ಉತ್ತರ ಕನ್ನಡ | ಮುಂಡಗೋಡ–ಹೊನ್ನಾವರದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ; ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲು

Date:

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಮತ್ತು ಹೊನ್ನಾವರ ತಾಲ್ಲೂಕುಗಳಲ್ಲಿ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ನಡೆಸಿದ ದಾಳಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಮುಂಡಗೋಡ ಘಟನೆಯ ವಿವರ: ನವೆಂಬರ್ 8ರ ರಾತ್ರಿ 11 ಗಂಟೆ ಸುಮಾರಿಗೆ ಮುಂಡಗೋಡ ತಾಲೂಕಿನ ಕಾಳಗನಕೊಪ್ಪ ಗ್ರಾಮದ ಮರಿಯಮ್ಮ ದೇವಸ್ಥಾನದ ಹತ್ತಿರ ಕೆಲವರು ಹಣವನ್ನು ಪಂಥವಾಗಿ ಕಟ್ಟಿ ಇಸ್ಪೀಟ್ ಎಲೆಗಳ ಮೇಲೆ ಜೂಜಾಟ ನಡೆಸುತ್ತಿದ್ದರೆಂಬ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಕಾಳಗನಕೊಪ್ಪದ ಕಿರಣ ಮೈಲಾರಿ ಕುರುಬರ (22) ಮತ್ತು ಮುಂಡಗೋಡ ತಾಲೂಕಿನ ದೇಶಪಾಂಡೆ ನಗರದ ಚಂದ್ರಶೇಖರ ದುರ್ಗಪ್ಪ ವಡ್ಡರ (24) ಬಂಧಿತರಾಗಿದ್ದಾರೆ, ಬಸವರಾಜ ಮಹಾದೇವ ತಿಮ್ಮಾಪುರ, ಕಾಳಗನಕೊಪ್ಪ(23), ಬಸವರಾಜ ಗೋವಿಂದ ಬೆಳವಟ್ಟಿ, ಕಾಳಗನಕೊಪ್ಪ (27), ಸುರೇಶ ಹಳೆಪ್ಪ ಉಪ್ಪಾರ, ಕಾಳಗನಕೊಪ್ಪ (35), ಏಕನಾಥ ಉಪ್ಪಾರ, ಮಂಜುನಾಥ ಉಪ್ಪಾರ, ಕಾಳಗನಕೊಪ್ಪ, ವಿಜಯ ಈರಪ್ಪ ಆಲಳ್ಳಿ, ರಮೇಶ ಗೋಸಾವಿ ಸಾ. ಮಲವಳ್ಳಿ ಹಾಗೂ ಪರಶುರಾಮ ಚಲವಾದಿ ಮುಂಡಗೋಡ ತಾಲೂಕಿನ ಗಾಂಧಿನಗರ ಪರಾರಿಯಾಗಿದ್ದಾರೆ. ಸ್ಥಳದಿಂದ ₹14,150 ನಗದು ಮತ್ತು 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಲಂ 87 ಕೆ.ಪಿ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಆಸ್ತಿ ವಿಚಾರಕ್ಕೆ ನಡೆದ ಕಲಹದಲ್ಲಿ ತಂದೆಯನ್ನೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಮಗ

ಹೊನ್ನಾವರ ಘಟನೆಯ ವಿವರ: ರವಿವಾರ ದಿನ ಬೆಳಗಿನ ಜಾವ 12.20 ಗಂಟೆಯ ಸುಮಾರಿಗೆ ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮದ ರಾಮೇಶ್ವರಕಂಬಿ ಅಶ್ವತ್ಕಟ್ಟೆ ಹತ್ತಿರ ಸಾರ್ವಜನಿಕ ರಸ್ತೆಯಲ್ಲಿ ಜೂಜಾಟ ನಡೆಯುತ್ತಿದ್ದೆ ಎಂಬ ಮಾಹಿತಿ ಮೇರೆಗೆ ಪಿಎಸ್‌ಐ ಸಿದ್ದರಾಮೇಶ್ವರ ಎಸ್. ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಿರೆ.

ದಾಳಿಯ ವೇಳೆ ಗೋಪಾಲ ಜಟ್ಟಿ ನಾಯ್ಕ (63) ಸಾ. ರಾಮಶ್ವೇರಕಂಟಿ, ಸುನೀಲ ಮಾಸ್ತಿ ಮುಕ್ರಿ (26) ಸಾ, ರಾಮೇಶ್ವರ ಕಂಟಿ, ರಾಮಚಂದ್ರ ನಾರಾಯಣ ಮುಕ್ರಿ (33) ಸಾ. ರಾಮಶ್ವೇರ ಕಂಟಿ, ಬಂಧಿತರಾಗಿದ್ದು, ಮಣಿ, ಸಂತೋಷ, ಸುರೇಶ, ಗುರುಪ್ರಸಾದ ಮುಕ್ರಿ, ವಿನಾಯಕ, ಸಂಕೇತ ಮತ್ತು ಇತರರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಿಂದ ₹4,170 ನಗದು, 52 ಇಸ್ಪೀಟ್ ಎಲೆಗಳು, ಮೊಬೈಲ್ ಫೋನ್‌ಗಳು, ರೆಕ್ಸಿನ್ ಮಂಡ ಹಾಗೂ ನಾಲ್ಕು ಮೋಟಾರ್ ಸೈಕಲ್‌ಗಳು ಮತ್ತು ಒಂದು ಸ್ಕೂಟರ್ ಸೇರಿದಂತೆ ಒಟ್ಟು ಸುಮಾರು ₹78,000 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ, ಕಲಂ 87 ಕೆ.ಪಿ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...