ಉತ್ತರ ಕನ್ನಡ | ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಜಿಲ್ಲಾಡಳಿತ ಸಜ್ಜು; ಡಿಬಿಟಿ ಮೂಲಕ ನಗದು ಜಮಾಕ್ಕೆ ಕ್ರಮ

Date:

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ರೈತರಿಂದ ಭತ್ತ ಖರೀದಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಎಲ್ಲಾ ತಾಲೂಕುಗಳಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಸರ್ಕಾರವು ಪ್ರಸಕ್ತ ಸಾಲಿಗೆ ಕನಿಷ್ಠ ಬೆಂಬಲ ಬೆಲೆಯಡಿ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲಿಗೆ ರೂ. 2369 ಹಾಗೂ ಗ್ರೇಡ್–ಎ ಭತ್ತಕ್ಕೆ ರೂ. 2389 ಗಳನ್ನು ನಿಗದಿಪಡಿಸಿದೆ. ರೈತರಿಂದ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಖರೀದಿಸಲು ಅನುಕೂಲವಾಗುವಂತೆ ಎಲ್ಲಾ ತಾಲೂಕುಗಳಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಬೇಕು. ಟಿಎಪಿಸಿಎಂಎಸ್ ಕೇಂದ್ರಗಳ ಮೂಲಕ ಭತ್ತ ಖರೀದಿ ಸೌಕರ್ಯ ಕಲ್ಪಿಸಲು ನೋಂದಣಿ ಕೇಂದ್ರಗಳನ್ನು ತೆರೆಯುವ ಜೊತೆಗೆ ಖರೀದಿ ಕೇಂದ್ರಗಳು ಸೂಕ್ತ ಗೋದಾಮು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಹೊಂದಿರುವುದನ್ನು ಪರಿಶೀಲಿಸಬೇಕು. ಎಫ್‌ಎಕ್ಯೂ ಗುಣಮಟ್ಟವನ್ನು ಖಚಿತಪಡಿಸಲು ಪ್ರತೀ ಖರೀದಿ ಕೇಂದ್ರದಲ್ಲಿ ಗುಣಮಟ್ಟ ಪರೀಕ್ಷಕರನ್ನು ಹಾಗೂ ಖರೀದಿ ಅಧಿಕಾರಿಗಳನ್ನು ನಿಯೋಜಿಸಬೇಕು. ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್, ರಿಂದ 50 ಕ್ವಿಂಟಾಲ್ ಭತ್ತವನ್ನು ಖರೀದಿಸುವ ವ್ಯವಸ್ಥೆಯಿದ್ದು, ಖರೀದಿಸಿದ ಭತ್ತದ ಹಣವನ್ನು ಡಿಬಿಟಿ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪಾವತಿಸಲಾಗುವುದು” ಎಂದು ತಿಳಿಸಿದರು.

ಖರೀದಿ ಕೇಂದ್ರಗಳಿಂದ ಸಂಗ್ರಹವಾಗುವ ಭತ್ತವನ್ನು ಹಲ್ಲಿಂಗ್ ಮಾಡುವ ಗಿರಣಿ ಮಾಲೀಕರನ್ನು ಗುರುತಿಸುವ ಅಗತ್ಯವಿದೆ ಎಂದ ಅವರು, “ಕೃಷಿ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು 40,626.30 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಾಗಿದೆ. ಅಂದಾಜು 10,95,058 ಕ್ವಿಂಟಾಲ್ ಭತ್ತ ಇಳುವರಿ ನಿರೀಕ್ಷೆಯಿದ್ದು, ಇದಕ್ಕೆ ಅನುಗುಣವಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳನ್ನು ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಇಲಾಖೆಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡದ ಮುಂಗಾರು ವರದಿ: ಕೋಟ್ಯಂತರ ಮೌಲ್ಯದ ಸಾರ್ವಜನಿಕ ಆಸ್ತಿಗೆ ಹಾನಿ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವ ಪ್ರಸಾದ್ ಗಾಂವಕರ್, ಆಹಾರ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ರೇವಣ್‌ಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...