ಉತ್ತರ ಕನ್ನಡ | ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸಿದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿಗಳ ಖಡಕ್ ಸೂಚನೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿ ವೈಟ್‌ಬೋರ್ಡ್ ಅಥವಾ ಖಾಸಗಿ ವಾಹನಗಳನ್ನು ಬಾಡಿಗೆ ಉದ್ದೇಶಕ್ಕಾಗಿ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ. ಟ್ಯಾಕ್ಸಿ ಚಾಲಕರು ಸಲ್ಲಿಸಿದ ದೂರಿನನ್ವಯ, ಅನೇಕ ಖಾಸಗಿ ವಾಹನಗಳು ಅನಧಿಕೃತವಾಗಿ ಪ್ರವಾಸಿಗರನ್ನು ಕರೆದೊಯ್ಯುತ್ತಿರುವುದು ಗಮನಕ್ಕೆ ಬಂದಿದೆ.

ಈ ಕುರಿತು ಫೋಟೋ ಸಹಿತ ಸಲ್ಲಿಕೆಯಾಗಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ಇಂತಹ ವಾಹನಗಳ ವಿರುದ್ಧ ತಕ್ಷಣವೇ ತನಿಖೆ ನಡೆಸಿ ದಂಡ ವಿಧಿಸುವಂತೆ ಸೂಚಿಸಿದರು.ಅಲ್ಲದೆ, ನಿಯಮ ಉಲ್ಲಂಘನೆ ಪುನರಾವರ್ತನೆಯಾದಲ್ಲಿ ಅಂತಹ ವಾಹನಗಳ ಲೈಸೆನ್ಸ್ ಅನ್ನು ಶಾಶ್ವತವಾಗಿ ರದ್ದುಗೊಳಿಸಲು ಸಾರಿಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ಇನ್ನು ಮುಂದೆ ಜಿಲ್ಲೆಯಲ್ಲಿ ವೈಟ್‌ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಅನಧಿಕೃತ ಟ್ಯಾಕ್ಸಿಗಳು, ಆಟೋಗಳು ಮತ್ತು ಬಾಡಿಗೆ ಬೈಕ್‌ಗಳ ವಿರುದ್ಧವೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ಸೂಚಕ: ಸಚಿವ ಮಂಕಾಳ ವೈದ್ಯ

ಆಟೋ ಮತ್ತು ಟ್ಯಾಕ್ಸಿ ನಿಲ್ದಾಣಗಳ ಸಮಸ್ಯೆ ಹಾಗೂ ಸಂಚಾರ ವ್ಯಾಪ್ತಿಯ ವಿಸ್ತರಣೆಯ ಕುರಿತು ಸ್ಥಳೀಯ ತಹಶೀಲ್ದಾರರು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಕರ್ನಾಟಕದ ವಾಯು ಮಾಲಿನ್ಯ ತಪಾಸಣಾ ಪತ್ರಕ್ಕೆ ಗೋವಾದಲ್ಲಿ ಮಾನ್ಯತೆ ನೀಡದ ಕುರಿತು ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು. ಜೊತೆಗೆ, ಟ್ಯಾಕ್ಸಿಗಳಲ್ಲಿನ ಪ್ಯಾನಿಕ್ ಬಟನ್ ಸಮಸ್ಯೆ ಹಾಗೂ ವಾಯು ಮಾಲಿನ್ಯ ಪತ್ರವನ್ನು ಆನ್‌ಲೈನ್‌ನಲ್ಲಿ ದಾಖಲಿಸುವ ವಿಷಯವನ್ನು ರಾಜ್ಯ ಸಾರಿಗೆ ಆಯುಕ್ತಾಲಯದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಜಿಲ್ಲೆಯ ಸುಮಾರು 400ಕ್ಕೂ ಅಧಿಕ ಹೊಸ ಮಾರ್ಗಗಳಲ್ಲಿ ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಆದರೆ, ದುರ್ಗಮ ರಸ್ತೆಗಳು ಮತ್ತು ಅಪಘಾತ ವಲಯಗಳಲ್ಲಿ (ಬ್ಲಾಕ್‌ಸ್ಪಾಟ್‌ಗಳು) ವಾಹನ ಚಾಲನೆ ಮಾಡುವಾಗ ಚಾಲಕರು ಅತ್ಯಂತ ಜಾಗರೂಕತೆಯಿಂದ ಇರಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ವಿವಿಧ ತಾಲೂಕುಗಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಆಟೋ-ಟ್ಯಾಕ್ಸಿ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...