​ಉತ್ತರ ಕನ್ನಡ | ಕಾಂಗ್ರೆಸ್‌ನಲ್ಲಿ ‘ಪತ್ರ ಸಮರ’: ಸಚಿವ ಮಂಕಾಳ ವೈದ್ಯಗೆ ಶಾಸಕ ಸತೀಶ್ ಸೈಲ್ ತಿರುಗೇಟು!

Date:

ಉತ್ತರ ಕನ್ನಡ: ಜಿಲ್ಲಾ ರಾಜಕೀಯದ ಇಬ್ಬರು ಪ್ರಭಾವಿ ನಾಯಕರಾದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಶಾಸಕ ಸತೀಶ್ ಸೈಲ್ ನಡುವಿನ ಶೀತಲ ಸಮರ ಈಗ ತಾರ್ಕಿಕ ಅಂತ್ಯದ ಬದಲು ‘ಪತ್ರ ಸಮರ’ದ ರೂಪ ಪಡೆದುಕೊಂಡಿದೆ.

ಕೆಡಿಪಿ ಸಭೆಯಲ್ಲಿ ಆರಂಭವಾದ ಅಸಮಾಧಾನ ಇದೀಗ ಜಿಲ್ಲಾ ವೈದ್ಯಾಧಿಕಾರಿಗಳ ಪತ್ರದ ಮೂಲಕ ಹೊಸ ತಿರುವು ಪಡೆದಿದೆ.

ಏನಿದು ಘಟನೆ? ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅವರು ಜಿಲ್ಲೆಯಲ್ಲಿ ಔಷಧಿಗಳ ಕೊರತೆಯ ಬಗ್ಗೆ ಧ್ವನಿ ಎತ್ತಿದ್ದರು. ಆದರೆ ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದ ಸಚಿವ ಮಂಕಾಳ ವೈದ್ಯ ಅವರು, “ಯಾವುದೇ ಔಷಧಿ ಕೊರತೆಯಿಲ್ಲ” ಎಂದು ವಾದಿಸಿದ್ದಲ್ಲದೆ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000579051

“ನಿಮ್ಮ ತಾಲೂಕಿನ ಸಮಸ್ಯೆ ಇದ್ದರೆ ತಾಲೂಕು ಮಟ್ಟದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಚರ್ಚಿಸಿ” ಎಂದು ಅಧಿಕಾರಿಗಳ ಮುಂದೆಯೇ ಸೈಲ್ ಅವರಿಗೆ ಸೂಚಿಸಿದ್ದರು. ಸಚಿವರ ಈ ವರ್ತನೆಯಿಂದ ಅಸಮಾಧಾನಗೊಂಡ ಶಾಸಕರ ಸಭೆಯಿಂದ ಅರ್ಧಕ್ಕೇ ಹೊರನಡೆದಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡಕ್ಕೆ ಬಜೆಟ್ ಬಂಪರ್: ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಘೋಷಣೆ

ಸಚಿವರಿಗೆ ಇಲಾಖೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂಬುದನ್ನು ಪರೋಕ್ಷವಾಗಿ ಸಾಬೀತುಪಡಿಸಲು ಶಾಸಕ ಸತೀಶ್ ಸೈಲ್ ಮುಂದಾಗಿದ್ದಾರೆ. ಕಾರವಾರದ ಹಳೆಯ ಜಿಲ್ಲಾ ಆಸ್ಪತ್ರೆಯು ಈಗ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ಯೊಂದಿಗೆ ವಿಲೀನಗೊಂಡಿದೆ. ಈ ತಾಂತ್ರಿಕ ಕಾರಣದಿಂದಾಗಿ ಕಾರವಾರದಲ್ಲಿ ಪ್ರತ್ಯೇಕ ತಾಲೂಕು ಆಸ್ಪತ್ರೆಯೇ ಇಲ್ಲ.

ಆಸ್ಪತ್ರೆ ಇಲ್ಲದ ಮೇಲೆ ‘ತಾಲೂಕು ಮಟ್ಟದ ಆರೋಗ್ಯ ರಕ್ಷಾ ಸಮಿತಿ’ ಅಸ್ತಿತ್ವದಲ್ಲಿರಲು ಹೇಗೆ ಸಾಧ್ಯ? ಎಂಬ ಸತ್ಯವನ್ನು ಶಾಸಕರು ಜಿಲ್ಲಾ ಆರೋಗ್ಯಾಧಿಕಾರಿಗಳ (DHO) ಮೂಲಕ ಅಧಿಕೃತ ಪತ್ರ ಬರೆಯಿಸಿ ಸಚಿವರಿಗೆ ತಲುಪಿಸಿದ್ದಾರೆ.

ಸಭೆಯಲ್ಲಿ “ನಾನು ಮಾಹಿತಿ ಇಲ್ಲದೆ ಮಾತನಾಡುವ ಅಂಗೂಟ ಛಾಪ್ ಅಲ್ಲ” ಎಂದು ಸೈಲ್ ಹೇಳಿದ್ದ ಮಾತುಗಳಿಗೆ ಪೂರಕವಾಗಿ ಈಗ ಈ ತಾಂತ್ರಿಕ ಮಾಹಿತಿಯ ಪತ್ರ ಬಿಡುಗಡೆಯಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಸಮಿತಿಯಲ್ಲಿ ಹೋಗಿ ಮಾತನಾಡಿ ಎಂದು ಹೇಳಿದ್ದ ಸಚಿವರಿಗೆ, ಸೈಲ್ ಅವರು ಸರಿಯಾದ ರೀತಿಯಲ್ಲೇ ತಾಂತ್ರಿಕ ಮಾಹಿತಿ ನೀಡಿ ಅರಿವು ಮೂಡಿಸಿದ್ದಾರೆ ಎಂಬ ಮಾತುಗಳು ಜಿಲ್ಲಾ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಒಟ್ಟಾರೆ, ಆಡಳಿತ ಪಕ್ಷದ ಇಬ್ಬರು ನಾಯಕರ ನಡುವಿನ ಈ ಮುಸುಕಿನ ಗುದ್ದಾಟ ಮತ್ತು ಪತ್ರ ಸಮರವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಕುತೂಹಲ ಮತ್ತು ಗೊಂದಲವನ್ನು ಸೃಷ್ಟಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...