ಉತ್ತರ ಕನ್ನಡ | ಕೇಣಿ ಬಂದರು ಅಹವಾಲು ಸ್ವೀಕಾರ ಸಭೆ: ಹಣದ ಆಮಿಷವೊಡ್ಡಿ ಬೆಂಬಲ ಪಡೆಯುತ್ತಿರುವ ಆರೋಪ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ಉದ್ದೇಶಿತ ಖಾಸಗಿ ಬಂದರು ನಿರ್ಮಾಣ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದೆ. ಜನರ ತೀವ್ರ ವಿರೋಧದ ನಡುವೆಯೂ ಹಣದ ಆಮಿಷ ನೀಡಿ ಬೆಂಬಲ ಪಡೆಯಲು ಜೆಎಸ್‌ಡಬ್ಲ್ಯೂ ಕಂಪೆನಿ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.

ಅಂಕೋಲಾದ ಸತ್ಯಾಗ್ರಹ ಸ್ಮಾರಕ ಭವನದಲ್ಲಿ ನಡೆಯುತ್ತಿರುವ ಕೇಣಿ ಬಂದರು ಅಹವಾಲು ಸ್ವೀಕಾರ ಸಭೆಯಲ್ಲಿ ಜೆಎಸ್‌ಡಬ್ಲ್ಯೂ ಕಂಪೆನಿಯ ಹಾಗೂ ಅದರ ಬೆಂಬಲಿಗರ ಕೃತ್ಯಗಳು ಬಯಲಾಗಿದೆ. ₹4,118 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಂದರಿಗೆ ಬೆಂಬಲದ ಹೆಸರಿನಲ್ಲಿ ಹಣ ಹಂಚಿಕೆ ನಡೆದಿರುವುದು ತಿಳಿದುಬಂದಿದೆ.

ಬಂದರಿನ ಪರವಾಗಿ ನಿಲ್ಲಲು ಸ್ಥಳೀಯರನ್ನು ಮತ್ತು ಅಂಕೋಲಾದ ವಿವಿಧೆಡೆಯ ಜನರನ್ನು ಹಣದ ಆಮಿಷವೊಡ್ಡಿ ಕರೆಯಲಾಗಿದೆಯೆಂದು ಆರೋಪಿಸಿದ್ದು, ಕುಮಟಾ ಸೇರಿದಂತೆ ಹೊರಗಿನ ತಾಲೂಕುಗಳಿಂದಲೂ ಜನರನ್ನು ನಕಲಿ ಸಹಿಗಳೊಂದಿಗೆ ಸಹಿ ಅಭಿಯಾನಕ್ಕೆ ಕರೆಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂಪೆನಿಯ ಕುತಂತ್ರವನ್ನು ಅಂಕೋಲಾ ಜನರು ಸಾಕ್ಷಿ ಸಮೇತ ಮಾಧ್ಯಮದ ಮುಂದೆ ಬಯಲಿಗೆಳೆದಿದ್ದಾರೆ. ಬೊಗ್ರಿಬೈಲ್‌ನ ಮಹಿಳೆಯರಿಗೆ ಪ್ರೇಮಾ ಎಂಬ ಮಹಿಳೆ ಹಣದ ಆಮಿಷ ನೀಡಿ ಕರೆ ತಂದಿದ್ದಾಳೆಂಬ ದೂರೂ ಕೂಡ ಕೇಳಿಬಂದಿದೆ. ಇತರರಿಗೂ ತಲಾ ₹500 ನೀಡಿ ನೂರಾರು ಜನರನ್ನು ಸೇರಿಸಿದ ಆರೋಪವಿದೆ.

ಅಂಕೋಲಾದ ನಿವಾಸಿಯೆಂದು ಗುರುತಿಸಿಕೊಂಡು ಬಂದರು ಪರವಾಗಿ ಬಂದಿದ್ದ ಹಿರೇಗುತ್ತಿಯ ಯುವಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರ ಅಸಮಾಧಾನ ವ್ಯಕ್ತವಾಗುತ್ತಿದ್ದಂತೆ, “ಜಮೀನು-ಮನೆಗಳನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬಂದರೆ ನಮ್ಮ ಮಕ್ಕಳನ್ನು ಕರೆದುಕೊಂಡು ಬೀದಿಗಿಳಿದು ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಜಾನುವಾರುಗಳ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಜನರ ವಿರೋಧದ ನಡುವೆಯೂ ಬಂದರು ಪರವಾಗಿ ಸಹಿ ಪತ್ರ ಸಂಗ್ರಹಿಸುವ ಕಾರ್ಯ ಮುಂದುವರೆದರೆ, ಮುಖಂಡರು ಮತ್ತು ಕಂಪೆನಿ ಸಿಬ್ಬಂದಿಯ ವಿರುದ್ಧ ಜನರು ಕೈ ಎತ್ತುವುದಕ್ಕೂ ಹಿಂದೆ ಸರಿಯುವುದಿಲ್ಲವೆಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಬಂದರು ಪರ ನಕಲಿ ಸಹಿ ಹಾಕಿದ ಬೆಂಬಲಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...