ಉತ್ತರ ಕನ್ನಡ | 13 ವರ್ಷಗಳಿಂದ ರಾಶಿ ಬಿದ್ದಿದ್ದ ಕಬ್ಬಿಣದ ಅದಿರು ಚೀನಾಗೆ ರಫ್ತು

Date:

ಕಾರವಾರ ಬಂದರಿನಲ್ಲಿ ರಾಶಿ ಹಾಕಿದ್ದ ಕಬ್ಬಿಣದ ಅದಿರು ಹದಿಮೂರು ವರ್ಷಗಳ ನಂತರ ಚೀನಾದತ್ತ ಸಾಗುತ್ತಿದೆ. 2010ರಲ್ಲಿ ಅಕ್ರಮವಾಗಿ ಅದಿರು ಸಾಗಾಟ ನಡೆಸುತ್ತಿದೆ ಎಂಬ ಆರೋಪದ ಮೇಲೆ ಬಂದರಿನ ಮೇಲೆ ದಾಳಿ ಮಾಡಿದ್ದ, ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅದಿರನ್ನು ಜಪ್ತಿ ಮಾಡಿದ್ದರು.

ಜಪ್ತಿ ಮಾಡಿದ್ದ 50,000 ಮೆಟ್ರಿಕ್ ಟನ್‌ ಅದಿರನ್ನು 18 ರಾಶಿಗಳಲ್ಲಿಡಲಾಗಿತ್ತು. ಆ ಅದಿರನ್ನು ಸುಪ್ರೀಂ ಕೋರ್ಟ್‌ ನಿರ್ದೇಶದ ಮೇಲೆ ಹರಾಜು ಹಾಕಲಾಗಿತ್ತು. ಹರಾಜು ಪ್ರಕ್ರಿಯೆಲ್ಲಿ16 ರಾಶಿಗಳು ಅಂದರೆ 37,320 ಮೆಟ್ರಿಕ್ ಟನ್ ಅದಿರನ್ನ ಮಂಗಳೂರಿನ ಗ್ಲೋರಿ ಶಿಪ್ಪಿಂಗ್ ಸಂಸ್ಥೆ ಪಡೆದುಕೊಂಡಿದೆ. ಆ ಅದಿರನ್ನು ಚೀನಾಗೆ ರಫ್ತು ಮಾಡುತ್ತಿದೆ.

ಉಳಿದ 2 ರಾಶಿ ಅಂದರೆ 12,680 ಮೆಟ್ರಿಕ್ ಟನ್ ಅದಿರನ್ನು ವೇದಾಂತ ಸೆಸೆಗೋವಾ ಕಂಪನಿ ಖರೀದಿಸಿದೆ. ಆದರೆ, ಕಂಪನಿಯು ಇನ್ನೂ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಆ ಎರಡು ರಾಶಿಗಳು ಬಂದರಿನಲ್ಲಿಯೇ ಉಳಿಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಾಜಿಗೆ 13 ವರ್ಷಗಳೇಕೆ?

ಕಾರವಾರ ಬಂದರಿನಲ್ಲಿ 2010ರವರೆಗೂ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿತ್ತು. ಆದರೆ, ಅಕ್ರಮವಾಗಿಯೂ ಅದಿರು ರಫ್ತಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ದೂರಿನ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಅದಿರನ್ನು ವಶಪಡಿಸಿಕೊಂಡಿದ್ದರು.

ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಕೋರ್ಟ್‌, ಕರ್ನಾಟಕದ ಅದಿರನ್ನು ಯಾವುದೇ ಕಾರಣಕ್ಕೂ ರಫ್ತು ಮಾಡಿಸುವಂತಿಲ್ಲವೆಂದು ಆದೇಶ ನೀಡಿತ್ತು. ಆದರೆ, ಬಂದರಿನಲ್ಲಿ ಅದಿರು ಹಾಳಾಗುತ್ತಿದೆ. ಗಾಳಿ-ಮಳೆಯಿಂದ ರಾಶಿ ಕರಗುತ್ತಿದೆ ಎಂದು ಆದೇಶವನ್ನು ಮರುಪರಿಶೀಲಿಸುವಂತೆ ಅಧಿಕಾರಿಗಳು ನ್ಯಾಯಾಲಯದಲ್ಲಿ ಕೋರಿದ್ದರು.

ಬಳಿಕ, 2020ರಲ್ಲಿ ತನ್ನ ಆದೇಶವನ್ನು ಹಿಂಪಡೆದ ಸುಪ್ರೀಂ ಕೋರ್ಟ್‌, ಹರಾಜು ಪ್ರಕ್ರಿಯೆ ನಡೆಸಲು ಅನುಮತಿ ನೀಡಿತ್ತು. ಉತ್ತರ ಕನ್ನಡ ಜಿಲ್ಲಾ ಟಾಸ್ಕಫೋಸ್೯ ಅದಿರನ್ನ ಹರಾಜು ಪ್ರಕ್ರಿಯೆಗೆ ಬಿಡ್‌ ಕರೆದಿತ್ತು. ಹಲವಾರು ಗೊಂದಲಗಳ ಬಳಿಕ ಅಂತಿಮವಾಗಿ ಹರಾಜು ಪ್ರಕ್ರಿಯೆ ಮುಗಿದಿದ್ದು, 13 ವರ್ಷಗಳಿಂದ ರಾಶಿ ಉಳಿದಿದ್ದ ಅದಿರು, ರಫ್ತಾಗಲು ಸಿದ್ದವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...