ರಾಜ್ಯ ಸರ್ಕಾರದ ಮಹತ್ವದ ಆದೇಶ: ಅಪಘಾತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡದ ಆಸ್ಪತ್ರೆಗಳಿಗೆ 1 ಲಕ್ಷ ದಂಡ

Date:

ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ಆಸ್ಪತ್ರೆಗಳಿಗೆ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

ಸುಟ್ಟಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿದಂತೆ ಇತರೆ ತುರ್ತು ಸಂದರ್ಭದಲ್ಲಿಯೂ ವೈದ್ಯಕೀಯ ಸಂಸ್ಥೆ ಅಥವಾ ವೈದ್ಯರು ಮುಂಗಡ ಹಣ ಪಾವತಿಗೆ ಬೇಡಿಕೆ ಇಡದೆ, ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡಬೇಕು.

ಗಾಯಗೊಂಡ ವ್ಯಕ್ತಿಯ ಆರೋಗ್ಯ ಸ್ಥಿತಿ ಸುಧಾರಿಸಲು ಪ್ರತಿಯೊಂದು ಆಸ್ಪತ್ರೆಯೂ ತಕ್ಷಣದ ವೈದ್ಯಕೀಯ ತಪಾಸಣೆ ಸೇವೆ ಮತ್ತು ಪ್ರಾಥಮಿಕ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಅಗತ್ಯವೆಂದು ಪರಿಗಣಿಸಿ ಒದಗಿಸಬೇಕು. ಸೌಲಭ್ಯಗಳ ಕೊರತೆಯಿರುವ ಆಸ್ಪತ್ರೆಗಳು, ರೋಗಿಯನ್ನು ಇತರೆ ಆಸ್ಪತ್ರೆಗಳಿಗೆ ವರ್ಗಾವಣೆ ಮಾಡುವ ಮೊದಲು ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ವಿವರಗಳೊಂದಿಗೆ ಸ್ಥಳಾಂತರಿಸಬೇಕು ಎಂದು ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಅಸ್ಪತ್ರೆಗಳಿಗೆ ರಾಜ್ಯ ಸರ್ಕಾರದ ಆದೇಶ

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೈದ್ಯಕೀಯ ಕಾಲೇಜಿನಲ್ಲಿ ಅನಿವಾಸಿ ಕೋಟಾವು ಶಿಕ್ಷಣ ವಿರೋಧಿ: ಶಿಕ್ಷಣ ಉಳಿಸಿ ಸಮಿತಿ

ರಸ್ತೆ ಅಪಘಾತದ ಸಂತ್ರಸ್ತರು, ಅಪಘಾತದ ದಿನಾಂಕದಿಂದ ಏಳು ದಿನಗಳವರೆಗೆ ₹1.50 ಲಕ್ಷದವರೆಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ರಾಜ್ಯ ರಸ್ತೆ ಸುರಕ್ಷತಾ ಮಂಡಳಿಯು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದ್ದು, ಮೋಟಾರು ವಾಹನ ಅಪಘಾತ ನಿಧಿಯಿಂದ ಮರುಪಾವತಿ ಮಾಡಲಾಗುತ್ತದೆ ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...