ಉತ್ತರ ಕನ್ನಡ | ಆತಂಕ ಸೃಷ್ಟಿಸಿದ ಇ-ಮೇಲ್ ಬಾಂಬ್ ಬೆದರಿಕೆಗಳು: ಭಟ್ಕಳ, ಕಾರವಾರ ತಹಶೀಲ್ದಾರ್ ಕಚೇರಿಗಳಲ್ಲಿ ತಪಾಸಣೆ

Date:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ಕಾರವಾರದ ತಹಶೀಲ್ದಾರ್ ಕಚೇರಿಗಳಿಗೆ ಸತತ ಎರಡು ದಿನಗಳ ಅಂತರದಲ್ಲಿ ಬಂದ ಇ-ಮೇಲ್ ಬಾಂಬ್ ಬೆದರಿಕೆಗಳು ಜಿಲ್ಲಾಡಳಿತ ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದವು. ಆದಾಗ್ಯೂ, ವ್ಯಾಪಕ ತಪಾಸಣೆಯ ನಂತರ ಈ ಎರಡೂ ಬೆದರಿಕೆಗಳು ಹುಸಿ ಕರೆಯೆಂದು ದೃಢಪಟ್ಟಿವೆ.

ಮೊದಲಿಗೆ ಮಂಗಳವಾರ ಭಟ್ಕಳ ತಹಶೀಲ್ದಾರ್ ಕಚೇರಿಗೆ ಬೆದರಿಕೆ ಸಂದೇಶ ಬಂದಿದ್ದರೆ, ಬೆಳಿಗ್ಗೆ ಕಾರವಾರ ತಹಶೀಲ್ದಾರ್ ಕಚೇರಿಗೆ ಇದೇ ಮಾದರಿಯ ಇ-ಮೇಲ್ ಬಂದಿತ್ತು. ಕಾರವಾರ ತಹಶೀಲ್ದಾರ್ ಕಚೇರಿಗೆ ಸಂದೇಶ ಬಂದ ತಕ್ಷಣ, ತಹಶೀಲ್ದಾರ್ ನಿಶ್ಕಲ್ ನರೋನ್ಹಾ ಅವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು. ವಿಷಯ ತಿಳಿಯುತ್ತಿದ್ದಂತೆ, ಹಿರಿಯ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ಸಂಪೂರ್ಣ ಕಚೇರಿಯನ್ನು ಜಾಲಾಡಿ ತಪಾಸಣೆ ನಡೆಸಿದ ನಂತರ, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ, ಬಂದಿರುವುದು ಸುಳ್ಳು ಅಥವಾ ವಂಚನೆಯ ಕೃತ್ಯ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.”ಮೇಲ್ನೋಟಕ್ಕೆ ಇದೊಂದು ಕಟ್ಟುಕಥೆಯಂತೆ ಕಂಡುಬಂದರೂ, ನಾವು ಭದ್ರತಾ ದೃಷ್ಟಿಯಿಂದ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಎಲ್ಲ ರೀತಿಯ ತಪಾಸಣೆಗಳನ್ನು ನಡೆಸಿದ್ದೇವೆ,” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000377292

ಘಟನೆಗಳ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದೀಪನ್ ಎಂ.ಎನ್., “ಭಟ್ಕಳ ಮತ್ತು ಕಾರವಾರ ಕಚೇರಿಗಳಿಗೆ ಬಂದಿರುವ ಇ-ಮೇಲ್ ಬೆದರಿಕೆಗಳು ಒಂದೇ ಮಾದರಿಯಲ್ಲಿದ್ದು, ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು. ಈ ಹಿಂದೆ ಜೂನ್ ತಿಂಗಳಿನಲ್ಲಿ ಭಟ್ಕಳ ಪೊಲೀಸ್ ಠಾಣೆಗೂ ಇದೇ ರೀತಿಯ ಬೆದರಿಕೆ ಬಂದಿತ್ತು, ಆಗ ಆರೋಪಿಯನ್ನು ಬಂಧಿಸಲಾಗಿತ್ತು

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ವಿದ್ಯಾರ್ಥಿಗಳಿಂದ ಭತ್ತದ ಕೊಯ್ಲು: ಪ್ರಾಯೋಗಿಕ ಕೃಷಿ ಅಧ್ಯಯನಕ್ಕೆ ಸಾಕ್ಷಿಯಾದ ಹುಲ್ಕುತ್ರಿ ಶಾಲೆ

ಪ್ರಸ್ತುತ ಇ-ಮೇಲ್ ಕಳುಹಿಸಿದವರ ಮೂಲವನ್ನು ಪತ್ತೆಹಚ್ಚಲು ಸೈಬರ್ ಠಾಣಾ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಜೊತೆಗೆ, ಜಿಲ್ಲೆಯ ಇತರೆ ಸರ್ಕಾರಿ ಕಚೇರಿಗಳಿಗೂ ಇಂತಹ ಬೆದರಿಕೆಗಳು ಬಂದಿವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಸದ್ಯ ಎರಡೂ ಕಚೇರಿಗಳಲ್ಲಿ ದೈನಂದಿನ ಕಾರ್ಯಗಳು ಯಥಾಸ್ಥಿತಿಯಲ್ಲಿ ಮುಂದುವರಿದಿವೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಎಸ್ಪಿ ಮನವಿ ಮಾಡಿದ್ದು, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡುವಂತೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...