ಉತ್ತರ ಕನ್ನಡ | ದೇವಭಾಗ್ ಬೀಚ್‌ನಲ್ಲಿ ಮತ್ತೆ ‘ಮೀನಿನ ಮಳೆ’!

Date:

ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಿಗೆ ಮತ್ತೊಮ್ಮೆ ಅಚ್ಚರಿಯ ಲಾಟರಿ ಸಿಕ್ಕಂತಾಗಿದೆ. ಇಂದು ಬೆಳಗ್ಗೆ ಕಾರವಾರ ತಾಲೂಕಿನ ದೇವಭಾಗ್ ಕಡಲತೀರದಲ್ಲಿ ಆಶ್ಚರ್ಯಕರ ದೃಶ್ಯವೊಂದು ಕಾಣಿಸಿಕೊಂಡಿದೆ. ಇಂದು ಸಮುದ್ರದ ಅಲೆಗಳು ತನ್ನ ಜೊತೆ ಮೀನುಗಳ ದೊಡ್ಡ ಗುಂಪನ್ನೇ ದಡಕ್ಕೆ ತಂದು ಹಾಕಿದೆ.

ಈ ಅಪರೂಪದ ಘಟನೆ ಸ್ಥಳೀಯರಲ್ಲಿ, ವಿಶೇಷವಾಗಿ ಮೀನುಗಾರ ಸಮುದಾಯದಲ್ಲಿ, ಅಪಾರ ಸಂತೋಷ ಮತ್ತು ಸಂಭ್ರಮಕ್ಕೆ ಕಾರಣವಾಗಿದೆ. ಬೆಳಗಿನ ಜಾವ ಕಡಲತೀರದಲ್ಲಿ ನೂರಾರು ಮೀನುಗಳು ಅಲೆಗಳ ಹೊಡೆತಕ್ಕೆ ಸಿಲುಕಿ ದಡದಲ್ಲಿ ಬಿದ್ದಿರುವುದನ್ನು ಕಂಡ ದೇವಭಾಗ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತಕ್ಷಣವೇ ಬೀಚ್ ಕಡೆ ಧಾವಿಸಿದರು.

ಯುವಕರು, ಮಹಿಳೆಯರು, ಮಕ್ಕಳು ಎನ್ನದೆ ಪ್ರತಿಯೊಬ್ಬರೂ ಬಲೆಗಳು, ಬುಟ್ಟಿಗಳು, ಬಟ್ಟೆಗಳು ಕೈಗೆ‌ ಸಿಕ್ಕಿದರಲ್ಲಿ ಮೀನುಗಳನ್ನು ಹಿಡಿಯಲು ಮುಂದಾದರು. ಕೆಲವರು ಬರಿಗೈಯಲ್ಲೇ ಮೀನು ಹಿಡಿದು ಸಂತೋಷದಿಂದ‌ ಬುಟ್ಟಿಯಲ್ಲಿ ತುಂಬಿಕೊಂಡರು.ಕೆಲವೇ ಗಂಟೆಗಳಲ್ಲಿ ಕಡಲತೀರ ಬಹುತೇಕ ಖಾಲಿಯಾಗಿದ್ದು, ಗ್ರಾಮಸ್ಥರು ಕೈತುಂಬಾ ಮೀನುಗಳನ್ನು ಮನೆಗೆ ಕೊಂಡೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಹೊನ್ನಾವರ | ಬಸ್ಸಿನಲ್ಲಿ ಚಿನ್ನಾಭರಣ ಕಳವು ಮಾಡಿದ ಮಹಿಳೆ ಬಂಧನ; ₹1 ಲಕ್ಷ ಮೌಲ್ಯದ ಸ್ವತ್ತು ವಶ

ಕೆಲವರು ಸ್ವಂತ ಬಳಕೆಗೆ ಮೀನು ಇಟ್ಟುಕೊಂಡರೆ, ಇತರರು ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಿದ್ಧತೆ ಆರಂಭಿಸಿದರು.ಕಳೆದ ವಾರ ಅಂಕೋಲಾ ತಾಲ್ಲೂಕಿನ ಹಾರ್ವಾಡ ಕಡಲತೀರದಲ್ಲೂ ಇದೇ ರೀತಿಯ ಘಟನೆ ನಡೆದಿದೆ. ಇದೀಗ ದೇವಭಾಗ್ ಬೀಚ್‌ನಲ್ಲಿ ಎರಡನೇ ಬಾರಿ ಮೀನುಗಳ ರಾಶಿ ದಡಕ್ಕೆ ತಲುಪಿರುವುದು, ಈ ಭಾಗದ ಮೀನುಗಾರರಿಗೆ “ಶುಭಸಂಕೇತ”ವೆಂದು ಸ್ಥಳೀಯ ಮೀನುಗಾರರು ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...