ಉತ್ತರ ಕನ್ನಡ | ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

Date:

ಉತ್ತರ ಕನ್ನಡ: ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಘೋಷಣೆಗಳನ್ನು ಕೂಗುತ್ತಾ ಸಾಗಿದ ಕಾರ್ಯಕರ್ತೆಯರು, ಸರ್ಕಾರದ ವಿಳಂಬ ನೀತಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘಟನೆಯ ಪ್ರಮುಖರಾದ ಭವಾನಿಶಂಕರ ಗೌಡ ಅವರು, ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ನೀಡಿದ್ದ ಭರವಸೆಗಳನ್ನು ಮರೆತಿದೆ ಎಂದು ಆರೋಪಿಸಿದರು. 2025ರ ಜನವರಿಯಲ್ಲಿ ನಡೆದ ಅಹೋರಾತ್ರಿ ಹೋರಾಟದ ಸಂದರ್ಭದಲ್ಲಿ ಮಾಸಿಕ 10,000 ರೂಪಾಯಿಗಳ ಕನಿಷ್ಠ ವೇತನದ ಭರವಸೆ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಬಜೆಟ್‌ನಲ್ಲಿ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರೂ ಮತ್ತು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಗೌರವಧನವನ್ನು 8,000 ರೂಪಾಯಿಗೆ ಏರಿಸುವ ಭರವಸೆ ನೀಡಿ 14 ತಿಂಗಳು ಕಳೆದರೂ ಈವರೆಗೂ ಯಾವುದೇ ಅಧಿಕೃತ ಆದೇಶ ಹೊರಬಂದಿಲ್ಲ ಎಂದು ಅವರು ದೂರಿದರು. ಸೇವೆಯಿಂದ ಬಿಡುಗಡೆಗೊಂಡವರಿಗೆ ಗ್ರೂಪ್ ‘ಡಿ’ ಹುದ್ದೆ ನೀಡುವ ಭರವಸೆಯೂ ಇನ್ನೂ ಈಡೇರಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ ? ದಾಂಡೇಲಿಯಲ್ಲಿ ಕರಗುತ್ತಿರುವ ಕಲರವ; ಪ್ರವಾಸಿಗರ ಅಬ್ಬರಕ್ಕೆ ಬೆದರಿದ ʼಹಾರ್ನ್‌ಬಿಲ್‌ʼ ಪಕ್ಷಿ ಪ್ರಭೇದ!

ಸಂಘದ ಜಿಲ್ಲಾಧ್ಯಕ್ಷೆ ಪದ್ಮಾವತಿ ಚಲವಾದಿ ಮಾತನಾಡಿ, ಕರೋನಾ ಅಂತಹ ಕಠಿಣ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರ ಪರಿಶ್ರಮಕ್ಕೆ ಸರ್ಕಾರ ಸೂಕ್ತ ಬೆಲೆ ನೀಡುತ್ತಿಲ್ಲ. ಕೇವಲ ಭರವಸೆಗಳಿಂದ ಹೊಟ್ಟೆ ತುಂಬುವುದಿಲ್ಲ, ಸರ್ಕಾರ ಕೂಡಲೇ ತನ್ನ ವಾಗ್ದಾನವನ್ನು ಈಡೇರಿಸಬೇಕು.

ಒಂದು ವೇಳೆ ಸರ್ಕಾರ ಮೌನ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯ ಅಂತ್ಯದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಸಂಗೀತಾ, ಶ್ವೇತಾ ಕಪಟ್ಕರ್, ನಿವೇದಿತಾ, ಪ್ರಭಾಮಣಿ ಜೈನ್, ಚಂದ್ರಕಲಾ ನಾಯ್ಕ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ನೂರಾರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...