ಉತ್ತರ ಕನ್ನಡ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷಿ ಕೂಲಿ ಕಾರ್ಮಿಕರ ಸಂಘ ಪ್ರತಿಭಟನೆ

Date:

ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ನೌಕರರು ಸೇರಿ ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಮೆರವಣಿಗೆ ಮುಖಾಂತರ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

  • ಕೃಷಿ ಕೂಲಿಕಾರರಿಗೆ ಪ್ರಸ್ತುತ ದಿನಗೂಲಿ ₹370 ಸಾಕಾಗುತ್ತಿಲ್ಲ. ಕನಿಷ್ಠ ₹600 ದಿನಗೂಲಿಯನ್ನು ನಿಗದಿಪಡಿಸಬೇಕು.
  • ಪ್ರಸ್ತುತ ವರ್ಷದ ಉದ್ಯೋಗದಲ್ಲಿ ಕೇವಲ 100 ಹಾಜರಿಗಳನ್ನು ಮಾತ್ರ ನೀಡಲಾಗುತ್ತಿದೆ. ಇದನ್ನು 200 ಹಾಜರಿಗಳವರೆಗೆ ಹೆಚ್ಚಿಸಬೇಕು.
  • ಮಾಡಿದ ಕೆಲಸಕ್ಕೆ 15 ದಿನಗಳೊಳಗೆ ಕೂಲಿ ಪಾವತಿ ಮಾಡಬೇಕು.
  • ನಗದಿಲ್ಲದೇ ರೈತರಿಗೆ ತಲೆಮಾರು ಪಟ್ಟಿ ವಿತರಣೆ ಮಾಡಬೇಕು.
  • ಅರಣ್ಯ ಹಕ್ಕುಪತ್ರಗಳನ್ನು ಎಲ್ಲ ಅರ್ಹ ಕುಟುಂಬಗಳಿಗೆ ನೀಡಬೇಕು.
  • PWD ಇಲಾಖೆಗೆ ಸಂಬಂಧಪಟ್ಟ ರಸ್ತೆಗಳು ಮಳೆ ಕಾರಣದಿಂದ ಹಾನಿಗೊಳಗಾಗಿವೆ. ಕೂಡಲೇ ದುರಸ್ತಿ ಕಾರ್ಯ ನಡೆಯಬೇಕು.
  • ಮನೆ ಜಾಗದ ದಾಖಲೆಗಳ ಸಮಸ್ಯೆಗಳನ್ನು ಪರಿಹರಿಸಬೇಕು. ದಾಖಲೆ ಇಲ್ಲದವರಿಗೆ ಸೂಕ್ತ ದಾಖಲೆಗಳನ್ನು ಒದಗಿಸೇಕು.
    ಎಂದು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
WhatsApp Image 2025 07 09 at 4.21.12 PM

ಇದನ್ನೂ ಓದಿ: ಉತ್ತರ ಕನ್ನಡ | ನಗರಸಭೆ ಅಧಿಕಾರಿಗಳಿಂದಲೇ ನೀರಿನ ಪೈಪ್ ಕಳ್ಳತನ

ಪ್ರತಿಭಟನೆಯಲ್ಲಿ ತಾಲೂಕಾಧ್ಯಕ್ಷ ಭೀಮಣ್ಣ ಬೋವಿ, ಕಾರ್ಯದರ್ಶಿ ಭೂತೇಷ ಚಿತ್ರಗಾರ, ಸಾಯಿನಾಥ್ ಕಲ್ಲಹಕ್ಲ, ಮಾಂತೇಶ ಮಾಳಗಿ, ಶಿವಪ್ಪ ಹರಿಜನ (ಪಾಳಾ), ನೀಲವ್ವ ಸುರೇಶ್ ಬೋವಿ, ಸಾವಿತ್ರೀ ಉಗ್ಗಿನಕೇರಿ, ಸಾವಿತ್ರೀ ಕಲಕೇರಿ, ಗೋಪಾಲ್ ಅಕ್ಕಸಾಲಿ, ಕಲಾವತಿ ಕಲಕೇರಿ ಮತ್ತು ಧರ್ಮಾವತಿ ಮಜ್ಜಿಗೇರಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...