ಉತ್ತರ ಕನ್ನಡ | ಕಾರವಾರ ಮತ್ತು ಹಳಿಯಾಳ ಕ್ರೀಡಾ ವಸತಿ ನಿಲಯ ಪ್ರವೇಶಕ್ಕೆ ಜಿಲ್ಲಾದ್ಯಂತ ಆಯ್ಕೆ ಪ್ರಕ್ರಿಯೆ ಆರಂಭ

Date:

ಉತ್ತರ ಕನ್ನಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರವಾರ ಮತ್ತು ಹಳಿಯಾಳದ ಕ್ರೀಡಾ ವಸತಿ ನಿಲಯಗಳಿಗೆ 2026-27ನೇ ಸಾಲಿನ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ.

ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸುವ ನಿಟ್ಟಿನಲ್ಲಿ ಎಲ್ಲಾ ತಾಲೂಕು ಕೇಂದ್ರಗಳ ಕ್ರೀಡಾಂಗಣಗಳಲ್ಲಿ ಆಯ್ಕೆ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಈ ಆಯ್ಕೆ ಪ್ರಕ್ರಿಯೆಯು ಪ್ರಮುಖವಾಗಿ 5ನೇ ತರಗತಿ, 8ನೇ ತರಗತಿ ಹಾಗೂ ಪ್ರಥಮ ಪಿಯುಸಿ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯಲಿದೆ.

5ನೇ ತರಗತಿಗೆ ಪ್ರವೇಶ ಪಡೆಯುವವರು ಪ್ರಸ್ತುತ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು ಮತ್ತು ಜೂನ್ 1, 2026ಕ್ಕೆ 11 ವರ್ಷ ಮೀರಿರಬಾರದು. 8ನೇ ತರಗತಿಗೆ ಸೇರಬಯಸುವವರು 7ನೇ ತರಗತಿಯಲ್ಲಿರಬೇಕು ಹಾಗೂ 14 ವರ್ಷದೊಳಗಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ರೀತಿ, ಪ್ರಥಮ ಪಿಯುಸಿ ಪ್ರವೇಶಕ್ಕೆ ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷದೊಳಗಿನ ಕ್ರೀಡಾಪಟುಗಳು ಅರ್ಹರಾಗಿರುತ್ತಾರೆ. 8ನೇ ತರಗತಿ ಮತ್ತು ಪಿಯುಸಿ ಅಭ್ಯರ್ಥಿಗಳು ತಾಲೂಕು, ಜಿಲ್ಲಾ ಅಥವಾ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ದಾಖಲೆಗಳನ್ನು ಹೊಂದಿರಬೇಕು.

ಅಥ್ಲೆಟಿಕ್ಸ್, ಕುಸ್ತಿ, ವಾಲಿಬಾಲ್, ಜುಡೋ, ಬಾಸ್ಕೆಟ್ ಬಾಲ್ ಮತ್ತು ಫುಟ್‌ಬಾಲ್ ವಿಭಾಗಗಳಲ್ಲಿ ಆಯ್ಕೆ ನಡೆಯಲಿದೆ. ಬಾಸ್ಕೆಟ್ ಬಾಲ್ ಮತ್ತು ವಾಲಿಬಾಲ್ ಕ್ರೀಡೆಗಳಿಗೆ ವಿಶೇಷವಾಗಿ ಎತ್ತರದ ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಕಿರಿಯರ ವಿಭಾಗದ ಬಾಲಕರಿಗೆ ಕನಿಷ್ಠ 170-172 ಸೆಂ.ಮೀ ಹಾಗೂ ಬಾಲಕಿಯರಿಗೆ 163 ಸೆಂ.ಮೀ ಎತ್ತರವಿರಬೇಕು.

