ಉತ್ತರ ಕನ್ನಡ | ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಸಿಐಎಸ್ಎಫ್ ಸಿಬ್ಬಂದಿ ಸಾವು

Date:

ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಕರ್ತವ್ಯ ನಿರತರಾಗಿದ್ದ ಸಿಐಎಸ್ಎಫ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರಕ್ಕೆ ಸಂಬಂಧಿಸಿದ ಮಲ್ಲಾಪುರ ಟೌನ್‌ಶಿಪ್‌ನಲ್ಲಿ ನಡೆದಿದೆ.

ಮೃತನನ್ನು ಬಿಹಾರ ಮೂಲದ ಹರೇಂದ್ರ ಕುಮಾರ್(27) ಎಂದು ಗುರುತಿಸಲಾಗಿದೆ. ಅವರು ಮಲ್ಲಾಪುರ ಎನ್‌ಪಿಸಿಐಎಲ್‌ ಟೌನ್‌ಶಿಪ್‌ನಲ್ಲಿ ಮತ್ತೊಬ್ಬ ಸಿಐಎಸ್ಎಫ್ ಸಿಬ್ಬಂದಿ ಎರ್ಟಿಗಾ ವಾಹನದಲ್ಲಿ ಕಾರು ಚಾಲಕನೊಂದಿಗೆ ಗಸ್ತು ಕರ್ತವ್ಯದಲ್ಲಿದ್ದರು. ಅವರು ಸಿಐಎಸ್ಎಫ್‌ನ ತ್ವರಿತ ಪ್ರತಿಕ್ರಿಯೆ ತಂಡದ ಭಾಗವಾಗಿದ್ದರು. ಹರೇಂದ್ರ ಕುಮಾರ್ ಅವರು ಹಿಂದೆ ಕುಳಿತಿದ್ದಾಗ ಆಕಸ್ಮಿಕವಾಗಿ ಬಂದೂಕು ಹೊರಕ್ಕೆ ಬಿದ್ದು, ನೇರವಾಗಿ ಅವರ ಕುತ್ತಿಗೆಗೆ ಹೊಡೆದಿದೆ. ಇದರ ಪರಿಣಾಮ ಮೃತಪಟ್ಟಿದ್ದು, ಸದ್ಯ ವಾಹನದಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ನಂತರ ಸಾರ್ವಜನಿಕರಲ್ಲಿ, ಸಿಐಎಸ್ಎಫ್ ಸಿಬ್ಬಂದಿ ಪರಸ್ಪರ ಗುಂಡು ಹಾರಿಸಿಕೊಂಡಿದ್ದಾರೆಂಬ ವದಂತಿಗಳು ಹರಡಿದ್ದವು. ಇದು ಸ್ವಲ್ಪ ಸಮಯದ ಭೀತಿಯ ವಾತಾವರಣವನ್ನು ಸೃಷ್ಟಿಸಿತ್ತು. ಆದರೂ ಪ್ರಾಥಮಿಕ ವರದಿಗಳ ಪ್ರಕಾರ ಇದೊಂದು ಆಕಸ್ಮಿಕ ಅಪಘಾತವೆಂಬುದು ಕಂಡುಬಂದಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಗೊಂಡ ಹರೇಂದ್ರನನ್ನು ಪ್ರಥಮ ಚಿಕಿತ್ಸೆಗಾಗಿ ಕೂಡಲೇ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮಧುಮೇಹ ಜಾಗೃತಿ; ಆಶಾ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಾಗಾರ

ಎರ್ಟಿಗಾದಂತಹ ಕೆಳಮಟ್ಟದ ವಾಹನಗಳಲ್ಲಿ ಲೋಡ್ ಮಾಡಿದ ಬಂದೂಕುಗಳೊಂದಿಗೆ ಕುಳಿತುಕೊಳ್ಳುವುದು ಸವಾಲಾಗಿರುವುದರಿಂದ ಬಂದೂಕುಗಳೊಂದಿಗೆ ಗಸ್ತು ನಡೆಸುವ ಸಿಬ್ಬಂದಿಗೆ ಎತ್ತರದ ವಾಹನಗಳನ್ನು ಒದಗಿಸುವಂತೆ ಕರೆ ನೀಡಲಾಗಿದೆ. ಇಂತಹ ಅಪಘಾತಗಳು ಇತರರಿಗೆ ತೊಂದರೆಯಾಗದಂತೆ ತಡೆಯಲು ಸಕ್ರಿಯ ಸಿಬ್ಬಂದಿಗೆ ನಿಯೋಜಿಸಲಾದ ವಾಹನಗಳಲ್ಲಿ ಬದಲಾವಣೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...