ಉತ್ತರ ಕನ್ನಡ | ಮಾದಕ ವಸ್ತುಗಳ ಬಗ್ಗೆ ಯುವಜನತೆಗೆ ಜಾಗೃತಿ ಅಭಿಯಾನ

Date:

ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುಗಳ ಜನಜಾಗೃತಿ ಅಭಿಯಾನ ಕಾರ್ಯಕ್ರಮವು ಉತ್ತರ ಕರ್ನಾಟಕ ಜಿಲ್ಲೆಯ ಕಾರವಾರ ನಗರದ ಪೋಲೀಸ್ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ಮಾತನಾಡಿ, “ಕರ್ನಾಟಕ ಪೊಲೀಸ್ ಇಲಾಖೆ ವತಿಯಿಂದ ರಾಜ್ಯಾದ್ಯಂತ ಯುವ ಜನತೆಯಲ್ಲಿ ಅರಿವು ಮೂಡಿಸಲು “Say yes to life, Say no to Drug” ಎಂಬ ಘೋಷ್ಯವಾಕ್ಯದೊಂದಿಗೆ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಆಕ್ರಮ ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದು, ಪೊಲೀಸ್ ಇಲಾಖೆಯಿಂದ ಮಾತ್ರ ಡ್ರಗ್ಸ್ ನಿಯಂತ್ರಿಸಲು ಸಾಧ್ಯವಿಲ್ಲ. ಈ ಕಾರ್ಯದಲ್ಲಿ ಪ್ರತಿಯೊಬ್ಬರು ಕೈಜೋಡಿಸಿ ಡ್ರಗ್ಸ್ ಮುಕ್ತ ರಾಜ್ಯಾವನ್ನಾಗಿಸಬೇಕು ಎಂದರು.

ಕ್ರಿಮ್ಸ್ ಆಸ್ಪತ್ರೆ ಮನೋರೊಗ ವಿಭಾಗದ ಪ್ರಾಧ್ಯಪಕ ಹಾಗೂ ಮುಖ್ಯಸ್ಥ ಡಾ. ವಿಜಯರಾಜ್ ಮಾತನಾಡಿ, ಮಾದಕ ವಸ್ತುಗಳ ಸುಲಭವಾಗಿ ದೊರೆಯುದರಿಂದ “ಹುಚ್ಚು ಖೋಡಿ ಮನಸ್ಸು ಹದಿನಾರರ ವಯಸ್ಸು” ಎನ್ನುವಂತೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತುಗಳಿಗೆ ಮಾರು ಹೋಗುತ್ತಾರೆ. ಒಂದು ಬಾರಿ ಮಾದಕ ವಸ್ತುಗಳನ್ನು ವ್ಯಸನವಾಗಿಸಿಕೊಂಡರೆ ಅದರಿಂದ ಹೊರ ಬರಲು ಸಾಧ್ಯವಾಗುವುದಿಲ್ಲ. ಇದರಿಂದ ಮಾನಸಿಕ ಮತ್ತು ದೈಹಿಕ ತೊಂದರೆ ಅನುಭವಿಸಬೇಕಾಗುತ್ತದೆ. ಯುವಕರು ಮಾದಕ ವಸ್ತುವಿನಂತೆ ಸೋಶಿಯಲ್ ಮೀಡಿಯಾಗು ಮಾರು ಹೋಗಬಾರದು. ಇದರಿಂದ
ಅಮೂಲ್ಯವಾದ ಜೀವನ ಮತ್ತು ಗುರಿ ಮುಟ್ಟಲು ಸಾಧ್ಯವಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 27 at 12.44.56 PM

ಮಹಾನಟಿ ರನ್ನರ್ ಅಪ್ ಪ್ರಶಸ್ತಿ ವಿಜೇತೆ ಹಾಗೂ ನಟಿ ಶ್ವೇತಾ ಭಟ್ ಮಾದಕ ವಸ್ತು ವಿರೋಧಿ ದಿನದ ಪ್ರತಿಜ್ಞಾವಿಧಿ ಬೋಧಿಸಿ, ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ದು ಅದನ್ನು ನಿಯಂತ್ರಿಸಲು ಮತ್ತು ಡ್ರಗ್ಸ್ ಮುಕ್ತಾ ದೇಶವನ್ನಾಗಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು, ಯಾರೂ ಕೂಡ ಪ್ಯಾಶನ್, ಕ್ಷಣಿಕ ಸುಖಕ್ಕಾಗಿ ಮಾದಕ ವಸ್ತುಗಳ ಸೇವನೆ ಮಾಡಬಾರದು ಮಾಡುವವರಿಗೆ ಪ್ರೋತ್ಸಾಹ ಸಹ ನೀಡದೆ ಇದರಿಂದ ಆಗುವ ದುಷ್ಪರಿಣಾಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಮಾಧಕ ವಸ್ತುಗಳ ಜಾಗೃತಿ ಕುರಿತು ವಿವಿಧ ಸ್ಪರ್ಧೆ ಆಯೋಜಿಸಲಾಗಿದ್ದು, ವಿಜೇತರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದಾ ಜಗದೀಶ್ ಎಮ್, ಕೃಷ್ಣಮೂರ್ತಿ, ಕ್ರಿಮ್ಸ್ನ ನ್ಯಾಯಾ ವೈದ್ಯ ಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಪಕಿ ಡಾ. ಮಹಾಲಕ್ಷಿ ಎಂ ಬಿ.ಕೆ, ಪೊಲೀಸ್ ಹಾಗೂ ಅಬಕಾರಿ ಇಲಾಖೆ ಅಧಿಕಾರಿ ಸಿಬ್ಬಂದಿಗಳು, ಎನ್‌ಕಾರ್ಡ ಕಮಿಟಿಯ ಸದಸ್ಯರು ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಶೌಚಾಲಯದಲ್ಲೇ ಕುಳಿತು ಹೈಕೋರ್ಟ್‌ ಕಲಾಪದಲ್ಲಿ ಭಾಗವಹಿಸಿದ ಯುವಕ: ವಿಡಿಯೋ ವೈರಲ್

ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಶಿವಾಜಿ ಹೈಸ್ಕೂಲ್ ನಿಂದ ಪೊಲೀಸ್ ಕಲ್ಯಾಣ ಮಂಟಪ ಹಾಗೂ ಕಾರವಾರ ಬಸ್ ನಿಲ್ದಾಣದಿಂದ ಪೊಲೀಸ್ ಕಲ್ಯಾಣ ಮಂಟಪದವರೆಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಂದ ರ‍್ಯಾಲಿ ನಡೆಯಿತು.

WhatsApp Image 2025 06 27 at 12.44.55 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...