ಹಿರಿಯರ ವಿಭಾಗದ (ಪಿಯುಸಿ) ಬಾಲಕರಿಗೆ 180-184 ಸೆಂ.ಮೀ ಮತ್ತು ಬಾಲಕಿಯರಿಗೆ 165-168 ಸೆಂ.ಮೀ ಎತ್ತರ ಕಡ್ಡಾಯಗೊಳಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ವೇಗದ ಓಟ, ಲಾಂಗ್ ಜಂಪ್ ಸೇರಿದಂತೆ ವಿವಿಧ ದೈಹಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಭಟ್ಕಳ | ಬೇಡ್ತಿ-ವರದಾ ಯೋಜನೆಗೆ ಅಡಿಪಾಯ ಹಾಕಿದ್ದೇ ಬಿಜೆಪಿ: ಸಚಿವ ಮಂಕಾಳ ವೈದ್ಯ ವಾಗ್ದಾಳಿ

ಆಯ್ಕೆಯಾದ ಕ್ರೀಡಾಪಟುಗಳಿಗೆ ನುರಿತ ತರಬೇತುದಾರರಿಂದ ವಿಶೇಷ ತರಬೇತಿ ನೀಡಲಾಗುವುದು. ಉಚಿತ ವಸತಿ, ಪೌಷ್ಟಿಕ ಆಹಾರ, ಸಮವಸ್ತ್ರ ಮತ್ತು ಕ್ರೀಡಾ ಕಿಟ್‌ಗಳನ್ನು ಸರ್ಕಾರದಿಂದ ಒದಗಿಸಲಾಗುತ್ತದೆ. ಅಭ್ಯರ್ಥಿಗಳು ಇಚ್ಛಿಸುವ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಅವಕಾಶವಿರುತ್ತದೆ. ಆಯ್ಕೆಗೆ ಬರುವವರು ಆಧಾರ್ ಕಾರ್ಡ್, ಶಾಲಾ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ವ್ಯಾಸಂಗ ಪ್ರಮಾಣ ಪತ್ರ ಮತ್ತು ಜನನ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಬೇಕು.

ಜಿಲ್ಲೆಯ ವಿವಿಧೆಡೆ ಬೆಳಿಗ್ಗೆ 10 ಗಂಟೆಗೆ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದ್ದು, ವಿವರಗಳು ಹೀಗಿವೆ: ಜ. 19, ಯಲ್ಲಾಪುರ ತಾಲೂಕು ಕ್ರೀಡಾಂಗಣ, ಜ. 20, ಕುಮಟಾದ ಮಂಕಿ ಕ್ರೀಡಾಂಗಣ ಮತ್ತು ಜೋಯಿಡಾ ತಾಲೂಕು ಕ್ರೀಡಾಂಗಣ. ಜ. 21, ಸಿದ್ದಾಪುರ ಮತ್ತು ಶಿರಸಿಯ ಜಿಲ್ಲಾ ಕ್ರೀಡಾಂಗಣ, ಜ. 22, ದಾಂಡೇಲಿಯ ಡಿ.ಎಫ್.ಎ ಕ್ರೀಡಾಂಗಣ ಮತ್ತು ಮುಂಡಗೋಡ ತಾಲೂಕು ಕ್ರೀಡಾಂಗಣ, ಜ. 23, ಅಂಕೋಲಾ ತಾಲೂಕು ಕ್ರೀಡಾಂಗಣ, ಜ. 24, ಹಳಿಯಾಳ ತಾಲೂಕು ಕ್ರೀಡಾಂಗಣ. ಜ. 25, ಕಾರವಾರದ ಮಾಲಾದೇವಿ ಕ್ರೀಡಾಂಗಣ, ಜ. 28, ಹೊನ್ನಾವರದ ಎಸ್.ಡಿ.ಎಮ್. ಕಾಲೇಜು, ಜ. 29, ಭಟ್ಕಳ ತಾಲೂಕು ಕ್ರೀಡಾಂಗಣ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿಗಳು ಅಥವಾ ತರಬೇತುದಾರರನ್ನು ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...