ಉತ್ತರ ಕನ್ನಡ | ವಿದೇಶಿ ಮಾರುಕಟ್ಟೆಯಲ್ಲಿ ಹೆಚ್ಚಿದ ಬೇಡಿಕೆ; 101 ಕೋಟಿ ರಫ್ತು ವಹಿವಾಟು

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದೇಶಗಳಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡುವ ನಿರೀಕ್ಷಿತ ಸಂಖ್ಯೆಯ ಉದ್ದಿಮೆಗಳಿಲ್ಲ ಎನ್ನುವ ದೂರಿಗೆ ಅಪವಾದವೆಂಬಂತೆ, ಜಿಲ್ಲೆಯಿಂದ ವಿದೇಶಗಳಿಗೆ ಸ್ಥಳೀಯ ಉತ್ಪನ್ನಗಳನ್ನು ರಫ್ತು ಮಾಡುವ ಮೊತ್ತದ ಪ್ರಮಾಣ ಅಧಿಕವಾಗುತ್ತಿದ್ದು, 2023-24 ರಲ್ಲಿ ರೂ.156.34 ಕೋಟಿ ಮೊತ್ತದ ಉತ್ಪನ್ನಗಳನ್ನು ರಪ್ತು ಮಾಡಿದ್ದು, 2024-25 ರಲ್ಲಿ ಇದರ ಪ್ರಮಾಣ ರೂ.101.57 ಕೋಟಿಯಾಗಿದೆ.

ಜಿಲ್ಲೆಯ ರಫ್ತುದಾರರು ನೀಡಿದ ಮಾಹಿತಿಯಂತೆ, 2023-24ರಲ್ಲಿ ಲೇಖನ ಸಾಮಗ್ರಿ ಉತ್ಪನ್ನಗಳಲ್ಲಿ 2297 ಮೆ.ಟನ್, ಕಾಫಿ ಅರೆಬಿಕ್ ಚೆರ್ರಿ ಮತ್ತು ರೊಬೋಸ್ಟ್ ಚೆರ್ರಿ 59,600 ಕೆಜಿ, ಸಾವಯವ ಮೆಣಸಿನಕಾಯಿ ಚಕ್ಕೆಗಳು, ಅರಿಶಿಣ, ಕಪ್ಪು ಮತ್ತು ಬಿಳಿ ಮೆಣಸು 28,044 ಕೆಜಿ, ವೆನಿಲ್ಲಾ ಬೀನ್ಸ್ ಮತ್ತು ವೆನಿಲ್ಲಾ ಬೀನ್ಸ್ ಪೌಡರ್ 1677.3 ಕೆ.ಜಿ ಹಾಗೂ ಹರ್ಬಲ್ ಟೀ, ಮಾತ್ರೆಗಳನ್ನು ಪ್ರಮುಖವಾಗಿ ರಪ್ತು ಮಾಡಲಾಗಿದೆ.

2024-25 ರಲ್ಲಿ 7340 ಮೆ.ಟನ್ ಸಕ್ಕರೆ, 2449 ಮೆ.ಟನ್ ಲೇಖನ ಸಾಮಾಗ್ರಿ, 3,11,000 ಕೆ.ಜಿ. ಕಾಫಿ ಅರೆಬಿಕ್ ಚೆರ್ರಿ ಮತ್ತು ರೊಬೋಸ್ಟ್ ಚೆರ್ರಿ, 1,10,845 ಕೆಜಿ ಸಾವಯವ ಮೆಣಸಿನಕಾಯಿ ಚಕ್ಕೆಗಳು, ಅರಿಶಿಣ, ಕಪ್ಪು ಮತ್ತು ಬಿಳಿ ಮೆಣಸು, 5358 ಕೆಜಿ ವೆನಿಲ್ಲಾ ಬೀನ್ಸ್ ಮತ್ತು ವೆನಿಲ್ಲಾ ಬೀನ್ಸ್ ಪೌಡರ್ ಮತ್ತು ಹರ್ಬಲ್ ಟೀ ಯನ್ನು ರಪ್ತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಮುಖ ಉತ್ಪನ್ನಗಳನ್ನು ಹೊರತುಪಡಿಸಿ, ಇತರೆ ಹಲವು ಉತ್ಪನ್ನಗಳನ್ನು ಕೂಡಾ ಜಿಲ್ಲೆಯಿಂದ ರಫ್ತು ಮಾಡುತ್ತಿದ್ದು, ವಿದೇಶಿ ವ್ಯಾಪಾರ ನಿರ್ದೇಶನಾಲಯದ ಮಾಹಿತಿಯಂತೆ ಜಿಲ್ಲೆಯಲ್ಲಿ 230 ಮಂದಿ ರಫ್ತುದಾರರು ನೋಂದಣಿ ಮಾಡಿಕೊಂಡಿದ್ದು, ಈ ರಫ್ತುದಾರರ ವಿವಿಧ ಕುಂದು ಕೊರತೆಗಳ ಬಗ್ಗೆ ಜಿಲ್ಲಾ ಕೈಗಾರಿಕಾ ಇಲಾಖೆಯ ಮೂಲಕ ಸಮಾಲೋಚನೆ ನಡೆಸಲಾಗುತ್ತಿದೆ. ರಫ್ತು ಪ್ರಮಾಣದ ಹೆಚ್ಚಳಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ಜಂಟಿ ನಿರ್ದೇಶಕರು ತಿಳಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ಅಂತರ ಜಿಲ್ಲಾ ಬೈಕ್‌ ಕಳ್ಳರ ಬಂಧನ; 6 ಬೈಕ್ ವಶ

ಉತ್ತರ ಕನ್ನಡ ಜಿಲ್ಲೆಯಲ್ಲಿನ ರಫ್ತುದಾರರ ಮೂಲಕ ಇಲ್ಲಿನ ಉತ್ಪನ್ನಗಳನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡುವ ಕುರಿತಂತೆ ಕೈಗಾರಿಕೆ ಇಲಾಖೆಯ ಮೂಲಕ ಅಗತ್ಯವಿರುವ ಎಲ್ಲಾ ಪ್ರೋತ್ಸಾಹ ನೀಡಲಾಗುವುದು. ಇಲ್ಲಿನ ಉತ್ಪನ್ನಗಳಿಗೆ ಸೂಕ್ತ ರೀತಿಯಲ್ಲಿ ಉತ್ತಮ ಮಾರುಕಟ್ಟೆ ಒದಗಿಸುವ ಮೂಲಕ ಜಿಲ್ಲೆಯಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಯೋಜನೆ ರೂಪಿಸಲಾಗುವುದು ಎಂದು ಉ.ಕ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...