ಉತ್ತರ ಕನ್ನಡ | ದಸಂಸ ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ: ಚಂದ್ರಕಾಂತ ಕಾದ್ರೊಳ್ಳಿ

Date:

ದ‌ಲಿತ ಸಂಘರ್ಷ ಸಮಿತಿ(ದಸಂಸ) ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ ಎಂದು ಡಿಎಸ್ಎಸ್ ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೊಳ್ಳಿ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಪಂಚಾಯತ್ ಟೌನ್ ಹಾಲ್‌ನಲ್ಲಿ ಜುಲೈ 28ರ ಭಾನುವಾರದಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ಧ್ವನಿ) ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ, “ಸಂವಿಧಾನಕ್ಕೆ ಕುತ್ತು ಬರುತ್ತಿರುವುದರ ಬಗ್ಗೆ ಎಚ್ಚರವಹಿಸಬೇಕು” ಎಂದು ಕರೆ ಕೊಟ್ಟರು.

“ಅನೇಕ ಸಾಹಿತಿ ಮತ್ತು ಕವಿಗಳು ಹೋರಾಟದ ಕಿಚ್ಚನ್ನು ಹೊತ್ತಿಸಿದರೆ, ಡಿಎಸ್ಎಸ್ ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿರುವ ಸಂಘಟನೆಯಾಗಿದೆ. ಸಮಾಜದಲ್ಲಿ ದೌರ್ಜನ್ಯಕ್ಕೊಳಗಾದವರ ಧ್ವನಿಯಾಗಿ‌ ಕೆಲಸ ಮಾಡಿದೆ. ತುಳಿತಕ್ಕೆ ಒಳಗಾಗಿದ್ದ ಹಲವು ಕುಟುಂಬಗಳ ಧ್ವನಿಯಾಗಿ ಕೆಲಸ ಮಾಡಿದೆ. ಈಗ ದಲಿತ ಸಂಘಟನೆ ಉತ್ತುಂಗದ ಸ್ಥಿತಿಯಲ್ಲಿದೆ. ಅಂಬೇಡ್ಕರ್ ಅವರ ದಯೆದಿಂದ ನಮಗೆಲ್ಲ ಸಮಾನತೆ ಸಿಕ್ಕಿದೆ. ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ, ಈ ದೇಶವನ್ನು ಆಳೋಣ, ಬಾಬಾ ಸಾಹೇಬರು ನಮಗಾಗಿ ಸಂವಿಧಾನ ಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳೋಣ” ಎಂದು ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಸಿಸಿಸಿ ಬ್ಯಾಂಕ್ ನಿರ್ದೇಶಕರು ಮಾತನಾಡಿ, “ಸ್ವತಃ ಅಂಬೇಡ್ಕರ್ ಅವರು ದಲಿತರ ಮೇಲಿನ ದೌರ್ಜನ್ಯ ಯಾವ ರೀತಿ ಇರುತ್ತದೆ ಎಂಬುದನ್ನು ಅನುಭವಿಸಿದ್ದಾರೆ. ನಮಗೆಲ್ಲರಿಗೂ ಸಂವಿಧಾನಬದ್ಧ ಹಕ್ಕುಗಳನ್ನು ನೀಡಿ ಸಮಾಜದಲ್ಲಿ ತಲೆಯಿತ್ತಿ ನಿಲ್ಲುವಂತೆ ಮಾಡಿದ್ದಾರೆ. ಇತ್ತೀಚೆಗೆ ದಲಿತರಿಗೆ ಮೀಸಲಿಟ್ಟ ಹಣವು ದುರ್ಬಳಕೆ ಆಗುತ್ತಿದೆ ಅನ್ನಿಸುತ್ತಿದೆ. ಅದನ್ನು ತಡೆಯುವುದಕ್ಕೆ ಡಿಎಸ್ಎಸ್ ಈಗ ಮುಂದಾಗಬೇಕು ಮತ್ತು ಹೋರಾಟಗಳಿಂದ ಎಷ್ಟೋ ಬದಲಾವಣೆಗಳಾಗಿವೆ. ಹೀಗಾಗಿ ಪ್ರತಿಭಟನೆ, ಹೋರಾಟಗಳು ನಿರಂತರವಾಗಿರಲಿ” ಎಂದರು.

ಮುಸ್ಲಿಂ ಮುಖಂಡರೊಬ್ಬರು ಮಾತನಾಡಿ, “ನಾವು ರಾಷ್ಟ್ರಭಕ್ತರಾಗಬೇಕೆ ಹೊರತು ಯಾವುದೋ ಒಂದು ಪಕ್ಷದ ಭಕ್ತರಾಗಬಾರದು. ಕಾರಣ, ಪ್ರಸ್ತುತದಲ್ಲಿ ನಮ್ಮ ಸಂವಿಧಾನದ ಆಶಯ ಮರೆತಿದ್ದಕ್ಕೆ ಸಂವಿಧಾನ ಕಾಪಾಡಿಕೊಳ್ಳುವ ವಿಚಾರ ಮಾಡುತ್ತಿದ್ದೇವೆ. ರಾಜಕೀಯ ಪಕ್ಷದವರು ತಮಗೆ ಬೇಕಾದಂತೆ ಸಂವಿಧಾನ ಬಳಿಸಿಕೊಂಡು ಅಂಬೇಡ್ಕರ್ ಕನಸಿಗೆ ಎಳ್ಳುನೀರು ಬಿಡುವ ಮುನ್ನ ನಾವು ಎಚ್ಚೆತ್ತುಕೊಂಡು ಸಂವಿಧಾನ ಉಳಿಸಿಕೊಳ್ಳಬೇಕು. ಸಂವಿಧಾನಕ್ಕೆ ಕುತ್ತು ಬಂದಾಗ ಉಳಿಸಿಕೊಳ್ಳಲು ಸನ್ನದ್ಧರಾಗಬೇಕಿದೆ. ಮಿಸಲಾತಿ‌ ಕಸಿದುಕೊಳ್ಳುವ ಹುನ್ನಾರದ ವಿರುದ್ಧ ನಮ್ಮ‌ ಹಕ್ಕುಗಳಿಗಾಗಿ ನಾವು ನಿಲ್ಲಬೇಕಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ |ಮಳೆ ಹಾನಿ : ವಿವಿಧ ಗ್ರಾಮಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ

ಎಲ್‌ವಿಕೆ ಸಮಾಜ ಸೇವಾ ಸಂಸ್ಥೆಯ ಯುವರತ್ನ ಯುವಕರು ಕ್ರಾಂತಿಗೀತೆಗಳ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬಸವರಾಜ ಸಂಗಮೇಶ್ವರ, ಹಲವು ಜಿಲ್ಲೆಗಳ ಪದಾಧಿಕಾರಿಗಳು, ಸಂಘಟಕರು, ಗಣ್ಯರು, ಹಲವು ಸಮುದಾಯಗಳ ಮುಖಂಡರು, ಮಹಿಳೆಯರು, ಯುವಜನರು, ಅಂಬೇಡ್ಕರ್ ಅಭಿಮಾನಿಗಳು ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...