ಉತ್ತರ ಕನ್ನಡ | ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Date:

ಗ್ರಾಮೀಣ ಜನತೆ, ಅಶಕ್ತರು, ಮಹಿಳೆ ಮತ್ತು ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಸುಲಭವಾಗಿ ಕಾನೂನು ಸೇವೆ ಹಾಗೂ ನೆರವು ಒದಗಿಸಲು ಕಾರವಾರದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಒಂದು ವರ್ಷದ ಅವಧಿಗೆ ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ ಎಂ ತಿಳಿಸಿದ್ದಾರೆ.

ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಶಿಕ್ಷಕರು, ನಿವೃತ್ತ ಶಿಕ್ಷಕರು, ಮಾಜಿ ಪಂಚಾಯತ್ ಸದಸ್ಯರು, ಸರ್ಕಾರದ ವಿವಿಧ ಇಲಾಖೆಯಿಂದ ನಿವೃತ್ತರಾದ ನೌಕರರು, ಹಿರಿಯ ನಾಗರಿಕರು, ಕಾನೂನು ಸೇವೆಗಳಲ್ಲಿ ತೊಡಗಿರುವ ಸಮಾಜ ಸೇವಕರು, ಮಹಿಳೆಯರು, ಟ್ರಾನ್ಸ್‌ಜೆಂಡರ್‌ಗಳು, ಪಂಗಡ ಸಮುದಾಯದವರು, ಅಲ್ಪಸಂಖ್ಯಾತರು, ಗೌರವಾನ್ವಿತ ವ್ಯಕ್ತಿಗಳು, ಎಂ.ಎಸ್‌.ಡಬ್ಲ್ಯೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು ಅಥವಾ ಚಿಕಿತ್ಸಕರು, ವಿದ್ಯಾರ್ಥಿಗಳು ಮತ್ತು ಕಾನೂನು ವಿದ್ಯಾರ್ಥಿಗಳು (ವಕೀಲರಾಗಿ ನೋಂದಣಿ ಹೊಂದುವವರೆಗೆ), ರಾಜಕೀಯೇತರ ಸೇವಾ ಮನೋಭಾವ ಹೊಂದಿರುವ ಎನ್‌ಜಿಒ ಹಾಗೂ ಕ್ಲಬ್ ಸದಸ್ಯರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಮೈತ್ರಿ ಸಂಘಗಳು, ಉತ್ತಮ ವರ್ತನೆ ಹೊಂದಿರುವ ದೀರ್ಘಾವಧಿ ಶಿಕ್ಷೆ ಅನುಭವಿಸುತ್ತಿರುವ ಶಿಕ್ಷಣ ಪಡೆದ ಕೈದಿಗಳು, ಮೃತ ರಕ್ಷಣಾ ಸಿಬ್ಬಂದಿಯ ವಿಧವೆಯರು, ಮಾಜಿ ಸೈನಿಕರು ಅಥವಾ ಅವರ ಅವಲಂಬಿತರು, ಪ್ರಸ್ತುತ ಸೇವೆಯಲ್ಲಿರುವ ರಕ್ಷಣಾ ಸಿಬ್ಬಂದಿಯ ಪತ್ನಿ ಅಥವಾ ವಯಸ್ಕ ಮಕ್ಕಳು (ಕನಿಷ್ಠ 10ನೇ ತರಗತಿವರೆಗೂ ವ್ಯಾಸಂಗ ಮಾಡಿರುವವರು) ಸೇರಿದಂತೆ ಸುಮಾರು 50 ರಿಂದ 100 ಜನರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಉತ್ತರ ಕನ್ನಡ | ಭೂಮಿಗಾಗಿ ದಶಕಗಳ ಹೋರಾಟ; ಸೂರಿನ ನಿರೀಕ್ಷೆಯಲ್ಲಿ ಅರಣ್ಯ ವಾಸಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಯ್ಕೆಯಾದ ಸ್ವಯಂ ಸೇವಕರಿಗೆ ಅಗತ್ಯ ತರಬೇತಿ ಮತ್ತು ಗುರುತಿನ ಚೀಟಿ ನೀಡಲಾಗುತ್ತದೆ. ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಟುವಟಿಕೆಗಳಲ್ಲಿ ಬೆಳಗ್ಗೆಯಿಂದ ಸಂಜೆತನಕ ಪಾಲ್ಗೊಂಡಲ್ಲಿ ರೂ.750 ಹಾಗೂ ಅರ್ಧ ದಿನ ಕಾರ್ಯನಿರ್ವಹಿಸಿದಲ್ಲಿ ರೂ.375 ಗೌರವಧನ ನೀಡಲಾಗುವುದು. ಜೊತೆಗೆ ಸಾರ್ವಜನಿಕ ಸಮಸ್ಯೆಗಳ ಬಗೆಹರಿಸುವ ಸಂಬಂಧ ಅವರಿಗೆ ತಗುಲುವ ಮೂಲ ಪ್ರಯಾಣ ವೆಚ್ಚವನ್ನು ಸಹ ನೀಡಲಾಗುತ್ತದೆ.

ಆಸಕ್ತರು ತಮ್ಮ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಆವರಣ, ಕಾರವಾರ ಇವರಿಗೆ ಅಕ್ಟೋಬರ್ 10ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08382-222990 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...