ಉತ್ತರ ಕನ್ನಡ | SC-ST ದೌರ್ಜನ್ಯ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕ್ರಮ ಜರುಗಿಸುವಂತೆ ಡಿಸಿ ಲಕ್ಷ್ಮೀಪ್ರಿಯ ಸೂಚನೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲಾಗುವ SC-ST ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿನ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ಅನವಶ್ಯಕ ವಿಳಂಬವಾಗುವುದನ್ನು ತಪ್ಪಿಸಿ, ಆದಷ್ಟು ಶೀಘ್ರವಾಗಿ ಪರಿಹಾರ ನೀಡುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ 2022 ರಿಂದ ಇಂದಿನವರೆಗೂ ಒಟ್ಟು 168 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 4 ಪ್ರಕರಣಗಳು ಇತರೆ ಜಿಲ್ಲೆಗೆ ವರ್ಗಾವಣೆಯಾಗಿವೆ. ಎಫ್‌ಐಆರ್ ದಾಖಲಾಗಿರುವ 153 ಪ್ರಕರಣಗಳಲ್ಲಿ 117.01 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ. ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವ 108 ಪ್ರಕರಣಗಳಲ್ಲಿ 127.99 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ. ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿದ್ದಂತೆಯೇ ಸಂತ್ರಸ್ತರಿಂದ ಅಗತ್ಯ ದಾಖಲೆಗಳನ್ನು ಪಡೆದು ಆದಷ್ಟು ಶೀಘ್ರದಲ್ಲಿ ಪರಿಹಾರ ವಿತರಿಸಬೇಕು” ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲಾ ಉಪವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿಯಮಿತವಾಗಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ನಡೆಸಿ, ಜಿಲ್ಲೆಯ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಜನರ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.ಇದೇ ರೀತಿ, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ವಿಚಾರಣೆ ತ್ವರಿತಗೊಳ್ಳುವಂತೆ ಕ್ರಮ ಕೈಗೊಂಡರೆ ಸಂತ್ರಸ್ತರಿಗೆ ಶೀಘ್ರದಲ್ಲಿ ನ್ಯಾಯ ದೊರೆಯುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಸದಸ್ಯರು ಮಾತನಾಡಿ, ಕುಮಟಾದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ನೀಡುವುದು, ಸಮುದಾಯ ಭವನಗಳಲ್ಲಿ ನಿಗಧಿಪಡಿಸಿದ ದರವನ್ನು ಕಡಿಮೆ ಮಾಡುವುದು, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸುವುದನ್ನು ತಡೆಯುವುದು, ಬ್ಯಾಂಕ್‌ಗಳಲ್ಲಿ ಸಾಲ ವಿತರಣೆಯನ್ನು ಶೀಘ್ರಗೊಳಿಸುವುದು, ವಸತಿರಹಿತರಿಗೆ ನಿವೇಶನ ಒದಗಿಸುವುದು ಮುಂತಾದ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಈ ಎಲ್ಲಾ ಸಮಸ್ಯೆಗಳನ್ನು ದಾಖಲಿಸಿಕೊಂಡು ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಡಿಸಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ಘೋಷಿಸಿದ ಎಸಿ ಕಾವ್ಯರಾಣಿ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಸರ್ಕಾರಿ ಅಭಿಯೋಜಕಿ ಸುನೀತಾ ನಾಗೇಕರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...