ಉತ್ತರ ಕನ್ನಡ | ಟಿಬೆಟ್ ಮುಕ್ತಿಗಾಗಿ 2604 ಕಿ.ಮೀ ಸೈಕಲ್ ಯಾತ್ರೆ; ಚೀನಾದ ಮಾನವ ಹಕ್ಕು ಉಲ್ಲಂಘನೆ ವಿರುದ್ಧ ಜನಜಾಗೃತಿ

Date:

ಉತ್ತರ ಕನ್ನಡ: ಟಿಬೆಟ್‌ನಲ್ಲಿ ಚೀನಾ ಸರ್ಕಾರದ ಆಳ್ವಿಕೆಯಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯರಲ್ಲಿ ಜಾಗೃತಿ ಮೂಡಿಸಲು ‘ಕೋರ‍್ ಗ್ರೂಪ್ ಫಾರ್ ಟಿಬೆಟಿಯನ್ ಕಾಸ್ ಇಂಡಿಯಾ’ (CGTC-I) ಸಂಘಟನೆಯ

ಪಶ್ಚಿಮ ವಲಯದ ಪ್ರಾದೇಶಿಕ ಸಂಚಾಲಕ ಸಂದೇಶ್ ಮೆಶ್ರಾಮ್ ಅವರು ತಮ್ಮ ಆರನೇ ‘ಜನಜಾಗರಣ ಸೈಕಲ್ ಯಾತ್ರೆ’ಯನ್ನು ಆರಂಭಿಸಿದ್ದಾರೆ. “ಟಿಬೆಟ್‌ ಮುಕ್ತಿಗಾಗಿ ಸೈಕಲ್ ಪಯಣ, ಟಿಬೆಟ್‌ ಪರ ಧ್ವನಿ” ಎಂಬ ಘೋಷವಾಕ್ಯದೊಂದಿಗೆ ಈ ಯಾತ್ರೆಯು 2025ರ ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ಬುಮ್ಲಾ (ಟಿಬೆಟ್ ಗಡಿ) ದಿಂದ ಪ್ರಾರಂಭವಾಗಿದೆ.

ಈ ಯಾತ್ರೆಯು 2026ರ ಫೆಬ್ರವರಿ 9ರಂದು ಮೇಘಾಲಯದ ಶಿಲ್ಲಾಂಗ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಸುಮಾರು 2604 ಕಿಲೋಮೀಟರ್‌ಗಳ ಈ ಸುದೀರ್ಘ ಪ್ರಯಾಣವು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳನ್ನು ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಯಾತ್ರೆಯನ್ನು ‘ಕರುಣೆಯ ವರ್ಷ’ದ (Year of Compassion) ನೆನಪಿಗಾಗಿ ಆಯೋಜಿಸಲಾಗಿದೆ. ಟಿಬೆಟ್ ಅನ್ನು ಚೀನಾ ವಶಪಡಿಸಿಕೊಳ್ಳುವ ಮೊದಲು ಹಿಮಾಲಯದ ಗಡಿಭಾಗದಲ್ಲಿ ಚೀನಾ ಪಡೆಗಳ ಉಪಸ್ಥಿತಿ ಇರಲಿಲ್ಲ ಎಂಬ ಇತಿಹಾಸವನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಚೀನಾ ಮತ್ತು ಭಾರತದ ನಡುವೆ ಬಫರ್ ರಾಜ್ಯವಾಗಿದ್ದ ಟಿಬೆಟ್ ನಾಪತ್ತೆಯಾದ ನಂತರ ಉಭಯ ದೇಶಗಳ ಸಂಬಂಧದ ಮೇಲೆ ತೀವ್ರ ಪರಿಣಾಮ ಬೀರಿದೆ. 1962ರ ಸಂಘರ್ಷದ ನೆರಳು ಇಂದಿಗೂ ಭಾರತ-ಚೀನಾ ಸಂಬಂಧದ ಮೇಲೆ ಪರಿಣಾಮ ಬೀರುತ್ತಿದೆ.

ಇತ್ತೀಚೆಗೆ ಶಾಂಘೈ ವಿಮಾನ ನಿಲ್ದಾಣದಲ್ಲಿ ಅರುಣಾಚಲ ಪ್ರದೇಶದ ಪೆಮಾ ವಾಂಗ್ಜೋಮ್ ಥೋಂಗ್ಡೋಕ್ ಅವರ ಬಂಧನ ಮತ್ತು ಅರುಣಾಚಲ ಪ್ರದೇಶವನ್ನು ‘ಜಾಂಗ್ನಾನ್’ ಎಂದು ಚೀನಾ ಕರೆಯುತ್ತಿರುವುದು ಈ ಸಂಘರ್ಷಕ್ಕೆ ಸಾಕ್ಷಿಯಾಗಿದೆ ಎಂದು ಮೆಶ್ರಾಮ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ವಿದ್ಯಾರ್ಥಿ ವೇತನಕ್ಕೆ ತಾಂತ್ರಿಕ ಅಡಚಣೆ: ಮಾಹಿತಿ ಅಪ್‌ಡೇಟ್ ಮಾಡಲು ಜ.30 ಕೊನೆಯ ದಿನ

“Tibbat ki Azaadi, Bharat ki Suraksha” ಎಂಬ ಘೋಷಣೆಯೊಂದಿಗೆ 1959ರಿಂದಲೂ ಭಾರತೀಯರು ಟಿಬೆಟ್‌ ಬೆಂಬಲಕ್ಕೆ ನಿಂತಿದ್ದಾರೆ. ಸಂದೇಶ್ ಮೆಶ್ರಾಮ್ ಅವರು ಈ ಹಿಂದೆ ನಡೆಸಿದ ಐದು ಯಾತ್ರೆಗಳಲ್ಲಿ ಸುಮಾರು 18,000 ಕಿಲೋಮೀಟರ್‌ಗಳಷ್ಟು ಸೈಕಲ್ ತುಳಿದು 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಜಾಗೃತಿ ಮೂಡಿಸಿದ್ದಾರೆ.

ಟಿಬೆಟ್‌ನಲ್ಲಿನ ವಾಸ್ತವ ಸ್ಥಿತಿಯನ್ನು ಭಾರತೀಯ ಜನಸಾಮಾನ್ಯರಿಗೆ ತಲುಪಿಸುವುದು ಮತ್ತು ಭಾರತ-ಟಿಬೆಟ್ ನಡುವಿನ ಐತಿಹಾಸಿಕ ಸಂಬಂಧವನ್ನು ಗಟ್ಟಿಗೊಳಿಸುವುದು ಈ ಯಾತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...