅದಿರು ಕಳ್ಳಸಾಗಣೆ ಸಂಬಂಧ ಸಿಐಡಿ, ಸಿಬಿಐಗಳು ವಿಚಾರಣೆ ನಡೆಸಿದ್ದವು. ಆದರೂ, ಹಲವು ನ್ಯಾಯಾಲಯಗಳಲ್ಲಿ ಪ್ರಕರಣಗಳು ಇನ್ನೂ ಬಾಕಿ ಇವೆ. ಈ ಸಂಬಂಧ ಈವರೆಗೂ ಯಾವುದೇ ಅಂತಿಮ ತೀರ್ಪು ಹೊರ ಬಿದ್ದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂದರು ಪ್ರದೇಶದಲ್ಲಿ ದಾಸ್ತಾನಾಗಿದ್ದ ಅದಿರು ಸಹಿತ ಮಣ್ಣಿನ ರಾಶಿ ಮಳೆಗೆ ಸಿಲುಕಿ ಸಾಕಷ್ಟು ಪ್ರಮಾಣದಲ್ಲಿ ಕೊಚ್ಚಿ ಹೋಗಿದೆ. ಮಣ್ಣಿನಲ್ಲಿರುವ ಅದಿರು ಅಂಶ ಮಳೆ ನೀರಿಗೆ ಕರಗಿ ಪೋಲಾಗುತ್ತಿದೆ ಎಂಬ ಕಾರಣಕ್ಕೆ ಅದರ ರಕ್ಷಣೆಯ ಹೊಣೆ ಹೊತ್ತಿದ್ದ ಅರಣ್ಯ ಇಲಾಖೆ ಅದಿರು ವಿಲೇವಾರಿಗೆ ಹಲವು ಬಾರಿ ನ್ಯಾಯಾಲಯದ ಅನುಮತಿ ಕೇಳಿತ್ತು.

ಈ ಸುದ್ದಿ ಓದಿದ್ದೀರಾ? ಚುನಾವಣೆ ನೀತಿ ಸಂಹಿತೆ ಜಾರಿ; ಅಂಬೇಡ್ಕರ್‌ ಜಯಂತಿ ಕೈಬಿಟ್ಟ ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಅದಿರು ದಾಸ್ತಾನನ್ನು ಹರಾಜು ನಡೆಸಿ ವಿಲೇವಾರಿ ಮಾಡಲು ಕೋರ್ಟ್ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಅದಿರು ಕಂಪನಿಗಳು ಮತ್ತೆ ಕೋರ್ಟ್ ಮೊರೆ ಹೋಗಿದ್ದವು. ನಿರಂತರ ಆಕ್ಷೇಪಣೆಯ ಕಾರಣಕ್ಕೆ ದಾಸ್ತಾನು ವಿಲೇವಾರಿ ಪ್ರಕ್ರಿಯೆ ಅಧಿಕಾರಿಗಳಿಗೆ ಸಮಸ್ಯೆ ಆಗಿತ್ತು. ಈ ಹಿಂದೆ ಐದು ಬಾರಿ ಹರಾಜು ಪ್ರಕ್ರಿಯೆ ನಡೆದರೂ ಯಾರೊಬ್ಬರೂ ಖರೀದಿಗೆ ಆಸಕ್ತಿ ತೋರಿರಲಿಲ್ಲ.

ಬಳ್ಳಾರಿಯಿಂದ ಕಾರವಾರ ಮತ್ತು ಬೇಲೆಕೇರಿ ಬಂದರಿನ ಮೂಲಕ ವಿದೇಶಕ್ಕೆ ರಫ್ತಾಗುತ್ತಿದ್ದ ಮ್ಯಾಂಗನೀಸ್, ಕಬ್ಬಿಣದ ಅದಿರನ್ನು 2010ರಲ್ಲಿ ಸಿಬಿಐ ಮುಟ್ಟುಗೋಲು ಹಾಕಿಕೊಂಡ ಬಳಿಕ ದೊಡ್ಡ ಪ್ರಮಾಣದ ದಾಸ್ತಾನು, ಬಂದರು ಪ್ರದೇಶದಲ್ಲೇ ಉಳಿಯುವಂತಾಗಿತ್ತು. ಸದ್ಯ ಕಾರವಾರದಲ್ಲಿರುವ 30 ಸಾವಿರ ಟನ್ ಅದಿರು ಮಾತ್ರ ವಿಲೇವಾರಿಯಾಗಲಿದೆ. ಆದರೆ, ಅಂಕೋಲಾದ ಬೇಲೆಕೇರಿ ಬಂದರಿನಲ್ಲಿ ಇನ್ನೂ ಸುಮಾರು 3 ಲಕ್ಷ ಟನ್ ಅದಿರು ದಾಸ್ತಾನು ಉಳಿದುಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...